ರಾಯಚೂರು | ಪ್ಲಾಸ್ಟಿಕ್ ಕಾರ್ಖಾನೆಗಳ ಮೇಲೆ ಅಧಿಕಾರಿಗಳ ದಾಳಿ; 3 ಟನ್ ಪ್ಲಾಸ್ಟಿಕ್‌ ವಶಕ್ಕೆ

Date:

ಪ್ಲಾಸ್ಟಿಕ್ ನಿಷೇಧವಿದ್ದರು ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದೆ ಪ್ಲಾಸ್ಟಿಕ್ ಪೌಚಗಳನ್ನು ತಯಾರಿಸುತ್ತಿರುವುದು ಕಂಡು ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 3 ಟನ್ ಪ್ಲಾಸ್ಟಿಕ್ ಪೌಚ್ ಗಳನ್ನು ವಶಕ್ಕೆ ಪಡೆದುಕೊಂಡರು.

ನೀರಿನ ಪ್ಲಾಸ್ಟಿಕ್ ಪೌಚಗಳು ಮತ್ತು ಪೆಟ್ ಬಾಟಲ್ ಹಾಗೂ ಎಲ್ಲಾ ಅನ್ ಬ್ರಾಂಡೆಡ್ ಕಾರ್ಬೋನೇಟ್ ವಾಟರನ್ನು ದಾಳಿ ನಡೆಸಿದ ವೇಳೆಯಲ್ಲಿ, ಮಹಾನಗರ ಪಾಲಿಕೆಯ ಪರಿಸರ ಇಂಜಿನಿಯರ್ ಮತ್ತು ನೈರ್ಮಲ್ಯ ನಿರೀಕ್ಷಕರು ಹಾಗೂ ಆರೋಗ್ಯ ಅಧಿಕಾರಿಗಳು ಕೆಲವು ಅಂಗಡಿಕಾರರಿಗೆ ಮತ್ತು ಕಾರ್ಖಾನೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ರಾಯಚೂರು ಮಹಾನಗರ ಪಾಲಿಕೆಯಿಂದ ರಾಜಕಾಲುವೆ ಸ್ವಚ್ಛತೆ ಕಾರ್ಯ ನಡೆದ ವೇಳೆ ಸುಮಾರು 20 ಟನ್ ಪ್ಲಾಸ್ಟಿಕ್ ಪೌಚ್ ಮತ್ತು ಪ್ಲಾಸ್ಟಿಕ್ ಬಾಟಲ್ ಶೇಖರಣೆಯಾಗಿದೆ. ಇದು ಅತ್ಯಂತ ಖೇದದ ಸಂಗತಿಯಾಗಿದೆ.ನಿಷೇಧಿತ ಪ್ಲಾಸ್ಟಿಕ್ ಉತ್ಪಾದನೆ ಮತ್ತು ಮಾರಾಟದಲ್ಲಿ ತೊಡಗಿದಲ್ಲಿ ಕಠಿಣ ಕಾನೂನುಕ್ರಮ ಜರುಗಿಸಲಾಗುವುದು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮೂರು ಎತ್ತು ,ಹಸು ಸಾವು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧಿಸಿವೆ.ಅಂತಹ ಕಾರ್ಖಾನೆಗಳು ಕೂಡಲೇ ಎಚ್ಚೆತ್ತುಕೊಂಡು ನಿಷೇಧಿತ ಪ್ಲಾಸ್ಟಿಕ್ ನಿರ್ಮಾಣ ಮತ್ತು ಮಾರಾಟವನ್ನು ಕೈಬಿಡಬೇಕು ಎಂದು ದಾಳಿ ವೇಳೆ ಅಧಿಕಾರಿಗಳು ತಿಳಿವಳಿಕೆ ನೀಡಿದರು.

ಲಾಭವನ್ನೇ ಮುಖ್ಯವಾಗಿಸಿಕೊಂಡು ಕೆಲವು ಕಾರ್ಖಾನೆಗಳು ಮತ್ತು ಅಂಗಡಿಕಾರರು ನಿಷೇಧಿತ ಪ್ಲಾಸ್ಟಿಕ ಬಾಟಲ್ ಮತ್ತು ಪೌಚನಲ್ಲಿ ನೀರು ಶೇಖರಿಸಿ ಮಾರಾಟ ಮಾಡುತ್ತಿರುವುದು ಕಂಡು ಬರುತ್ತಿದೆ. ನೀರಿನ ಸ್ಯಾಂಪಲ್ ಪರೀಕ್ಷಿಸದೇ ಹಾಗೂ ನೀರಿನ ಗುಣಮಟ್ಟದ ಪರಿಶೀಲಿಸದೇ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕರು ಬಾಟಲಿಯ ನೀರು ಬಳಸಬೇಕು. ಇನ್ನುಳಿದಂತೆ ಅನಧೀಕೃತ ಕಂಪನಿಗಳ ಬಾಟಲಿ ನೀರನ್ನು ಬಳಸಕೂಡದು ಎಂದು ಅಧಿಕಾರಿಗಳು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...