ರಾಯಚೂರು | ಉಸ್ಮಾನಿಯಾ ತರಕಾರಿ ಮಾರುಕಟ್ಟೆ; ಹೈಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಆಗ್ರಹ

Date:

ಉಸ್ಮಾನಿಯಾ ತರಕಾರಿ ಮಾರುಕಟ್ಟೆಯಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡುವುದಾಗಿ ನೀಡಿದ್ದ ಭರವಸೆ ಸುಳ್ಳಾಗಿದ್ದು, ನೂರಕ್ಕೂ ಅಧಿಕ ಮಳಿಗೆಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬೀದಿಬದಿ ವ್ಯಾಪಾರಸ್ಥರು, ಮಳಿಗೆ ಕಳೆದುಕೊಂಡವರಿಗೆ ಆದ್ಯತೆ ನೀಡುವುದಾಗಿ ನೀಡಿದ್ದ ಭರವಸೆ ಈವರೆಗೂ ಈಡೇರಿಲ್ಲ. ಹಾಗಾಗಿ ಕೂಡಲೇ ಹೈಟೆಕ್ ಮಾರುಕಟ್ಟೆ ನಿರ್ಮಾಣ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಎ ಉರುಕುಂದಪ್ಪ ಒತ್ತಾಯಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ತನ್ವೀರ್ ಸೇಠ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ಹೈಟೆಕ್ ತರಕಾರಿ ಮಾರುಕಟ್ಟೆ ನಿರ್ಮಿಸುವುದಾಗಿ ಹೇಳಿ ನೂರು ಮಳಿಗೆಗಳನ್ನು ತೆರವುಗೊಳಿಸಿದ್ದರು. ಕಟ್ಟಡ ನಿರ್ಮಾಣದ ಸಮಯದಲ್ಲಿ ಬೂದಿ ಮಣ್ಣು ಬಂದಿದೆ ಎಂದು ಕೆಲಸ ಸ್ಥಗಿತಗೊಳಿಸಿದ್ದರು. ಆದರೆ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಮಾಡುವಲ್ಲಿ ನಗರಸಭೆ ಆಡಳಿತ ವಿಫಲವಾಗಿದೆ” ಎಂದು ಆರೋಪಿಸಿದರು.

“ಬೀದಿಬದಿ ವ್ಯಾಪರಸ್ಥರಿಂದ 1998 ರಲ್ಲಿ ಶಕೀಲ್ ಅಹ್ಮದ್ ಎಂಬುವವರಿಗೆ ಲೀಸ್ ಆದೇಶ ನೀಡಲಾಗಿತ್ತು. ಅಲ್ಲದೇ ಅಂದಿನ ಗುತ್ತಿಗೆದಾರ ಎನ್ ಕೇಶವರೆಡ್ಡಿಯವರು ಪ್ರತಿ ತಿಂಗಳು ₹300 ಶುಲ್ಕ ವಸೂಲಿ ಮಾಡಿರುವ ರಸೀದಿಗಳಿವೆ. ಆದರೆ ಹೈಟೆಕ್ ಮಾರುಕಟ್ಟೆ ಮಾತ್ರ ನಿರ್ಮಾಣವಾಗಿಲ್ಲ. ಕಳೆದ 25 ವರ್ಷಗಳಿಂದ ವ್ಯಾಪಾರ ಮಾಡುತ್ತಿರುವವರಿಗೆ ಅನ್ಯಾಯವಾಗಿದ್ದು, ಕೂಡಲೇ ಸರಿಪಡಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕುರಿತು ಜಿಲ್ಲಾ ಘಟಕದ ನಿಯೋಗ ಎಪಿಎಂಸಿ, ಕಾರ್ಮಿಕ ಸಚಿವರನ್ನು ಭೇಟಿ ಮಾಡಲಾಗುತ್ತದೆ. ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಅವರಿಗೆ ದೂರು ನೀಡಲಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಲಬೆರಕೆ ವಸ್ತು ಮಾರಾಟಗಾರರ ವಿರುದ್ಧ ಕ್ರಮಕ್ಕೆ ಆಗ್ರಹ

ಭಾಸ್ಕರ ಬಾಬು ಮಾತನಾಡಿ, “ವ್ಯಾಪಾರಸ್ಥರಿಂದ ಶುಲ್ಕ ವಸೂಲಿ ಮಾಡುತ್ತಿರುವ ನಗರಸಭೆ ಹೈಟೆಕ್ ಮಾರುಕಟ್ಟೆ ಇಲ್ಲವೇ ಶೆಡ್ ಸಹ ಹಾಕಿಕೊಟ್ಟಿಲ್ಲ. ನಗರಸಭೆ ವ್ಯಾಪಾರಸ್ಥರ ಹಿತ ಕಾಯುವಲ್ಲಿ ವಿಫಲವಾಗಿದೆ. ಕೂಡಲೇ ಜಿಲ್ಲಾಧಿಕಾರಿಯವರು ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಂ ಡಿ ಜಮೀಲ್ ಅಹ್ಮದ್, ಬಿ ನರಸಿಂಹಲು, ಎಂ ಡಿ ಸಮೀರ್, ಮಹ್ಮದ ಫಜಲ್, ಮಾಸೂಮ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...