ರಾಯಚೂರು | ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ಬೆಳ್ಳಿ ಹಬ್ಬಕ್ಕೆ ಚಾಲನೆ

Date:

ಮುನ್ನೂರುಕಾಪು ಸಮಾಜದಿಂದ ನಗರದ ರಾಜೇಂದ್ರ ಗಂಜ್ ಆವರಣದಲ್ಲಿ ಆಯೋಜಿಸಿದ ಮೂರು ದಿನಗಳ ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬವನ್ನು ಅತ್ಯಂತ ಅದ್ದೂರಿಯಾಗಿ ಚಾಲನೆ ದೊರೆಯಿತು.

ನಗರದಲ್ಲಿ ನಡೆಯಲಿರುವ ಮುಂಗಾರು ಸಾಂಸ್ಕೃತಿಕ ಅಂಗವಾಗಿ ಮೊದಲ ದಿನದ ಎತ್ತುಗಳಿಂದ ಭಾರವಾದ ಕಲ್ಲು‌ ಎಳೆಯುವ ಸ್ಪರ್ಧೆಯನ್ನು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಚಾಲನೆ ನೀಡಿದರು.

ಸಚಿವರಾದ ಎನ್ ಎಸ್ ಬೋಸರಾಜ್ ಮುಂಗಾರು ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ,ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹಿಸುವ ಚಟುವಟಿಗಳನ್ನು ನಿರಂತರವಾಗಿ ಮಾಡುವುದರ ಜೊತೆ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ 25 ವರ್ಷಗಳಿಂದ ಆಚರಿಸಿ ರೈತರನ್ನು ಹುರಿದುಂಬಿಸುತ್ತಿದೆ ಎಂದರು.

1000134697

ಈ ಭಾಗದ ಕಲೆ ಸಂಸ್ಕೃತಿ ಸಾಹಿತ್ಯ ಹಾಗೂ ಜಾನಪದ ಕ್ರೀಡೆಯನ್ನು ಹಬ್ಬದ ಮೂಲಕ ಅನಾವರಣಗೊಳಿಸಿ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದೆ. ನಗರದಲ್ಲಿ ಇತರೆ ಸಮಾಜಗಳು ಆಯೋಜಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಕಾರಣನಂತರಗಳಿಂದ ಅರ್ಧಕ್ಕೆ ಮೋಟಕುಗೊಳಿಸಲಾಗುತ್ತಿದೆ. ಆದರೆ ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡ ಹಬ್ಬದ ರೂವಾರಿ ಮಾಜಿ ಶಾಸಕ ಎ. ಪಾಪಾರೆಡ್ಡಿ ಮತ್ತು ಬೆಲ್ಲ ನರಸರೆಡ್ಡಿ ಅವರ ನೇತೃತ್ವದಲ್ಲಿ ನಡೆಯುವ ಮುಂಗಾರು ಬೆಳ್ಳಿ ಹಬ್ಬ ರಾಜ್ಯದಲ್ಲಿ ಮಾದರಿಯಾಗಿದೆ.3 ಕೋಟಿ ಅನುದಾನದಲ್ಲಿ ಬೋಳಮದೊಡ್ಡಿ ಏತ ನೀರಾವರಿ ಟೆಂಡರ್ ಆಹ್ವಾನಿಸಲಾಗಿದೆ. ಲಿಫ್ಟ್ ಏರಿಗ್ರೇಷನ್ ನಡೆಯುತ್ತಿದ್ದು ಕಾಮಗಾರಿ ಪೂರ್ಣಗೊಂಡ ನಂತರ16 ಸಾವಿರ ಎಕರೆ ಪ್ರದೇಶದ ರೈತರಿಗೆ ಅನುಕೂಲವಾಗಲಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅವಮಾನ ಹೇಳಿಕೆ ನಾರಾಯಣಸ್ವಾಮಿ ,ಎನ್ ರವಿಕುಮಾರ ಸದಸ್ಯತ್ವ ರದ್ದತಿಗೆ ಡಿಎಸ್ಎಸ್ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಮಾತನಾಡಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ರೈತರಗೋಸ್ಕರ ಹಾಗೂ ರೈತರಿಗೆ ಕೃಷಿ ಚಟುವಟಿಕೆಯಲ್ಲಿ ತೋಡುಗುವಂತೆ ಮಾಡುತ್ತಿರುವ ಯಾವುದಾದರು ಇದ್ದಾರೆ ಅದು ಮುನ್ನೂರು ಕಾಪು ಸಮಾಜ. ಇದರ ಶ್ರೇಯಸ್ಸು ಹಬ್ಬದ ರೂವಾರಿ ಎ. ಪಾಪಾರೆಡ್ಡಿ ಅವರಿಗೆ ಸಲ್ಲುತ್ತದೆ ಎಂದರು. ಮುನ್ನೂರು ಕಾಪು ಸಮಾಜದ ಅಭಿವೃದ್ಧಿಗೆ ಅವರ ಕೊಡುಗೆ ಅಪಾರ ಇದೇ. ಪಾಪಾರೆಡ್ಡಿ ಅವರು ಸಮಾಜದ ಮುತ್ತು ರತ್ನ ಎಂದರು.

ಈ ಸಂದರ್ಭದಲ್ಲಿ ವೀರತಪಸ್ವಿ ಅಭಿನವ ರಾಚೋಟಿ ಮಹಾಸ್ವಾಮಿಗಳು ಸೋಮವಾರಪೇಟೆ ಮಠ, ಮಲ್ಲಿಕಾರ್ಜುನ ಸ್ವಾಮೀಜಿಗಳು,ಮಹಾನಗರ ಪಾಲಿಕೆ ಮಹಾಪೌರ ನರಸಮ್ಮ ನರಸಿಂಹಲು ಮಾಡಗಿರಿ, ಹಬ್ಬದಲ್ಲಿ ಪಾಲ್ಗೊಂಡ ವೀಕ್ಷಿಸಿದರು ,ಮಾಜಿ ಶಾಸಕರು ಹಾಗೂ ಹಬ್ಬದ ರೂವಾರಿ ಎ.ಪಾಪಾರೆಡ್ಡಿ, ಮುನ್ನೂರುಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಕಾರ್ಯದರ್ಶಿ ವಿ.ಕೃಷ್ಣಮೂರ್ತಿ, ಎನ್ ಶಂಕ್ರಪ್ಪ, ಜಯವಂತರಾವ್ ಪತಂಗಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಪಾಲಿಕೆ ಉಪಾಧ್ಯಕ್ಷ ಸಾಜೀದ್ ಸಮೀರ್, ಮಹ್ಮಮದ್ ಶಾಲಂ,ಗದರ್ ಬೆಟ್ಟಪ್ಪ, ಮುನ್ನೂರು ಕಾಪು ಸಮಾಜದ ಮುಖಂಡರು ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...