ರಾಯಚೂರು | ಕೇಂದ್ರ ವಿದ್ಯುತ್ ಕಾಯಿದೆಯಂತೆ ವಿದ್ಯುತ್‌ ದರ ಹೆಚ್ಚಳ: ಸಚಿವ ಕೆ.ಜೆ ಜಾರ್ಜ್

Date:

ಕೇಂದ್ರ ವಿದ್ಯುತ್ ಕಾಯಿದೆಯಂತೆ ಹಿಂದಿನ ಬಿಜೆಪಿ ಸರ್ಕಾರವೇ ವಿದ್ಯುತ್ ದರ ಹೆಚ್ಚಿಸಿದ್ದು, ಇಂದು ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸಣ್ಣ ಕೈಗಾರಿಕೆಗಳೊಂದಿಗೆ ಕಾಂಗ್ರೆಸ್‌ ಸರ್ಕಾರವಿದ್ದು, ದರ ಕಡಿತದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.

ಆರ್‌ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಭೇಟಿ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದರು. “ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ. ಅನಧಿಕೃತ, ಅಧಿಕೃತ ಲೋಡ್ ಶೆಡ್ಡಿಂಗ್ ಜಾರಿ ಮಾಡಿಲ್ಲ. ತಾಂತ್ರಿಕ ತೊಂದರೆಯಿಂದ ವಿದ್ಯುತ್ ಕಡಿತಗೊಂಡಿರಬಹುದು ಅಷ್ಟೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹ ಜ್ಯೋತಿ ಎಂಬ ದೊಡ್ಡ ಯೋಜನೆ ಜಾರಿಗೊಳಿಸಿದ್ದು, 2 ಕೋಟಿ 14 ಲಕ್ಷ ಜನರಿಗೆ ಯೋಜನೆ ತಲುಪಿಸಲಾಗುತ್ತದೆ” ಎಂದರು.

“52 ಲಕ್ಷ ಮಂದಿ ಈಗಾಗಲೇ ನೋಂದಣಿ ಪಡೆದಿದ್ದಾರೆ. ಯಾವುದೇ ಸರ್ವರ್ ಸಮಸ್ಯೆಯಿಲ್ಲ. ಅರ್ಹರಿಗೆ ಯೋಜನೆ ತಲುಪಿಸಲು ಸರ್ಕಾರ ಎಲ್ಲ ರೀತಿ ಸಿದ್ದತೆಯನ್ನು ಕೈಗೊಂಡಿದೆ. ನಮ್ಮ ಸರ್ಕಾರ ಬೆಲೆ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಬೆಲೆ ಏರಿಕೆ ನಿರ್ಧರಿಸಿದ್ದು, ಈಗ ಜಾರಿಯಾಗಿದೆ. ಇದೀಗ ಅವರೇ ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋರ್ಟ್‌ ಆದೇಶದಂತೆ 1400 ಕೋಟಿ ರೂ. ಕೇಂದ್ರ ಸರ್ಕಾರ ನೀಡಿದೆ. ವಿದ್ಯುತ್ ನಿರ್ವಹಣೆ ವೆಚ್ಚ ಹೆಚ್ಚಳವಾಗಿದ್ದರಿಂದ ಕೇಂದ್ರ ವಿದ್ಯುತ್ ಬಿಲ್ ಹೆಚ್ಚಳವಾಗಿದೆ. ಕೇಂದ್ರ ವಿದ್ಯುತ್ ಕಾಯಿದೆಯಂತೆ ವಿದ್ಯುತ್ ಬಿಲ್ ಹೆಚ್ಚಿಸಿರುವುದು ಬಿಜೆಪಿ ಸರ್ಕಾರ. ಇಂದು ಅವರೇ ಪ್ರತಿಭಟನೆ ನಡೆಸುತ್ತಿದ್ದಾರೆ” ಎಂದು ಟೀಕಿಸಿದರು.

“ವೈಟಿಪಿಎಸ್ ನಿರ್ವಹಣೆಯಲ್ಲಿ ಪವರ್ ಮ್ಯಾಕ್ ಸಂಸ್ಥೆಗೆ ನೀಡಿದ್ದ ಅವಧಿ ಪೂರ್ಣಗೊಂಡಿರುವ ಕುರಿತು ಮಾಹಿತಿಯಿಲ್ಲ. ಸದ್ಯಕ್ಕೆ ಅವರಿಗೆ ನಿರ್ವಹಣೆಯನ್ನು ಮುಂದುವರೆಸುವಂತೆ ಹೇಳಿ, ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ” ಎಂದರು.

ವಿದ್ಯುತ್ ಲೋಡ್ ಶೆಡ್ಡಿಂಗ್ ಕುರಿತಾಗಿ ಅಧಿಕಾರಿಗಳ ಸಭೆ ನಡೆಸಿ ಕಾರಣ ತಿಳಿದುಕೊಳ್ಳುವುದಾಗಿ ಹೇಳಿದರು. ವಿದ್ಯುತ್ ಬಾಕಿ ಇರುವ ಕುರಿತು ಮಾಹಿತಿ ಪಡೆಯುವದಾಗಿ ಹೇಳಿ ವಿದ್ಯುತ್ ಘಟಕ ಇರುವ ಜಿಲ್ಲೆಗಳಲ್ಲಿ ವಿದ್ಯುತ್ ಪೂರೈಕೆಗೆ ಸಮಸ್ಯೆಯಾಗದಂತೆ ಕ್ರಮವಹಿಸುವದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಕ್ಷ ವಿರೋಧಿಗಳನ್ನು ಹೊರಹಾಕಲು ಒತ್ತಾಯ; ಬಿಜೆಪಿ ಕಾರ್ಯಕರ್ತರ ಗಲಾಟೆ

“ವಿದ್ಯುತ್ ದರ ಏರಿಕೆ ಕುರಿತು ಕೆ ಎಸ್ ಈಶ್ವರಪ್ಪ ಹೇಳಿಕೆಗೆ ಉತ್ತರಿಸುವುದಿಲ್ಲ. ಅವರೇನು ವಿದ್ಯುತ್ ಮಂತ್ರಿಯಲ್ಲ. ಅವರು ಸಚಿವರಾಗಿ ರಾಜೀನಾಮೆ ಕೊಟ್ಟವರು ಅವರಿಗೇನು ಗೊತ್ತು” ಎಂದರು.

ಶಾಸಕರುಗಳಾದ ಹಂಪನಗೌಡ ಬಾದರ್ಲಿ, ಗ್ರಾಮೀಣ ಶಾಸಕ ದದ್ದಲ ಬಸನಗೌಡ, ಇಲಾಖೆ ಕಾರ್ಯದರ್ಶಿ ಗೌರವ ಗುಪ್ತಾ, ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ಪಂಜಕಪಾಂಡೆ ಸೇರಿ ‌ಆರ್‌ಟಿಪಿಎಸ್, ವೈಟಿಪಿಎಸ್ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...