ರಾಯಚೂರು | ಪೇಜಾವರ ಸ್ವಾಮಿ ಸಂವಿಧಾನಕ್ಕೆ ಅಗೌರವ; ದೇಶದ್ರೋಹ ಪ್ರಕರಣ ದಾಖಲಿಸಲು ಬಿಎಸ್‌ಪಿ ಆಗ್ರಹ

Date:

ಪೇಜಾವರ ಮಠದ ವಿಶ್ವೇಶರತೀರ್ಥ ಸ್ವಾಮೀಜಿ, ʼತಮ್ಮನ್ನು ಗೌರವಿಸುವ ಸಂವಿಧಾನ ಬೇಕುʼ ಎಂದು ಹೇಳುವ ಮೂಲಕ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿರುವುದರಿಂದ ಅವರ ವಿರುದ್ಧ ಕೂಡಲೇ ದೇಶದ್ರೋಹದ ಕೇಸ್ ದಾಖಲಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಯಚೂರು ಜಿಲ್ಲಾ ಸಂಚಾಲಕ ಎಂ ಆರ್ ಭೇರಿ ಹೇಳಿದರು.

ರಾಯಚೂರು ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, “ಶಿವಮೊಗ್ಗದಲ್ಲಿ ಒಡನಾಟ ಸಮಿತಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪೇಜಾವರ ಸ್ವಾಮಿ ಮಾತನಾಡಿ ತಮ್ಮನ್ನು ಗೌರವಿಸುವ ಸಂವಿಧಾನ ಬೇಕೆಂದು ಹೇಳಿಕೆ ನೀಡಿದ್ದಾರೆ. ತಮಗೆ ಬೇಕಾಗುವ ಸಂವಿಧಾನವೇ ಬೇಕಿದ್ದರೆ ಪ್ರತ್ಯೇಕ ದೇಶವನ್ನು ಕಟ್ಟಿಕೊಂಡು ರೂಪಿಸಬೇಕೇ ಹೊರತು ಸಂವಿಧಾನ ಅಗೌರವಿಸುವ ಹಾಗೂ ಪ್ರಚೋದಿಸುವ ಮಾತನಾಡುವುದು ಸಮಂಜಸವಲ್ಲ. ಕೂಡಲೇ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದರು.

“ಸಂವಿಧಾನದಲ್ಲಿರುವ ಲೋಪವಾದರೂ ಏನೆಂದು ಹೇಳಬೇಕಿತ್ತು. ಶ್ರೇಣಿಕೃತ ಸಮಾಜವನ್ನು ಆರಾಧಿಸುತ್ತಿರುವ ಪೇಜಾವರ ಶ್ರೀ ಸಮಸಮಾಜದ ಸಂವಿಧಾನವನ್ನು ಒಪ್ಪುತ್ತಿಲ್ಲ ಎಂಬದು ಸ್ಪಷ್ಟವಾಗಿ ಕಾಣುತ್ತಿದೆ. ರಾಷ್ಟ್ರ ಧ್ವಜವನ್ನು ಗೌರವಿಸದಿರುವ ಆರ್‌ಎಸ್‌ಎಸ್ ಸಂಘಟನೆ ಇಂದಿಗೂ ಸಂವಿಧಾನವನ್ನು ಗೌರವಿಸುತ್ತಿಲ್ಲ. ರಾಷ್ಟ್ರ ಧ್ವಜ, ರಾಷ್ಟ್ರಲಾಂಛನ, ರಾಷ್ಟ್ರಗೀತೆಯನ್ನು ಗೌರವಿಸುವದು ಸಂವಿಧಾನ ಒಪ್ಪಿರುವ ಎಲ್ಲರ ಕರ್ತವ್ಯವಾಗಿದೆ. ಸಂವಿಧಾನ ವಿರೋಧಿ ಹೇಳಿಕೆಯನ್ನು ರಾಷ್ಟ್ರದ್ರೋಹವೆಂದು ಪರಿಗಣಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಬಸವರಾಜ ಭಂಡಾರಿ ಮಾತನಾಡಿ, “ಸಂವಿಧಾನ ವಿರೋಧಿಸುವುದು ಮನುವಾದಿಗಳ ಮನಸ್ಥಿತಿಯಲ್ಲಿರುವುದರಿಂದ ನಡೆಯುತ್ತಿದೆ. ಸಂವಿಧಾನದ ಮೇಲೆ ನಂಬಿಕೆ ಇಲ್ಲದೇ ಇದ್ದರೆ ನಿತ್ಯಾನಂದ ಸ್ವಾಮಿಯಂತೆ ಪ್ರತ್ಯೇಕ ದೇಶ ಕಟ್ಟಿಕೊಳ್ಳಬಹುದು. ಸಂವಿಧಾನಕ್ಕೆ ಅಗೌರವಿಸುವುದು ದೇಶದ್ರೋಹ ಕೆಲಸವಾಗಿದೆ” ಎಂದರು.

ಈ ಸಂದರ್ಭದಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಜೈ ಭೀಮ, ರಾಜ್ಯ ಕಾರ್ಯದರ್ಶಿ ಹನುಮಂತಪ್ಪ ಅತ್ತನೂರು, ಬುಡ್ಡಪ್ಪ ಕೆ, ಸೈಯದ್ ಅಬ್ದುಲ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...