ರಾಯಚೂರು | ಉಪ ವಿಭಾಗಾಧಿಕಾರಿ ಮಹೆಬೂಬಿ ವರ್ಗಾವಣೆ ಹಿಂಪಡೆಯಲು ಸಂಘಟನೆಗಳ ಆಗ್ರಹ

Date:

ಅವಧಿಗೂ ಮುನ್ನವೇ ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿಯವರ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅವರ ವರ್ಗಾವಣೆಯನ್ನು ಹಿಂಪಡೆಯಲು ಆಗ್ರಹಿಸಿ ಟಿಯುಸಿಐ ನೇತೃತ್ವದ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಇಡೀ ಜಿಲ್ಲೆಯಾದ್ಯಂತ ತಾಲೂಕು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿತು.

ಉಪ ವಿಭಾಗಾಧಿಕಾರಿ ಇಲ್ಲಿನ ಸರಕಾರಿ ಭೂ ಕಬಳಿಕೆದಾರರಿಗೆ, ಅಕ್ರಮ ದಂಧೆಕೋರರಿಗೆ, ಸಾರ್ವಜನಿಕ ಶಾಂತಿ ಕದಡುವ ಶಕ್ತಿಗಳಿಗೆ ತಮ್ಮ ಆಟ ನಡೆಯದಂತೆ ನೋಡಿಕೊಂಡಿದ್ದರು. ಅಲ್ಲದೇ, ಇಲ್ಲಿನ ರಾಜಕಾರಣಿಗಳ ದುಷ್ಟ ದಂಧೆಗೆ ಇವರು ಮಣೆ ಹಾಕಲಿಲ್ಲ ಎಂಬ ಕಾರಣಕ್ಕೆ ಹಾಗೂ ಈಗಿರುವ ಜಿಲ್ಲಾಧಿಕಾರಿಗಳು ಮುಸ್ಲಿಂ ವಿರೋಧಿ ದ್ವೇಷವನ್ನು ಹೊಂದಿದ್ದಾರೆ. ಹಾಗಾಗಿ, ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿ ಅವರನ್ನು ವರ್ಗಾವಣೆ ಮಾಡುತ್ತಿದ್ದಾರೆಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ ? ರಾಯಚೂರು | ವಿಶೇಷ ಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ 9 ತಿಂಗಳ ಹಿಂದೆಯಷ್ಟೇ ರಾಯಚೂರಿಗೆ ವರ್ಗಾವಣೆಯಾಗಿ ಬಂದ ಕೆಎಎಸ್ ಅಧಿಕಾರಿ ಮಹೆಬೂಬಿ ಅವರನ್ನು ಸೆಪ್ಟೆಂಬರ್ 13, 2024 ರಂದು ಹಠಾತ್ತನೆ ವರ್ಗಾವಣೆ ಮಾಡಲಾಗಿದೆ. ಈ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಿದರು.

ಈ ಅಧಿಕಾರಿಯ ವರ್ಗಾವಣೆಗೆ ರಾಯಚೂರು ಉಪ ವಿಭಾಗ ಸೇರಿ ಇಡೀ ಜಿಲ್ಲೆಯಿಂದ ಯಾವುದೇ ಜನ, ಸಂಘಟನೆ ಅಥವಾ ಸಮುದಾಯಗಳು ಸರಕಾರಕ್ಕೆ ಕೇಳಿಕೊಂಡಿರುವುದಿಲ್ಲ. ಅಲ್ಲದೆ, ಈ ಅಧಿಕಾರಿಯ ಮೇಲೆ ಆಡಳಿತ ಹಾಗೂ ಸಾರ್ವಜನಿಕ ಸೇವೆಗೆ ಸಂಬಂಧಿಸಿದ ಯಾವುದೇ ಪ್ರಕರಣಗಳು ದಾಖಲೆಯಾಗಿ ಆರೋಪ ಸಾಬೀತಾಗಿರುವುದಿಲ್ಲ. ಇದು ಅವಧಿಗೆ ಪೂರ್ವ ವರ್ಗಾವಣೆಯಾಗಿರುತ್ತದೆ ಎಂದರು.

ಅಲ್ಪಾವಧಿಯಲ್ಲಿಯೇ ಅತ್ಯಂತ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ದಕ್ಷ ಅಧಿಕಾರಿ ಎಂದು ಜನ ಸಾಮಾನ್ಯರ ನಡುವೆ ಹೆಸರು ಮಾಡಿರುತ್ತಾರೆ. ಅನೇಕ ಭೂ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಪಡಿಸಿರುತ್ತಾರೆ. ಅಲ್ಲದೇ, ಸರಕಾರ ವಹಿಸಿದ ಕರ್ತವ್ಯವನ್ನು ಚಾಚೂ ತಪ್ಪದೆ ಮಾಡಿದ್ದಾರೆ. ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳ ಕುಂದು ಕೊರತೆಗಳಿಗೆ ತೀವ್ರವಾಗಿ ಸ್ಪಂದಿಸಿದ್ದಾರೆ. ರೈತ ಹಾಗೂ ಕಾರ್ಮಿಕರ ಮಹಿಳೆಯರ ವಿಷಯದಲ್ಲೂ ಮುಂದೆ ನಿಂತು ಕರ್ತವ್ಯ ನಿರ್ವಹಿಸಿ ಜನಸ್ನೇಹಿ ಆಡಳಿತ ನಿರ್ವಹಿಸಿದ್ದಾರೆ ಎಂದು ತಿಳಿಸಿದರು.

WhatsApp Image 2024 09 14 at 01.52.19

ಆಷ್ಟಕ್ಕೂ, ಸದರಿ ಅಧಿಕಾರಿಯು ರಾಜ್ಯದಲ್ಲಿಯೇ ಅತ್ಯಂತ ಹಿಂದುಳಿದ ತಾಲೂಕೆಂದು ಕರೆಸಿಕೊಂಡ ದೇವದುರ್ಗ ತಾಲೂಕಿನವರಾಗಿದ್ದಾರೆ. ಧಾರ್ಮಿಕ ಅಲ್ಪಸಂಖ್ಯಾತ(ಮುಸ್ಲಿಂ)ಸಮುದಾಯಕ್ಕೆ ಸೇರಿದ ಮಹಿಳೆ. ಕಡುಬಡತನದ ನಡುವೆ ಕೆಎಎಸ್ ತೇರ್ಗಡೆ ಹೊಂದಿ ರಾಜ್ಯದಲ್ಲಿಯೇ ಮೊಟ್ಟಮೊದಲ ಮುಸ್ಲಿಂ ಮಹಿಳಾ ಕೆಎಎಸ್ ಅಧಿಕಾರಿಯಾಗಿ ಸರಕಾರದ ಕರ್ತವ್ಯದಲ್ಲಿದ್ದಾರೆ. ಇಂಥವರನ್ನು ಈ ಜಿಲ್ಲೆಯಿಂದ ತಕ್ಷಣ ವರ್ಗಾವಣೆ ಮಾಡುವುದು ಎಷ್ಟು ಸರಿ? ಸರಕಾರಕ್ಕೆ ವಿವೇಚನೆ ಬೇಡವೇ? ಹಿಂದುಳಿದ ಅಲ್ಪಸಂಖ್ಯಾತ ಹಾಗೂ ಮಹಿಳೆಯರಿಗೆ ಸರಕಾರ ಕೊಡುವ ಗೌರವ ಇದೇನಾ? ಕಾರಣ ಕೂಡಲೇ ಇವರ ವರ್ಗಾವಣೆ ಆದೇಶವನ್ನು ಹಿಂಪಡೆದು ರಾಯಚೂರಿನಲ್ಲಿಯೇ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ನಮ್ಮ ಮನವಿಗೆ ಸ್ಪಂದಿಸದಿದ್ದಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಎಲ್ಲ ಸಂಘಟನೆಗಳು ಸೇರಿ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ? ರಾಯಚೂರು | ಹೈಕೋರ್ಟ್‌ ತಡೆಯಾಜ್ಞೆ: ಲಿಂಗಸುಗೂರು ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಮುಂದೂಡಿಕೆ

ಈ ಸಂದರ್ಭದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಆದೇಶ ನಗನೂರು,ಕರ್ನಾಟಕ ರೈತ ಸಂಘದ ಕಾರ್ಯದರ್ಶಿಬಸವರಾಜ್ ಬಡಿಗೇರ್, ಕರ್ನಾಟಕ ರೈತ ಸಂಘದ ಅಧ್ಯಕ್ಷ ವೀರಭದ್ರಪ್ಪ ತೋರಲ ಬೆಂಚಿ, ಆರ್ ವೈ ಎಫ್ ಮುಖಂಡ ಚಿದಾನಂದ ಕಸಬಾ ಲಿಂಗಸುಗೂರು, ಕರ್ನಾಟಕ ರೈತ ಸಂಘದ ಉಪಾಧ್ಯಕ್ಷ ತಿಪ್ಪಣ್ಣ ಚಿಕ್ಕೆಸರೂರು,ಎಂ ನಿಸರ್ಗ, ಅಮರ ಜ್ಞಾನಪೀಠ ಚಿಕ್ಕಿಹೆಸರೂರು,ಬಸವರಾಜ್ ಹಿರೇಹೆಸರೂರು,ರುಕ್ಮಿಣಿ ಗೆಜ್ಜಲಗಟ್ಟಾ, ರಮೇಶ್ ನಾಯಕ್ ಹಿರೇಹೆಸರೂರು, ಶರಣಪ್ಪ ಹಿರೇಹೆಸರೂರು ಸೇರಿ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...