ರಾಯಚೂರು | ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

Date:

ವೈದ್ಯರನ್ನು ನಂಬಿ ಜೀವ ಕಾಪಾಡಿಕೊಳ್ಳಲು ಆಸ್ಪತ್ರೆಗೆ ಬರುವ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಹಾಗಾಗಿ ಒಪೆಕ್‌ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿ, ಕರ್ತವ್ಯ ಏನೆಂಬುದನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು ನಗರದ ಒಪೆಕ್ ಆಸ್ಪತ್ರೆಯಲ್ಲಿ ಜನವರಿ 24ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, “ಆಸ್ಪತ್ರೆಯ ವೈದ್ಯರು, ತಜ್ಞ ವೈದ್ಯರು ಮತ್ತು ಸಿಬ್ಬಂದಿ ನಿಗದಿಪಡಿಸಿದ ಅವಧಿವರೆಗೆ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ನೀಡಬೇಕು. ಆಸ್ಪತ್ರೆ ವೇಳೆಯಲ್ಲಿ ಖಾಸಗಿ ಸೇವೆ ಒದಗಿಸುವುದು ಕಂಡುಬಂದರೆ ಸೇವೆಯಿಂದ ಅಮಾನತುಗೊಳಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಅತ್ಯಾಧುನಿಕ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಹೆಚ್ಚುವರಿ ತುರ್ತು ನಿಗಾ ಘಟಕಗಳನ್ನು ಸ್ಥಾಪಿಸುವ ಮೂಲಕ ಜನರಿಗೆ ಗುಣಮಟ್ಟ ಸೇವೆ ಒದಗಿಸಲು ಮತ್ತಷ್ಟು ಪ್ರಯತ್ನಗಳನ್ನು ಕೈಗೊಳ್ಳಬೇಕು” ಎಂದು ತಿಳಿಸಿದ ಸಚಿವರು, ವಿಭಾಗವಾರು ಪ್ರಗತಿಯ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೃದಯಶಾಸ್ತ್ರ(ಕಾರ್ಡಿಯೋಲಾಜಿ) ಮತ್ತು ನರವಿಜ್ಞಾನ(ನ್ಯೂರಾಲಜಿ) ಸೇರಿದಂತೆ ಕಾರ್ಯನಿರ್ವಹಿಸುತ್ತಿರುವ ತುರ್ತು ಚಿಕಿತ್ಸಾ ನಿಗಾ ಘಟಕಗಳನ್ನು ಐದಕ್ಕೆ ಹೆಚ್ಚಿಸಿ ಡಯಾಲಿಸಿಸ್, ಮಕ್ಕಳ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ಕೈಗೊಳ್ಳಬೇಕು. ಅಂತೆಯೇ ಕ್ಯಾತಲಾಬ್ ಸೇರಿ ಹೆಚ್ಚುವರಿ ತುರ್ತು ನಿಗಾ ಘಟಕ ಪ್ರಾರಂಭಿಸಲು ಅಂದಾಜು ಪಟ್ಟಿ ಸಲ್ಲಿಸಿ” ಎಂಉ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಹೃದಯ ಸಂಬಂಧಿ ರೋಗಿಗಳು ಸೇರಿದಂತೆ ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್, ಬೆಂಗಳೂರಿಗೆ ರೋಗಿಗಳನ್ನು ಕಳುಹಿಸದೆ ಒಪೆಕ್ ಆಸ್ಪತ್ರೆಯಲ್ಲಿಯೇ ಲಭ್ಯವಿರುವ ಸೌಲಭ್ಯಗಳ ಮೂಲಕ ಜನರಿಗೆ ಗುಣಮಟ್ಟದ ಸೇವೆ ಒದಗಿಸಬೇಕು. ಅಗತ್ಯಬಿದ್ದರೆ ಕಲಬುರಗಿಯ ಜಯದೇವ ಆಸ್ಪತ್ರೆಗೆ ರವಾನಿಸಬೇಕು. ಜತೆಗೆ ಅಗತ್ಯವಿರುವ ಸಿಬ್ಬಂದಿಯನ್ನು ನೇಮಿಸಲು ನೇಮಕಾತಿ ನಡೆಸಬೇಕು” ಎಂದು ಸೂಚಿಸಿದರು.

ಒಪೆಕ್ ಆಸ್ಪತ್ರೆಯಲ್ಲಿಯೇ ಮೂತ್ರಕೋಶ ಅಳವಡಿಕೆ ವ್ಯವಸ್ಥೆ ಆರಂಭಿಸಿ ಸೌಲಭ್ಯಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

“ತಜ್ಞ ವೈದ್ಯರು ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಬೇಕು. ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗೆ ಬೇಕಾದ ಯಂತ್ರೋಪಕರಣ ಹಾಗೂ ಸಿಬ್ಬಂದಿ ಒದಗಿಸಬೇಕು. ದಂತ ಚಿಕಿತ್ಸೆಗೆ ಒಪೆಕ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಕಡಿಮೆಯಿದೆ. ಆದ್ದರಿಂದ ಇಲ್ಲಿನ ವೈದ್ಯರ ಸೇವೆಯನ್ನು ರಿಮ್ಸ್‌ನಲ್ಲಿ ಪಡೆದುಕೊಳ್ಳಲು ಯೋಜಿಸಬೇಕು” ಎಂದರು.

“ನರ್ಸಿಂಗ್ ವಿದ್ಯಾರ್ಥಿಗಳ ವಸತಿ ನಿಲಯದ ಕಾಮಗಾರಿಯು ಪ್ರಗತಿಯಲ್ಲಿದೆ. ಔಷಧಿ ಉಗ್ರಾಣ ಕಾಮಗಾರಿ ಟೆಂಡರ್ ಹಂತದಲ್ಲಿದೆ. ಮಾರ್ಚ್‌ ಅಂತ್ಯದೊಳಗೆ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು. ಒಪೆಕ್ ಮತ್ತು ರಿಮ್ಸ್ ಕ್ಯಾಂಪಸ್ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿ ಪ್ರಸ್ತಾವನೆ ಸಲ್ಲಿಸಿ ಮಾಸ್ಟರ್ ಪ್ಲಾನ್ ಒಳಗೊಂಡಿರುವ ಆಕರ್ಷಣೀಯ ಸೌಲಭ್ಯ ಒದಗಿಸಬೇಕು” ಎಂದು ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ನಿತೀಶ್ ಕೆ “ಭಾರತ್ ಎಲೆಕ್ಟ್ರಾನಿಕ್ಸ್ ಸಂಸ್ಥೆ ಸಿಎಸ್‌ಆರ್ ಅನುದಾನದಲ್ಲಿ ಡಯಾಲಿಸಿಸ್ ಯಂತ್ರಗಳನ್ನು ನೀಡಲು ಮುಂದೆ ಬಂದಿದ್ದು, ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಿ ಸೇವೆ ಪ್ರಾರಂಭ ಮಾಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಜಿಲ್ಲಾಸ್ಪತ್ರೆಯ ಖಾಲಿ ಹುದ್ದೆ ಭರ್ತಿಗೆ ಶೀಘ್ರ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, “ಹೆಚ್ಚುವರಿಯಾಗಿ 4 ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಇನ್ನುಳಿದ ನಾಲ್ಕು ತಾಲೂಕು ಕೇಂದ್ರಗಳಲ್ಲಿಯೂ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಲಾಗುತ್ತದೆ” ಎಂದು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ವಿಧಾನ ಪರಿಷತ್ ಸದಸ್ಯ ಎ ವಸಂತಕುಮಾರ್, ರಿಮ್ಸ್ ನಿರ್ದೇಶಕ ಡಾ ರಮೇಶ್, ಒಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ ರಮೇಶ ಸಾಗರ್, ರಿಮ್ಸ್ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ. ಕೆ ಆರ್ ದುರುಗೇಶ್, ಹಣಕಾಸು ಅಧಿಕಾರಿ ಹನುಮೇಶ್ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...