ರಾಯಚೂರು | ಮಸೀದಿ ಆವರಣದಲ್ಲಿದ್ದ ಅನಧಿಕೃತ ಮನೆ, ಅಂಗಡಿ ತೆರವು

Date:

ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಹಾಷ್ಮೀಯಾ ಮಸೀದಿಯ ಆವರಣದಲ್ಲಿ ಅನಧಿಕೃತವಾಗಿ ವಾಸವಿದ್ದ ನಿವಾಸಿಗಳನ್ನು ಹಾಗೂ ವ್ಯಾಪಾರ ಮಳಿಗೆಗಳನ್ನು ಬುಧುವಾರ ಕೋರ್ಟ್ ಆದೇಶದಂತೆ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.

ಮೇ.13 ರಂದು ವಕ್ಫ್ ನ್ಯಾಯಾಲಯದಿಂದ ಕರ್ನಾಟಕ ಸಾರ್ವಜನಿಕ ಆಸ್ತಿ(ಅನಧೀಕೃತ ನಿವಾಸಿಗಳ ತೆರವು) ಅಧಿನಿಯಮ 1974ರ ಸೆಕ್ಷನ್ 5(2) ರನ್ವಯ ಹಾಷ್ಮೀಯಾ ಮಸೀದಿಯ ಆವರಣದಲ್ಲಿ ಅಥವಾ ಆಸ್ತಿಯಲ್ಲಿ ವಾಸವಿರುವ ಅಥವಾ ವ್ಯಾಪಾರ ಮಾಡುತ್ತಿರುವ ಅನಧಿಕೃತ ಮನೆಗಳು ಹಾಗೂ ಅಂಗಡಿಗಳನ್ನು ತೆರವುಗೊಳಿಸಿ ಎಂದು ಆದೇಶ ಹೊರಡಿಸಿದ್ದರು.

1000124545

ಆದೇಶದನ್ವಯ ಸಹಾಯಕ ಆಯುಕ್ತ ಗಜಾನನ ಬಾಲೆ, ತಹಸೀಲ್ದಾರ್ ಸುರೇಶ ವರ್ಮಾ, ಜಿಲ್ಲಾ ವಕ್ಫ್ ಅಧಿಕಾರಿಗಳು ಹಾಗೂ ವಕ್ಫ ಬೋರ್ಡ ಅಧ್ಯಕ್ಷ ಮೌಲಾನಾ ಪರೀದ್ ಖಾನ್ ನೇತೃತ್ವದಲ್ಲಿ ತೆರೆವು ಪ್ರಕ್ರಿಯೆ ಆರಂಭವಾಗಿ ಅನಧೀಕೃತವಾಗಿ ನಿರ್ಮಿಸಲಾಗಿದ್ದ 31 ಕ್ಕೂ ಹೆಚ್ಚಿನ ಮನೆಗಳಲ್ಲಿ 8 ಮನೆಗಳಲ್ಲಿ ಜನರು ವಾಸವಿದ್ದರು. ಇದಲ್ಲದೇ 25 ಕ್ಕೂ ಹೆಚ್ಚಿನ ಅಂಗಡಿಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.

15 ಕ್ಕೂ ಹೆಚ್ಚು ಜೆಸಿಬಿಗಳನ್ನು ತೆರವು ಕಾರ್ಯಾಚರಣೆಗೆ ಬಳಸಿಕೊಳ್ಳಲಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತೆರವು ಕಾರ್ಯಾಚರಣೆ ವೇಳೆ ಕೆಲವು ನಿವಾಸಿಗಳು ಹಾಗೂ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿಯೂ ಕೂಡ ನಡೆಯಿತು. ತೆರವುಗೊಳಿಸುವ ಬಗ್ಗೆ ಮೊದಲು ನೋಟಿಸ್ ನೀಡಿಲ್ಲ ಎಂಬುದು ಅಲ್ಲಿನ ನಿವಾಸಿಗಳು ಮತ್ತು ವ್ಯಾಪಾರಸ್ಥರ ವಾದವಾದರೆ, ನೋಟಿಸ್ ನೀಡಲಾಗಿದೆ ಎಂಬುದು ಅಧಿಕಾರಿಗಳ ಪ್ರತಿವಾದವಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಯಚೂರು |ಕೆಸರಲ್ಲಿ ಬಸ್ ಸಿಲುಕಿ ; ಪ್ರಯಾಣಿಕರ ಪರದಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿನ್ನಲೆ
1989 ರ ಹಿಂದಿನಿಂದಲೂ ಹಾಷ್ಮೀಯಾ ಮಸೀದಿಗೆ ಸೇರಿದ ಆಸ್ತಿಯಲ್ಲಿ ನಿವಾಸಿಗಳು ವಾಸವಿದ್ದರು. ಅದಾದ ನಂತರ ಹಾಷ್ಮೀಯಾ ಮಸೀದಿಯಿಂದ ಅನಧಿಕೃತ ನಿವಾಸಿಗಳನ್ನು ತೆರವುಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು.ಅಂದಿನ ನ್ಯಾಯಾಧೀಶರು 1989 ರಲ್ಲಿ ತೆರವುಗೊಳಿಸುವ ಆದೇಶವನ್ನು ನೀಡಿತ್ತು. ಇದನ್ನು ವಿರೋಧಿಸಿ ಅನಧಿಕೃತವಾಗಿ ವಾಸವಿದ್ದ ನಿವಾಸಿಗಳಿಂದ ಜಿಲ್ಲಾ ನ್ಯಾಯಾಲಯಕ್ಕೆ ತಡೆಯಾಜ್ಞೆಗಾಗಿ ಅಪೀಲ್ ಮಾಡಲಾಗಿತ್ತು. ಆದರೆ 1992 ರಲ್ಲಿ ಜಿಲ್ಲಾ ನ್ಯಾಯಾಲಯ ತಡೆಯಾಜ್ಞೆಯನ್ನು ರದ್ದುಗೊಳಿಸಿ ತೆರವುಗೊಳಿಸುವ ಆದೇಶ ಸರಿಯಿದೆ ತೆರವುಗೊಳಿಸಿ ಎಂದು ಮರು ಆದೇಶಿಸಿತು.

ಅದಾದ ನಂತರ 1997 ರಲ್ಲಿ ಜಿಲ್ಲಾ ನ್ಯಾಯಾಲಯದಿಂದ ಹೈಕೋರ್ಟ್ಗೆ ತಡೆಯಾಜ್ಞೆಗಾಗಿ ಮನವಿ ಮಾಡಿದ್ದರು. ಹೈಕೋರ್ಟ್ ಕೂಡ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದು. ತೆರವಿಗೆ ಆದೇಶಿಸಿತ್ತು. 1997 ರಲ್ಲಿಯೇ ಮತ್ತೆ ಈ ಪ್ರಕರಣ ದ್ವಿಪೀಠ ಉಚ್ಛನ್ಯಾಯಾಲಯದ ಮೊರೆ ಹೋಗಿದ್ದರು. ಅಲ್ಲಿಯೂ ಕೂಡ ಈ ಪ್ರಕರಣ ರದ್ದಾಗಿತ್ತು.ತೆರವುಗೊಳಿಸುವ ಬಗ್ಗೆ 2016 ರಲ್ಲಿ ಈ ಪ್ರಕರಣ ವಕ್ಫ್ ನ್ಯಾಯಾಲಯದ ಮುಂದೆ ಇತ್ತು.ಹೀಗೆ ಪ್ರಕರಣ ಮುಂದುವರೆಯುತ್ತಾ ವಕ್ಫ್ ನ್ಯಾಯಾಲಯದಿಂದ ಮೇ 13 ರಂದು ಅನಧಿಕೃತವಾಗಿ ವಾಸವಿದ್ದಾರೆ ಎಂದು ಆದೇಶ ಹೊರಡಿಸಿದರು.

1000124539





WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...