ರಾಯಚೂರು | ಹುಚ್ಚು ನಾಯಿಗಳ ಹಾವಳಿಗೆ ಬೇಸತ್ತ ಜನ; ಕ್ರಮ ಕೈಗೊಳ್ಳದ ನಗರಸಭೆಯ ವಿರುದ್ಧ ಆಕ್ರೋಶ

Date:

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಎರಡು ದಿನಗಳ ಹಿಂದೆ ನಗರದ ಗೀತಾ ಕೆಫೆ ಹತ್ತಿರ ಶಾಪಿಂಗ್ ಮಾಡುವ ವೇಳೆ ಹುಚ್ಚು ನಾಯಿಯೊಂದು ಪೊಲೀಸ್‌ ಅಧಿಕಾರಿಯೋರ್ವರ ಪುತ್ರನ ಮೇಲೆ ರಸ್ತೆಯಲ್ಲಿ ದಾಳಿ ನಡೆಸಿ ಗಂಭೀರವಾಗಿ ಕಡಿದು ಗಾಯಗೊಳಿಸಿದ ಘಟನೆಯು ಸಿಂಧನೂರು ಜನತೆಯನ್ನು ಭಯಗೊಳಿಸಿದೆ. ಇದೊಂದು ಘಟನೆ ಮಾತ್ರವಲ್ಲ, ನಗರದ ಪ್ರತಿ ವಾರ್ಡ್‌, ಬಜಾರ್‍‌ಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಬೈಕ್ ಸವಾರರು, ಪಾದಚಾರಿಗಳು ಸಿಂಧನೂರಿಗೆ ಬರಲು ಹಿಂದೇಟು ಹಾಕುವಂತಾಗಿದೆ ಎನ್ನುತ್ತಿದ್ದಾರೆ ಸ್ಥಳೀಯರು.

ಜೀವಕ್ಕೆ ಮಾರಕವಾದ ಘಟನೆ ನಡೆಯುತ್ತಿದೆ. ಆದರೆ, ಬೀದಿ ನಾಯಿಗಳನ್ನು ನಿಯಂತ್ರಣ ಮಾಡಬೇಕಾದ ನಗರಸಭೆಯವರು ಮೌನವಹಿಸಿ, ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಒಂದು ತಿಂಗಳದ ಹಿಂದೆ ಬೀದಿ ನಾಯಿಗಳನ್ನು ಹಿಡಿದು ಬೇರೆಡೆಗೆ ಸಾಗಿಸುತ್ತಿದ್ದಾರೆಂಬ ಸುದ್ದಿ ಹರಿದಾಡಿತ್ತಾದರೂ, ನಾಯಿಗಳು ಮಾತ್ರ ಸಿಂಧನೂರು ಪಟ್ಟಣದ ತುಂಬಾ ಓಡಾಟ ಮಾಡುತ್ತಲೇ ಇವೆ. ನಾಯಿಗಳ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವೈಫಲ್ಯಕ್ಕೀಡಾಗಿ ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದಾರೆಯೇ? ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಬೀದಿ ನಾಯಿಗಳು ಮಾತ್ರವಲ್ಲದೇ, ಬಿಡಾಡಿ ದನಗಳ ಹಾವಳಿ ಕೂಡ ಹೆಚ್ಚಾಗಿದ್ದು, ರಸ್ತೆ ಸಂಚಾರಕ್ಕೆ ತುಂಬಾ ಸಮಸ್ಯೆಯಾಗಿದೆ. ಜೋರಾಗಿ ಬರುವ ವಾಹನಗಳಿಗೆ ಸಿಲುಕಿ ಈ ಹಿಂದೆ ಹಸುಗಳು ಸಾವನ್ನಪ್ಪಿದ್ದವು. ಕಾಲುಗಳು ಮುರಿದುಕೊಂಡ ಘಟನೆಗಳು ಕೂಡ ನಡೆದಿದೆ. ಆದರೂ, ಸೂಕ್ತ ಕ್ರಮ ಕೈಗೊಳುತ್ತಿಲ್ಲ ಎಂದು ನಾಗರಿಕರು ದೂರಿದ್ದಾರೆ.

ನಗರಸಭೆಯವರು ಬೀದಿ ನಾಯಿಗಳನ್ನು ಹಾಗೂ ಬಿಡಾಡಿ ದನಗಳನ್ನು ಕೂಡಲೇ ನಿಯಂತ್ರಣಗೊಳಿಸಲಿಕ್ಕೆ ಮುಂದಾಗಬೇಕೆಂದು ಪುರಸಭೆಗೆ ದೂರು ನೀಡಿದಾಗ, ಅವರು ಧ್ವನಿ ವರ್ಧಕ ಬೀಡಾಡಿ ದನಗಳು ಇದ್ದರೆ ಅವುಗಳನ್ನು ಗೋ ಶಾಲೆಗೆ ಕಳುಹಿಸಲಾಗುವುದು ಎಂದು ಹೇಳಿದ್ದರೇ ಹೊರತು, ಹೇಳಿದಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಕೂಡಲೇ ಸಂಬಂಧಿಸಿದ ನಗರಸಭೆಯವರು ಬೀದಿ ನಾಯಿಗಳನ್ನು ಹಾಗೂ ಬೀಡಾಡಿ ದನಗಳನ್ನು ಕೂಡಲೇ ನಿಯಂತ್ರಣಗೊಳಿಸಲಿಕ್ಕೆ ಮುಂದಾಗಬೇಕು ಎಂಬುದು ನಮ್ಮ ಸಂಘಟನೆಯ ಒತ್ತಾಯವಾಗಿದೆ. ಇಲ್ಲದೇ, ಹೋದಲ್ಲಿ ಬೀದಿಗಿಳಿದು ಹೋರಾಟ ಮಾಡಬೇಕಾದ ಸ್ಥಿತಿ ಬರಬೇಕಾಗುತ್ತದೆಂದು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರ ಅವರಿಗೆ ಆಗ್ರಹಿಸುತ್ತಿದ್ದೇವೆ ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ ರಾಜ್ಯ ಉಪಾಧ್ಯಕ್ಷ ಎಂ.ಗಂಗಾಧರ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...