ರಾಯಚೂರು | ಗುತ್ತಿಗೆದಾರರ ಬಾಕಿ ಹಣ ಪಾವತಿಸದೇ ಇದ್ದರೆ ಹೋರಾಟ; ನಾಗಪ್ಪ ಗಿರಣಿ ಎಚ್ಚರಿಕೆ

Date:

ಹಿಂದಿನ ಬಿಜೆಪಿ ಸರ್ಕಾರದಂತೆ ಕಾಂಗ್ರೆಸ್ ಸರ್ಕಾರವೂ ಕೂಡ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸದೇ ಅನ್ಯಾಯ ಮಾಡುತ್ತಿರುವುದನ್ನು ಅನ್ಯಾಯ ಖಂಡಿಸಿ 15 ದಿನಗಳ ನಂತರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಾಗಪ್ಪ ಗಿರಣಿ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಜಿಲ್ಲೆಯಲ್ಲಿ ಸರಿ ಸುಮಾರು ₹300 ಕೋಟಿಯಿಂದ ₹500 ಕೋಟಿಯಷ್ಟು ಬಾಕಿ ಹಣವನ್ನು ಗುತ್ತಿಗೆದಾರರಿಗೆ ಪಾವತಿ ಮಾಡಬೇಕು. ಆದರೆ ರಾಜ್ಯದ ಮುಖ್ಯಮಂತ್ರಿಯವರು ಬಾಕಿಬಿಲ್ ಪಾವತಿಸುವಂತೆ ಸೂಚಿಸಿದ್ದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಧಿಕೃತ ಆದೇಶ ನೀಡದ ಹೊರತು ಬಿಲ್ ಪಾವತಿಸುವುದಿಲ್ಲವೆಂದು ಹೇಳುತ್ತಿದ್ದಾರೆ. ಸಾಲ ಮಾಡಿ ಗುತ್ತಿಗೆ ಕೆಲಸ ಮಾಡುವ ಗುತ್ತಿಗೆದಾರರನ್ನು ಎಲ್ಲ ಸರ್ಕಾರಗಳು ಸಾಲಗಾರರನ್ನಾಗಿಸಿವೆ. ಕೆಕೆಆರ್‌ಡಿಬಿ ಒಂದರಲ್ಲಿಯೇ ₹1,957 ಕೋಟಿ ಬಾಕಿಯಿದೆ. ರಾಜ್ಯಾದ್ಯಂತ 47 ಸಾವಿರ ಕೋಟಿ ರೂ. ಬಾಕಿಯಿದೆ. ಹಿಂದಿನ ಬಿಜೆಪಿ ಸರ್ಕಾರವೂ ಗುತ್ತಿಗೆದಾರರರಿಗೆ ಬಾಕಿ ಹಣ ನೀಡದೇ ನಿರ್ಲಕ್ಷವಹಿಸಿತ್ತು” ಎಂದು ಆರೋಪಿಸಿದರು.

“ಕಾಂಗ್ರೆಸ್ ಸರ್ಕಾರ ಬಿಟ್ಟಿ ಯೋಜನೆಗಳನ್ನು ರೂಪಿಸಿ ಜಾರಿಯಲ್ಲಿ ತೊಡಗಿದೆ. ಹಣಹಾಕಿ ಮಾಡಿದ ಗುತ್ತಿಗೆದಾರರನ್ನು ಕಡೆಗಣಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ಬಿಬಿಎಂಪಿ ಗುತ್ತಿಗೆದಾರರಿಗೆ ಬಾಕಿ ಹಣ ನೀಡದೇ ಇರುವುರಿಂದ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಸರ್ಕಾರವೇ ಹೊಣೆಯಾಗಿದೆ. ಉಪ ಮುಖ್ಯಮಂತ್ರಿ ಡಿ ಕೆ ಶಿವುಕುಮಾರ್ ಅವರು ಗುತ್ತಿಗೆದಾರರ ಕುರಿತು ಅಹಂಕಾರವಾಗಿ ಮಾತನಾಡಿರುವುದು ಖಂಡನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಆಟೋ ಚಾಲಕರ ನಿಗಮ ಮಂಡಳಿ ರಚನೆಗೆ ಒತ್ತಾಯ

ಎಲ್ಲ ಶಾಸಕರು ಗುತ್ತಿಗೆದಾರರಾಗಿಯೇ ಶಾಸಕರು, ಸಚಿವರುಗಳಾಗಿದ್ದಾರೆ. ಗುತ್ತಿಗೆದಾರರ ಸಮಸ್ಯೆ ಏನು ಎಂದು ಗೊತ್ತಿದ್ದರೂ ಬಿಲ್ ಪಾವತಿಸುತ್ತಿಲ್ಲ. ಕೂಡಲೇ ಬಾಕಿಯಿರುವ ಬಿಲ್ ಪಾವತಿಗೆ ಮುಂದಾಗಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ, ಆಂಜಿನಯ್ಯ, ಸುರೇಶ ಹೊಸೂರು, ವೀರಯ್ಯ ಸ್ವಾಮಿ ಆಶಾಪುರು, ಡಿ.ರವೀಂದ್ರ ನಾಯಕ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...