ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಗ್ರಾಮದ ಕುಪ್ಪಿ ಭೀಮದೇವರ ರಥೋತ್ಸವಕ್ಕೆ ಗ್ರಾಮದ ಮುಸ್ಲಿಂಮರು 2 ಲಕ್ಷ ರೂ ಹಣ ದೇಣಿಗೆ ನೀಡಿ ಭಾವೈಕ್ಯತೆ ಮೆರೆದಿದ್ದಾರೆ.
ಗ್ರಾಮದ ಕುಪ್ಪಿಭೀಮ ದೇವರ ರಥೋತ್ಸವಕ್ಕೆ 100 ವರ್ಷ ತುಂಬಿದ್ದರಿಂದ ಡಿಸೆಂಬರ್ನಲ್ಲಿ ನಡೆಯುವ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲು ಗ್ರಾಮದ ಮುಖಂಡರು ತೀರ್ಮಾನಿಸಿದ್ದರು. ಗ್ರಾಮದ ಎಲ್ಲ ಸಮುದಾಯದಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ. ಮುಸ್ಲಿಂ ಸಮುದಾಯದ ಮುಖಂಡರು ಒಟ್ಟಿಗೆ ಸೇರಿ ಪರಸ್ಪರ ದೇಣಿಗೆ ಸಂಗ್ರಹಿಸಿ ಎರಡು ಲಕ್ಷ ರೂಪಾಯಿ ದೇಣಿಗೆ ಸಂಗ್ರಹಿಸಿ ದೇವಸ್ಥಾನದ ಸಮಿತಿ ಕಾರ್ಯದರ್ಶಿಗೆ ನೀಡಿದ್ದಾರೆ.
ಮುಸ್ಲಿಂ ಸಮಾಜದ ಈ ಕಾರ್ಯಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದಿನ ಕಲುಷಿತ ಸಮಾಜದಲ್ಲಿ ಹಲವೆಡೆ ಹಿಂದೂ ಮುಸ್ಲಿಂ ಕಲಹ, ರಾಜಕೀಯ ನಾಯಕರ ಮಾತಿಗೆ ಆಸ್ಪದ ನೀಡಿ ಪರಸ್ಪರ ಕಿತ್ತಾಡುವವರ ಮಧ್ಯೆ ರಥೋತ್ಸವಕ್ಕೆ ದೇಣಿಗೆ ನೀಡುವ ಮೂಲಕ ಸೌಹಾರ್ದ ಸಂದೇಶ ನೀಡಿ ತಕ್ಕ ಉತ್ತರ ಕೊಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬೈಕ್ ತಡೆದು ನಾಲ್ಕು ಲಕ್ಷ ದೋಚಿ ಪರಾರಿ
ಈ ವೇಳೆ ಅಲ್ಲಾಸಾಬ ಬಾಗವಾನ್, ಯೂಸುಫ್ ಡ್ರೈವರ್, ಬಂದೇನವಾಜ್, ಖಾಜಾಸಾಬ್ ಬಾಗವಾನ್, ಖಾಜಾಸಾಬ್ ಸುಬಾನ್, ಬಾಗವಾನ್, ರಾಮಯ್ಯ ಗುತ್ತೇದಾರ, ಸೂಗಯ್ಯ ಸ್ವಾಮಿ ಅತ್ತನೂರು, ಅಮರೇಶ ಹೊರಪೇಟಿ, ರಮೇಶ್ ತಲೆವಡಕರ, ಕುಪ್ಪನಗೌಡ ಮೇಲ್ಮನೆ, ಸೇರಿದಂತೆ ಊರಿನ ಗಣ್ಯರು ಉಪಸ್ಥಿತರಿದ್ದರು.





