ರಾಯಚೂರು | ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಚಿವ ಬೋಸರಾಜು

Date:

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಪೊಲೀಸರು ತನಿಖೆ ನಡೆಸುತಿದ್ದಾರೆ. ಬಿಜೆಪಿಯವರು ರಾಜಕೀಯಕರಣಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.

ರಾಯಚೂರು ನಗರದಲ್ಲಿ ಅವರನ್ನು ಭೇಟಿಯಾದ ಮಾಧ್ಯಮಗಳೊಂದಿಗೆ ಮಾತನಾಡಿ, “ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರೇ ಪಾಕಿಸ್ತಾನ ಪರವಾಗಿ ಘೋಷಣೆ ಮಾಡಿದ್ದಾಗ ಏಕೆ ಕ್ರಮ ಕೈಗೊಳ್ಳಲಿಲ್ಲ. ಸರ್ಕಾರ ಘಟನೆಯನ್ನು ತನಿಖೆಗೆ ವಹಿಸಿ ಈಗಾಗಲೇ ಮೂರು ಜನರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಪರ ಕ್ರಮ ಕೈಗೊಳ್ಳಬೇಕೆನ್ನುವುದು ಅರ್ಥವಿಲ್ಲದ್ದು. ಮಂಡ್ಯದಲ್ಲಿ ಬಿಜೆಪಿಯವರು ಪಾಕಿಸ್ತಾನ ಪರ ಘೋಷಣೆ ಮಾಡಿದಾಗ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ಕೊಡಬೇಕೆಂದು ಒತ್ತಾಯ ಮಾಡಬೇಕಾಗುತ್ತದೆ? ಹೆಸರಗಳನ್ನು ಬಹಿರಂಗಪಡಿಸಲು ಆಗುತ್ತಾ” ಎಂದು ಪ್ರಶ್ನಿಸಿದರು.

ರಾಯಚೂರು ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಯಾರು ಎಂಬದನ್ನು ಪಕ್ಷದ ವರಿಷ್ಟರು ನಿರ್ಧರಿಸಲಿದ್ದಾರೆ. ಈಗಾಗಲೇ ಐದು ಜನರ ಹೆಸರುಗಳನ್ನು ಕೆಪಿಸಿಸಿ ಕಳುಹಿಸಲಾಗಿದೆ. ಕೇಂದ್ರೀಯ ಸಮಿತಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾರಾಗುತ್ತಾರೆಂದು ಈಗಲೇ ಹೇಳಲು ಆಗುವುದಿಲ್ಲ. ಪಕ್ಷದ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಸಮೀಕ್ಷೆಯನ್ನೂ ನಡೆಸಲಾಗುತ್ತಿದೆ. ಪಕ್ಷದ ವರಿಷ್ಟರು ಅಂತಿಮಗೊಳಿಸಲಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯೂ ನಡೆಯಲಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅಗತ್ಯ ಕ್ರಮಕ್ಕೆ ಸೂಚಿಸಲಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಎಲ್ಲ ಡಿಸಿ, ಸಿಇಒಗಳೊಂದಿಗೆ ಸಭೆ ನಡೆಸಲಾಗಿದೆ. ₹851 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಜಲಾಶಯಗಳಲ್ಲಿ ಲಭ್ಯವಿರುವ ನೀರು ಬಳಸಿಕೊಂಡು ಕೆರೆ ತುಂಬುವ ಕೆಲಸ ನಡೆಸಲು ಸೂಚಿಸಲಾಗಿದೆ” ಎಂದು ತಿಳಿಸಿದರು.

“ತಹಶೀಲ್ದಾರರ ಖಾತೆಗೆ ಹಣ ಜಮಾಮಾಡಲಾಗಿದ್ದು, ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಎನ್‌ಡಿಆರ್‌ಎಫ್ ನಿಯಮದಂತೆ ಹೊಸ ಕೊಳವೆ ಭಾವಿ ಕೊರೆಯಲು ಅವಕಾಸವಿಲ್ಲ. ತುಂಗಭದ್ರಾ ಮತ್ತು ನಾರಾಯಣಪುರು ಜಲಾಶಯಗಳಿಂದ ಕುಡಿಯುವ ನೀರಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ. ಅಧಿಕಾರಿಗಳ ತಂಡ ರಚಿಸಿ ಕೆಳಹಂತದಲ್ಲಿ ನಿಗಾವಹಿಸಲೂ ಕೂಡ ಸೂಚಿಸಲಾಗಿದೆ” ಎಂದರು.

ಶೇ.70ರಷ್ಟು ಜನರಿಗೆ ನದಿ ನೀರು ಒದಗಿಸಲಾಗುತ್ತದೆ. ಉಳಿದ ಶೇ.20ರಷ್ಟು ಜನರಿಗೆ ತ್ವರಿತವಾಗಿ ಕುಡಿಯುವ ನೀರು ಒದಗಿಸಲು ಸೂಚಿಸಲಾಗಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗಲಿದ್ದು, ನಿಗಾವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕಾಲುವೆ ನೀರು ದುರ್ಬಳಕೆ ತಡೆಯಲು ವಿದ್ಯುತ್ ಕಡಿತಗೊಳಿಸಿ ಜಲಾಶಯ, ಕೆರೆಗಳ ಭರ್ತಿಗೆ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಶೇ.60ರಷ್ಟು ಕನ್ನಡ ನಾಮಫಲಕ ಕಡ್ಡಾಯ: ಜಿಲ್ಲಾಧಿಕಾರಿ

ಈ ಸಂದರ್ಭದಲ್ಲಿ ನಗರಸಭೆಯ ಹಿರಿಯ ಸದಸ್ಯ ಜಯಣ್ಣ, ಕೆ ಶಾಂತಪ್ಪ, ಜಿ ಶಿವಮೂರ್ತಿ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...