ರಾಯಚೂರು | ನಾರಾಯಣಪುರ ಬಲದಂಡೆ ಕಾಲುವೆಗೆ ಬಸಿನೀರು ಹರಿಸಲು ರೈತರ ಆಗ್ರಹ

Date:

ನಾರಾಯಣಪುರ ಬಲದಂಡೆ ಕಾಲುವೆಗೆ ಪ್ರತಿ ವರ್ಷ ಬಸಿನೀರು ಹರಿಯುತ್ತಿತ್ತು ಈ ವರ್ಷ ಏಕಾಏಕಿ ಬಂದ ಮಾಡಿರುವುದರಿಂದ ಕೇಳ ಭಾಗದ ರೈತರಿಗೆ ಹಾಗೂ ಜಾನುವಾರುಗಳಿಗೆ ತುಂಬಾ ಸಮಸ್ಯೆ ಉಂಟಾಗಿದೆ ತಕ್ಷಣ ನೀರು ಹರಿಸಬೇಕು ಎಂದು ಲಿಂಗಸುಗೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

1995 ರಿಂದ ನಾರಾಯಣಪೂರ ಬಲದಂಡೆ ಕಾಲುವೆಗೆ ಬಸಿನೀರು ಬರುತಿತ್ತು.ಈ ಭಾಗದ ಕೆಳ ಭಾಗದ ರೈತರಿಗೆ ಬಸಿನೀರಿಂದ ಹಲವು ರೀತಿಯ ವ್ಯವಸಾಯ ಚಟುವಟಿಕೆಗೆ ಉಪಯೋಗವಾಗುತ್ತಿತ್ತು. ಈ ಬಾರಿ ಏಕಾಏಕಿ ಬಸಿನೀರು ಮಾಡಿದ್ದರಿಂದ ಸಮಸ್ಯೆ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಲಿಂಗಸುಗೂರು ಹೋಬಳಿಯ ರೋಡಲಬಂಡಾ, ಹಿರೇಜಾವೂರು, ಮೇಲಿನಗಡ್ಡಿ, ಜಂಗಿನಗಡ್ಡಿ, ಜಂಗಿರಾಂಪೂರುತಾಂಡ, ಹಾಲಭಾವಿ, ಚಿಕ್ಕ ಉಪ್ಪೇರಿ, ಗೋರೆಬಾಳ ತಾಂಡ, ಕಾಳಾಪೂರು, ಹಳ್ಳಿ, ದೊಡ್ಡಿ, ತಾಂಡಗಳಲ್ಲಿ ಹಾಗೂ ಗುರುಗುಂಟಾ ಹೋಬಳಿಯ ದೇವರಭೂಪರು, ರಾಯದುರ್ಗ, ಟಣಮಕಲ್, ಐದಭಾವಿ, ಗೌಡೂರು, ಚೆಂಚಲದೊಡ್ಡಿ ಹಳ್ಳಿ, ದೊಡ್ಡಿ, ತಾಂಡ ಸೇರಿ ಇನ್ನಿತರ ಸಣ್ಣ ಪುಟ್ಟ ಗ್ರಾಮದಲ್ಲಿ ಇದೆ ನೀರು ಆಸರೆಯಾಗಿತ್ತು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮೇ 17,18 ರಂದು ಸಿಂಧನೂರಿನಲ್ಲಿ ಮೇ ಸಾಹಿತ್ಯ ಮೇಳ

ಕಳೆದ ಒಂದು ತಿಂಗಳ ಹಿಂದೆ ಏಕಾಏಕಿ ಕಾಲುವೆ ಬಸಿನೀರು ನಿಲ್ಲಿಸಿದ್ದರಿಂದ ಸಮಸ್ಯೆ ಎದುರಾಗಿದೆ.ಇಲಾಖೆ ಅಧಿಕಾರಿಗಳು ಇತ್ತಕಡೆ ಗಮನ ಹರಿಸಿ ನಾರಾಯಣಪೂರ ಬಲದಂಡೆ ಕಾಲುವೆಗೆ ಬಸಿನೀರು ಬಿಡಬೇಕು. ಒಂದು ವಾರದೊಳಗೆ ಕಾಲುವೆ ಬಸಿನೀರು ಬಿಡದಿದ್ದರೆ, ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ರೈತ ಮುಖಂಡ ಶಿವಪುತ್ರಗೌಡ , ಬಸವರಾಜ್ ಅಂಗಡಿ , ಹನುಮನ ಗೌಡ ,ದುರ್ಗಾಪ್ರಸಾದ , ಭೀಮನಗೌಡ ,ತಿಮ್ಮನಗೌಡ , ರಂಜಾನ್ ಸಾಬ್ ,ಶಂಕ್ರಪ್ಪ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...