ಜಿಲ್ಲೆಯ ಲಿಂಗಸುಗೂರಿನಲ್ಲಿ ಇತ್ತೀಚಿಗೆ ನಡೆದ ಆರದ ಎಸ್ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದ ಪಿಡಿಒ ಹಾಗೂ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕ ಪ್ರವೀಣ ಕುಮಾರ ಅವರನ್ನು ಸೇವೆಯಿಂದ ಅಮಾನತು ಮಾಡಿ ವಿಚಾರಣೆಯನ್ನು ಕಾಯ್ದಿರಿಸಿ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿ ಡಾ. ಅರುಂಧತಿ ಚಂದ್ರಶೇಖರ ಅವರು ಆದೇಶ ಹೊರಡಿಸಿದ್ದಾರೆ.
ಸಿರವಾರ ತಾಲೂಕಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆಗಿರುವ ಪ್ರವೀಣ ಕುಮಾರ ಗಣವೇಶಧಾರಿಯಲ್ಲಿ ಕೈಯಲ್ಲಿ ಡೊಣ್ಣೆ ಹಿಡಿದು ಆರ್ ಎಸ್ಎಸ್ ಶತಮಾನೋತ್ಸವದ ಅಂಗವಾಗಿ ನಡೆದ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥಸಂಚಲನದಲ್ಲಿ ಪಿಡಿಒ ಭಾಗಿ; ಕ್ರಮಕ್ಕೆ ಒತ್ತಾಯ
ಕರ್ನಾಟಕ ಸಿವಿಲ್ ಸೇವಾ (ನಡತೆ)ನಿಯಮ 2021ರ ನಿಯಮ 3 ರಂತೆ ಪ್ರತಿಯೊಬ್ಬ ಸರ್ಕಾರಿ ನೌಕರರು ಕರ್ತವ್ಯದಲ್ಲಿ ನೀತಿ ನಿಷ್ಠೆ ಹೊಂದಿರಬೇಕು ಹಾಗೂ ರಾಜಕೀಯವಾಗಿ ತಟಸ್ಥರಾಗಿರಬೇಕು. ತನ್ನ ಕರ್ತವ್ಯ ನಿಷ್ಠೆಯ ವಿರುದ್ಧ ಕೆಲಸ ಮಾಡಿದ ಕಾರಣ ವಿಚಾರಣೆಯನ್ನು ಕಾಯ್ದಿರಿಸಿ ಸೇವೆಯಿಂದ ಅಮಾನತು ಗೊಳಿಸಲಾಗಿದೆ ಎಂದು ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.





