ರಾಯಚೂರು | ಗುಡಿಸಲು ತೆರವುಗೊಳಿಸುವ ಮುನ್ನ ಬಡಜನರಿಗೆ ಪುನರ್ವಸತಿ ಕಲ್ಪಿಸಬೇಕು: ಸಿಪಿಐಎಂಎಲ್

Date:

ರಾಯಚೂರು ಜಿಲ್ಲೆಯ ಸಿಂಧನೂರು ಸರ್ಕಾರಿ ಆಹಾರ ಗೋದಾಮು ಪಕ್ಕದಲ್ಲಿ ಬಡವರು ಗುಡಿಸಲು ಹಾಕಿಕೊಂಡು ಹಲವು ವರ್ಷಗಳಿಂದ ಬದುಕು ಸಾಗಿಸುತ್ತಿರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸದೆ ಏಕಾಏಕಿ ತೆರವುಗೊಳಿಸುವುದಕ್ಕೆ ತಾಲೂಕು ಆಡಳಿತ ಮುಂದಾಗಿರುವುದು ಖಂಡನೀಯ ಎಂದು ಸಿಪಿಐ(ಎಂಎಲ್) ರೆಡ್ ಸ್ಟಾರ್ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ನಿತೀಶ್ ಕೆ ಅವರಿಗೆ ಹಕ್ಕೊತ್ತಾಯ ಸಲ್ಲಿಸಿದರು.

ರಾಯಚೂರು ಜಿಲ್ಲೆಯ ಸಿಂಧನೂರು ಮುಖ್ಯ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಒತ್ತುವರಿ ತೆರವುಗೊಳಿಸಲು ಬೆಂಗಳೂರು ಭೂ ಕಬಳಿಕೆ ನಿಷೇಧ ರಾಜ್ಯ ನ್ಯಾಯಾಲಯದ ಆದೇಶ ನೀಡಿದ ನಂತರ, ರಸ್ತೆ ಒತ್ತುವರಿಯನ್ನು ತೆರವುಗೊಳಿಸಿದೆ. ಇದರ ಬೆನ್ನಲ್ಲೇ ಸಿಂಧನೂರು ಸರ್ಕಾರಿ ಆಹಾರ ಗೋದಾಮು ಜಾಗದ ಪಕ್ಕದಲ್ಲಿ 12ಕ್ಕೂ ಅಧಿಕ ಪರಿಶಿಷ್ಟ ಪಂಗಡ(ಎಸ್‌ಟಿ) ಜನಾಂಗದ ಕೂಲಿ ಕಾರ್ಮಿಕ ಕುಟುಂಬಗಳು ಸುಮಾರು 40 ವರ್ಷಗಳಿಂದ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿವೆ. ಈಗ ತೆರವುಗೊಳಿಸಲು ರಾಯಚೂರು ಜಿಲ್ಲಾ ಆಹಾರ ಇಲಾಖೆ ಜನವರಿ 20ಕ್ಕೆ ಗಡುವು ನೀಡಿದೆ. ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳಿಗೆ ನೋಟಿಸ್ ನೀಡದೆ, ಬದುಕಿಗಾಗಿ ಜೋಪಡಿ ಚಪ್ಪರದ ಸೂರು ಕಟ್ಟಿಕೊಂಡಿರುವ ತಟ್ಟಿಗೆ ನೋಟಿಸ್ ಅಂಟಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸದರಿ ಬಡ ಕೂಲಿಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸದೆ ಏಕಾಏಕಿ ಬಂದು ಗುಡಿಸಲುಗಳನ್ನು ತೆಗೆಯಿರಿ ಎಂದು ವಾರ್ನಿಂಗ್ ಮಾಡಿ ನೋಟಿಸ್ ಹಾಕಿದ್ದಕ್ಕೆ ಜನರು ದಿಗ್ಭ್ರಮೆಯಾಗಿದ್ದಾರೆ. ಕಳೆದ 45-50 ವರ್ಷಗಳಿಂದ ಸಿಂಧನೂರು ಕ್ಷೇತ್ರದ ಅಧಿಕಾರ ನಡೆಸಿದವರು (ಮುನ್ಸಿಪಾಲಿಟಿಯಿಂದ-ಶಾಸಕರು-ಮಂತ್ರಿವರೆಗೆ) ಬೇರೆಕಡೆ ಹಕ್ಕುಪತ್ರ ಕೊಡುತ್ತೇವೆಂದು ದೇವರ ಮೇಲೆ ಆಣೆ-ಪ್ರಮಾಣ ಮಾಡಿದ ಮಹಾಶಯರು ಈಗ ಮಾಯವಾಗಿದ್ದಾರೆ. ಆದರೆ ಈ ಸಮಯದಲ್ಲಿ ಯಾರೂ ಕೂಡಾ ನೆರವಿಗೆ ಬಾರದೆ, ಪುನರ್ವಸತಿಗೆ ಮುಂದಾಗದೆ ಬೀದಿಗೆ ತಳ್ಳಿ ಕೈ ಸವರಿಸುವ ಹಂತದಲ್ಲಿ ರಾಯಚೂರು ಆಹಾರ ಇಲಾಖೆ ಮತ್ತು ಸಿಂಧನೂರು ತಾಲೂಕು ಆಡಳಿತ ಸಜ್ಜಾಗಿದೆ. ನಮಗೆ ಪುನರ್ವಸತಿ ಕಲ್ಪಿಸುವವರೆಗೆ ಜಾಗ ಬಿಟ್ಟು ಕದಲುವುದಿಲ್ಲ” ಎಂದು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು ವರ್ಷಗಳಿಂದ ಸಿಂಧನೂರು ನಗರಸಭೆಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದರೂ ಕೂಡಾ ನಮಗೆ ನಿವೇಶನ ಒದಗಿಸಿಲ್ಲ. ಹೋಟೆಲ್ ಕೆಲಸ, ಸಣ್ಣ-ಪುಟ್ಟ ವ್ಯಾಪಾರ, ಮನೆಗೆಲಸ ಮಾಡಿ ಬದುಕುತ್ತಿರುವ ನಮ್ಮನ್ನು ಇದ್ದಕ್ಕಿದ್ದಂತೆ ಎತ್ತಂಗಡಿ ಮಾಡಿದರೆ ನಾವು ಎಲ್ಲಿಗೆ ಹೋಗಿ ಜೀವನ ಮಾಡುವುದು. ನಾವಿದ್ದ ಸ್ಥಳದಲ್ಲಿಯೇ ನಮಗೆ ನಿವೇಶನ ಹಕ್ಕುಪತ್ರ ಕೊಡಿ ಅಥವಾ ಬೇರೆ ಜನವಸತಿ ಪ್ರದೇಶದಲ್ಲಿ ನಮಗೆ ಪುನರ್ವಸತಿ ನೀಡಬೇಕು. ಅಲ್ಲಿಯವರೆಗೆ ಯಾವ ಕಾರಣಕ್ಕೂ ನಮ್ಮನ್ನು ತೆರವುಗೊಳಿಸದಂತೆ ಆಹಾರ ಇಲಾಖೆ ನಿಗಮಕ್ಕೆ ಸೂಕ್ತ ನಿರ್ದೇಶನ ನೀಡಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ: ಸಾಹಿತಿ ಡಾ. ಬಿ ಎಲ್ ವೇಣು

ಸಂಘಟನಾ ರಾಜ್ಯ ಸಮಿತಿ ಸದಸ್ಯರು ಎಂ ಗಂಗಾಧರ, ಜಿ ಅಮರೇಶ, ಹೆಚ್ ಆರ್ ಹೊಸಮನಿ, ಜಿಲ್ಲಾ ಸಮಿತಿ ಸದಸ್ಯ ಎಂ ನಿರಂಜನ್ ಕುಮಾರ, ತಾಲೂಕು ಸಮಿತಿ ಸದಸ್ಯರು ರಾಯಚೂರು ಸಿಪಿಐ(ಎಂಎಲ್)ರೆಡ್ ಸ್ಟಾರ್ ಹನುಮಂತಪ್ಪ ಗೋಡಿಹಾಳ, ಉಪಾಧ್ಯಕ್ಷರು ಕರ್ನಾಟಕ ರೈತ ಸಂಘ ಎಐಕೆಕೆಎಸ್ ಹಾಗೂ ರಾಜು ನಾಯಕ ಸಂತ್ರಸ್ತ ಕುಟುಂಬದವರಾದ, ಹನುಮಂತಮ್ಮ, ಹೊನ್ನಮ್ಮ, ಯಮನೂರಿ, ಲಕ್ಶ್ಮೀ, ಅಯ್ಯಮ್ಮ, ಲತಾ, ಮಲ್ಲಮ್ಮ, ಚನ್ನಮ್ಮ, ಯಮನಮ್ಮ, ಅಂಬಮ್ಮ, ಈರಮ್ಮ, ಶಿವಲಿಂಗಮ್ಮ, ಶರಣಮ್ಮ, ಯಲ್ಲಮ್ಮ, ಶಂಕ್ರಮ್ಮ, ಶ್ಯಾಮಮ್ಮ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...