ಪ್ರಕರಣ ಸಂಬಂಧ ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ವ್ಯಾಪ್ತಿಯ ಮಟ್ಟೂರು ತಾಂಡಾದಲ್ಲಿ ನಡೆದಿದೆ.
ಗ್ರಾಮದಲ್ಲಿ ಎರಡು ಕುಟುಂಬಗಳ ಮಧ್ಯೆ ಕೆಲವು ದಿನಗಳ ಹಿಂದೆ ಗಲಾಟೆವಾಗಿತ್ತು. ಮುದಗಲ್ ಪೊಲೀಸ ಠಾಣೆಯಲ್ಲಿ ಮಲ್ಲಪ್ಪ ಚವ್ಹಾಣ್ ದೂರು ನೀಡಿದ ಹಿನ್ನಲೆಯಲ್ಲಿ ಪೋಲಿಸರು ಗ್ರಾಮಕ್ಕೆ ತೆರಳಿದಾಗ ಹಲ್ಲೆ ಮಾಡಿದ್ದಾರೆ ಎಂದು ಕೇಳಿಬಂದಿದೆ.
ಆರೋಪಿ ರಾಮಪ್ಪ ಹಾಗೂ ಆತನ ಪತ್ನಿ ಸಕ್ಕುಬಾಯಿ ಅವರ ವಿಚಾರಣೆಗೆ ಎಎಸ್ಐ ವೆಂಕಟೇಶ ನಾಯಕ, ಹೆಡ್ಕಾನ್ಸ್ಟೆಬಲ್ ರಾಮಪ್ಪ ಅವರು ತಾಂಡಾಕ್ಕೆ ತೆರಳಿದ್ದರು. ಇದೇ ವೇಳೆ ರಾಮಪ್ಪ ಹಾಗೂ ಪತ್ನಿ ಸಕ್ಕುಬಾಯಿ ಸೇರಿಕೊಂಡು ಕಲ್ಲು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಸಮವಸ್ತ್ರ ಹಿಡಿದು ಎಎಸ್ಐ ಅವರನ್ನು ಎಳೆದಾಡಿ ಗಾಯಗೊಳಿಸಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಐದು ಮಂದಿಯ ಗಡಿಪಾರಿಗೆ ಆದೇಶ
ಗಾಯಗೊಂಡ ಪಿಎಸ್ಐ ಹಾಗೂ ಎಎಸ್ಐ ಲಿಂಗಸುಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.





