ರಾಯಚೂರು | ದಲಿತ ಹೋರಾಟಗಾರ ಆರ್ ಮಾನಸಯ್ಯ ವಿರುದ್ಧ ಅಪಪ್ರಚಾರ; ಪ್ರಗತಿಪರ ಸಂಘಟನೆ ಖಂಡನೆ

Date:

ಶ್ರೀರಾಮಸೇನೆ ಸಂಘಟನೆಯು ದಲಿತ ಹೋರಾಟಗಾರ ಆರ್‌ ಮಾನಸಯ್ಯ ಅವರ ಮನೆಯ ಮುಂದೆ ಶವಯಾತ್ರೆ ನಡೆಸಿ, ಗಡೀಪಾರು ಮಾಡಬೇಕು ಎಂದಿರುವುದು ಹಾಗೂ ಅವರ ಬಗ್ಗೆ ಸುಳ್ಳು ಪ್ರಚಾರ ಮಾಡುವ ಮೂಲಕ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ದಲಿತಪರ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ರಾಯಚೂರು ಪಟ್ಟಣದ ಪ್ರವಾಸಿ ಮಂದಿರದಿಂದ ಸಹಾಯಕ ಆಯುಕ್ತರ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ಸಹಾಯಕ ಆಯುಕ್ತರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

“ಆರ್ ಮಾನಸಯ್ಯನವರು ಭಾರತದ ಸಂವಿಧಾನ, ಭಾರತ ದೇಶದ ಬಹು ಸಂಸ್ಕೃತಿಯ ಸ್ಥಾನಮಾನ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲಿನ ಅಪಾರವಾದ ಅಭಿಮಾನ ಮತ್ತು ದಲಿತರ ಅಸ್ಮಿತೆಯನ್ನು ಎತ್ತಿ ಹಿಡಿದವರು. ಇದನ್ನು ಸಹಿಸದ, ಸಂಘ ಪರಿವಾರ, ಶ್ರೀರಾಮ ಸೇನೆಯು, ಸಾಮಾಜಿಕ ಜಾಲತಾಣಗಳ ಮೂಲಕ ಅವರ ವಿರುದ್ಧ ಸುಳ್ಳು ಪ್ರಚಾರ ಮಾಡುವುದು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ ಮಾನಸಯ್ಯ ಹಿಂದೂ ವಿರೋಧಿ, ಮಾನಸಿಕ ಅಸ್ವಸ್ಥರು, ಕಾರ್ಮಿಕರಿಗೆ ಮೋಸ ಮಾಡಿದವರು, ಅರಣ್ಯ, ಭೂಮಿ ಕಬಳಿಕೆದಾರರೆಂದು ಸುಳ್ಳು ಪ್ರಚಾರ ಮಾಡಿದ್ದು, ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ವ್ಯಾಪಕವಾದ ಕೆಟ್ಟ ಪ್ರಚಾರದ ಮೂಲಕ ಸಂಘಪರಿವಾರಗಳು ಅವರ ತೇಜೋವಧೆಗೆ ಮುಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

1000045828

“ಲಿಂಗಸೂಗೂರು ಎಸಿ ಕಚೇರಿ ಮುಂದೆ ಶ್ರೀ ರಾಮಸೇನೆಯು ಪ್ರತಿಭಟನೆ ನಡೆಸಿ ಆರ್ ಮಾನಸಯ್ಯನವರ ಗಡಿಪಾರಿಗೆ ಒತ್ತಾಯಿಸಿತು ಮತ್ತು ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಒತ್ತಾಯಿಸಿದರು.

“ಮೋಸ, ಷಡ್ಯಂತ್ರ, ಕುತಂತ್ರ, ನಂಬಿಕೆ ದ್ರೋಹದಂತಹ ಹಣ ಕೃತ್ಯಗಳ ಮೂಲಕ ನಾಡಿನ ಹೆಸರಾಂತ ಪತ್ರಕರ್ತರು ಹಾಗೂ ಸಂಶೋಧಕರನ್ನು ಕೊಂದು ಹಾಕಿದ ಕುಖ್ಯಾತಿ ಇವರಿಗೆ ಸಲ್ಲುತ್ತದೆ. ನಾಡಿನ ದಾಬೋಲ್ಕರ್, ಗೋವಿಂದ್ ಪನ್ಸಾರೆ, ಗೌರಿ ಲಂಕೇಶ್ ಮತ್ತು ಎಂ ಎಂ ಕಲಬುರ್ಗಿಯವರ ಹತ್ಯೆಗಳು ರಕ್ತ ಸಾಕ್ಷಿಯಾಗಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತರ ಏಳಿಗೆಗೆ ಸರ್ಕಾರ ಮೀಸಲಿಟ್ಟ ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ: ರಮೇಶ್ ವೀರಾಪೂರು

“ಇಂದಿನ ಹೋರಾಟದ ಮೂಲಕ, ಶ್ರೀರಾಮ ಸೇನೆ ಅವರಿಂದ ಜತೆಗೆ ಕೂಡಲೇ, ಪ್ರಮೋದ್ ಮುತಾಲಿಕ್ ಸೇರಿದಂತೆ ಹಟ್ಟಿ ಕಾರ್ಯಕ್ರಮ ಸಂಘಟಿಸಿದ ಹಾಗೂ ಅದರಲ್ಲಿ ಭಾಗವಹಿಸಿದ ಎಲ್ಲ ಸಮಾಜಘಾತುಕ ಶಕ್ತಿಗಳ ವಿರುದ್ಧ ಸರ್ಕಾರ ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿ, ಸದರಿಯವರನ್ನು ಕೂಡಲೇ ಬಂಧಿಸಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಹನುಮಂತಪ್ಪ ಕುಣೆಕೆಲ್ಲೂರು, ಲಿಂಗಪ್ಪ ಪರಂಗಿ, ಸಂಜೀವಪ್ಪ ಹುನಕುಂಟಿ, ಮೋಹನ್ ಗೋಸ್ಲೆ, ಉಮೇಶ ಐಹೊಳ್ಳರ್, ಜಿಲಾನಿ ಪಾಷಾ ಕರವೇ, ದೇವರಾಜ ಸಂತೆಕೆಲ್ಲೂರು, ದುರುಗಪ್ಪ ಅಗ್ರಹಾರ, ಮಾದೇಶ ಸರ್ಜಾಪೂರು, ಯಮನಪ್ಪ, ಎಂ.ಗಂಗಾಧರ, ತಿಪ್ಪರಾಜ ಗೆಜ್ಜಲಗಟ್ಟಾ, ಶಿವು ಗೆಜ್ಜಲಗಟ್ಟಾ, ನಾಗರಾಜ, ರಾಮಣ್ಣ ಹೊನ್ನಹಳ್ಳಿ, ಶಿವಣ್ಣ ಪರಂಗಿ, ಸಿದ್ದಪ್ಪ ಪರಂಗಿ, ಆದೇಶ ನಗನೂರು, ಪ್ರಭುಲಿಂಗ ಮೇಗಳಮನಿ, ಪ್ರದೀಪ್ ಚಿಕ್ಕಹೆಸರೂರು, ಯಮನಪ್ಪ ಸರ್ಜಾಪೂರು, ಚಿದಾನಂದ ಕಸಬಾ ಲಿಂಗಸುಗೂರು, ಶರಣಪ್ಪ ಸಾಲಿ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...