ರಾಯಚೂರು | ಗ್ಯಾರಂಟಿ ಯೋಜನೆಗಳ ಅರ್ಥ ತಿಳಿಯದವರು ಮಾತ್ರ ಅದರ ವಿರುದ್ಧ ಮಾತನಾಡುತ್ತಾರೆ — ಪಾಮಯ್ಯ ಮುರಾರಿ

Date:

ಗ್ಯಾರಂಟಿ ಯೋಜನೆಗಳ ಕುರಿತು ಕೆಲವರು ಕೀಳಾಗಿ ಮಾತನಾಡುತ್ತಿರುವುದು, ಅವರಿಗೆ ಈ ಯೋಜನೆಗಳ ನಿಜವಾದ ಉದ್ದೇಶ ಮತ್ತು ಪ್ರಯೋಜನಗಳ ಬಗ್ಗೆ ಅರಿವಿಲ್ಲದ ಕಾರಣ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಪಾಮಯ್ಯ ಮುರಾರಿ ಹೇಳಿದರು.

ಮಸ್ಕಿ ತಾಲ್ಲೂಕಿನ ಮುಟ್ಟೂರು ಗ್ರಾಮದಲ್ಲಿ ನಡೆದ “ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಬಡವರ ಬದುಕು, ಹಸಿವಿನ ತೀವ್ರತೆ ಏನು ಎನ್ನುವುದೇ ಗೊತ್ತಿಲ್ಲದವರಿಗೆ ಗ್ಯಾರಂಟಿ ಯೋಜನೆಗಳ ಅಗತ್ಯತೆ ಅರ್ಥವಾಗುವುದಿಲ್ಲ. ನಮ್ಮ ಪಕ್ಷ ಸದಾ ಮಹಿಳೆಯರ ಸಬಲೀಕರಣಕ್ಕಾಗಿ ಹಾಗೂ ಬಡವರು ಆರ್ಥಿಕವಾಗಿ ಸದೃಢರಾಗಬೇಕೆಂಬ ಉದ್ದೇಶದಿಂದ ಕೆಲಸ ಮಾಡುತ್ತಿದೆ,” ಎಂದು ಅವರು ಹೇಳಿದರು.

“ಗ್ಯಾರಂಟಿ ಯೋಜನೆಗಳ ಜೊತೆಗೆ ಇಂದಿರಾ ಕಿಟ್ ಯೋಜನೆಯನ್ನೂ ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಇದು ಬಡ ಕುಟುಂಬಗಳಿಗೆ ನೇರ ಸಹಾಯವನ್ನು ನೀಡುವ ಯೋಜನೆಯಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಒಂದೇ ದಿನ 25 ಜನರ ಮೇಲೆ ಬೀದಿ ನಾಯಿಗಳ ದಾಳಿ — ಆಸ್ಪತ್ರೆಗೆ ದಾಖಲು

ಈ ವೇಳೆ ಶಾಸಕ ಬಸನಗೌಡ ತುರುವಿಹಾಳ, ಮೆಹಬೂಬ್ ಮುದ್ದಾಪುರ, ನಾಗರತ್ನ, ತಹಶೀಲ್ದಾರ್ ಮಂಜುನಾಥ ಭೋಗಾವತಿ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...