ರಾಯಚೂರು | ಶಾಲಾ ಮಕ್ಕಳಿಗೆ ಹಳೆ ವಿದ್ಯಾರ್ಥಿಗಳಿಂದ ಸಮವಸ್ತ್ರ ವಿತರಣೆ

Date:

ಅರಕೇರಾ ತಾಲ್ಲೂಕಿನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘವು ಸಮವಸ್ತ್ರಗಳನ್ನು ವಿತರಿಸುವ ಮೂಲಕ ವಿಶೇಷ ಗಮನ ಸೆಳೆದಿದೆ.

ಗ್ರಾಮದ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಮಕ್ಕಳ ಉತ್ಸಾಹವನ್ನು ಹೆಚ್ಚಿಸಲು ಹಾಗೂ ಶೈಕ್ಷಣಿಕ ಹಾದಿಯಲ್ಲಿ ಒಗ್ಗೂಡಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಗ್ರಾಮದ ಗಣ್ಯರು ಭಾಗವಹಿಸಿದ್ದರು.

ಕಾರ್ಯಕ್ರಮ ಉದ್ದೇಶಿಸಿ ಶಾಲೆಯ ಮುಖ್ಯೋಪಾಧ್ಯಯರಾದ ಬಸವರಾಜ ಸ್ವಾಮಿ ಮಾತನಾಡಿ, ಗ್ರಾಮದ ಹಳೆಯ ವಿಧ್ಯಾರ್ಥಿ ಬಳಗದ ಮುಂದಾಳತ್ವದಿಂದ ಶಾಲೆಯ ಅಭಿವೃದ್ಧಿ ಹಾಗೂ ಶಿಕ್ಷಣ ಗುಣಮಟ್ಟ ಹೆಚ್ಚುತ್ತಿದೆ. ಹಿಂದೆಯು ಶಾಲೆಯ ಸ್ವಚ್ಛತೆ, ಆರೋಗ್ಯ, ಪರಿಸರ ಮತ್ತು ಶಾಲೆಯ ಏಳಿಗೆಗಾಗಿ ಬಹಳಷ್ಟು ಕಾಳಜಿ ತೋರಿಸಿ ಶಾಲೆಯ ಕುಂದು ಕೊರತೆಗಳಿಗೆ ಸಹಕಾರ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಶಾಲೆಯ 40 ಮಕ್ಕಳಿಗೆ ಸಮವಸ್ತ್ರ ವಿತರಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಅಗತ್ಯವಿದ್ದು, ಈ ರೀತಿಯ ಕಾರ್ಯಗಳು ಮಕ್ಕಳ ಶಿಕ್ಷಣದಲ್ಲಿ ಉತ್ಸಾಹವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ

ಈ ವೇಳೆ ಶಾಲೆಯ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು, ಗ್ರಾಮದ ಮುಖಂಡರು ಇನ್ನಿತರರು ಉಪಸ್ಥಿತರಿದ್ದರು.

1000168951
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...