ರಾಯಚೂರು | ಫಲಾನುಭವಿಗಳ ಜಮೀನಿನಲ್ಲಿ ಕೆಪಿಟಿಸಿಎಲ್ ಉಪಕೇಂದ್ರ ಸ್ಥಾಪನೆ ವಿರೋಧಿಸಿ ಪ್ರತಿಭಟನೆ

Date:

ಸರ್ಕಾರಿ ಮಂಜೂರಿ ಪಡೆದ ಫಲಾನುಭವಿಗಳ ಜಮೀನಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಉಪಕೇಂದ್ರವನ್ನು ಸ್ಥಾಪಿಸಲು ಮುಂದಾಗಿರುವ ಕ್ರಮವನ್ನು ತಕ್ಷಣವೇ ರದ್ದುಪಡಿಸಿ, ಅದನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಭೂಮಿ ವಸತಿ ಹಕ್ಕು ವಂಚಿತರ ಸಂಘಟನೆಯ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರಾಯಚೂರು ತಾಲ್ಲೂಕಿನ ಚಂದ್ರಬಂಡಾ ಹೋಬಳಿಯ ಅರಸೀಗೆರಾ ಸೀಮಾಂತರದಲ್ಲಿ ಬರುವ ಜಮೀನಿನ ಸರ್ವೇ 162/*/” ರಲ್ಲಿ ವಿಸ್ತೀರ್ಣ 70 ಎಕರೆ 22 ಗುಂಟೆ ಜಮೀನುನಲ್ಲಿ ಸಾರ್ವಜನಿಕ ರುದ್ರ ಭೂಮಿಗಾಗಿ 02 ಎಕರೆ ಹಾಗೂ ಇಲ್ಲಿನ ಮಕ್ಕಳ ವಿದ್ಯಾಬ್ಯಾಸಕ್ಕಾಗಿ 05 ಎಕರೆ ಶಾಲಾ ಜಾಗಕ್ಕಾಗಿ ಕಾಯ್ದಿರಿಸಲಾಗಿದೆ ಹಾಗೂ 09 ಫಲಾನುಭವಿಗಳಿಗೆ ಪಹಣಿ ನೀಡಿರುತ್ತಾರೆ ಕೂಡಲೇ ಆದೇಶವನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಸುಮಾರು ಕಳೆದ 34 ವರ್ಷಗಳಿಂದೆ ಭೂ ಮಂಜೂರಿ ಸಮಿತಿಯು ತಲಾ ಒಬ್ಬೊಬ್ಬರಿಗೆ ಎರಡ್ಮೂರು ಎಕರೆಯಂತೆ ಹೀಗೆ ಒಟ್ಟು 09 ಫಲಾನುಭವಿಗಳಿಗೆ ಕಳೆದ 34 ವರ್ಷಗಳಿಂದ ಮಂಜೂರಾಗಿದ್ದ ಭೂಮಿಯಲ್ಲಿ ಸಾಗುವಳಿ ಮಾಡುತ್ತಾ 09 ಜನರ ಹೆಸರಿನಲ್ಲಿ ಪಹಣಿಯನ್ನು ಮಾಡಿರುತ್ತಾರೆ ಕೂಡಲೇ ಕೈಬಿಡಬೇಕು. ಸರ್ಕಾರದ ಸಾಮಾಜಿಕ ನ್ಯಾಯದ ಉದ್ದೇಶದಡಿ ಮಂಜೂರಾದ ಫಲಾನುಭವಿಗಳ ಜಮೀನನ್ನು ಬಲವಂತವಾಗಿ ವಶಪಡಿಸಿಕೊಳ್ಳುವ ಕ್ರಮ ಅಕ್ಷಮ್ಯವಾಗಿದ್ದು, ಇದರಿಂದ ಬಡ ಮತ್ತು ಹಿಂದುಳಿದ ವರ್ಗದ ಜನರ ಬದುಕಿಗೆ ಧಕ್ಕೆಯಾಗುತ್ತದೆ. ಉಪಕೇಂದ್ರ ಸ್ಥಾಪನೆಗೆ ಪರ್ಯಾಯವಾಗಿ ಸರ್ಕಾರಿ ಬಯಲು ಜಮೀನು ಅಥವಾ ಕೈಗಾರಿಕಾ ಬಳಕೆಗೆ ಮೀಸಲಾದ ಪ್ರದೇಶವನ್ನು ಆಯ್ಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ಉದ್ದೇಶಿಸಿ ಮಾರೆಪ್ಪ ಹರವಿ ಮಾತನಾಡಿ, ಫಲಾನುಭವಿಗಳ ಜಮೀನು ಅವರ ಬದುಕಿನ ಏಕೈಕ ಆಧಾರ. ಅಭಿವೃದ್ಧಿಯ ಹೆಸರಿನಲ್ಲಿ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಬಿಡುವುದಿಲ್ಲ. ಈ ಯೋಜನೆಯನ್ನು ತಕ್ಷಣವೇ ರದ್ದುಪಡಿಸಿ, ಬೇರೆ ಕಡೆ ಸ್ಥಳಾಂತರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಎಂಪಿಸಿಎಲ್- ಕೃಷ್ಣಬ್ರಿಡ್ಜ್ ರಸ್ತೆಯಲ್ಲಿ ನಿಲ್ಲದ ರಸ್ತೆ ಅಪಘಾತ

ಪ್ರತಿಭಟನೆಯಲ್ಲಿ ಆಂಜನೇಯ ಕುರುಬದೊಡ್ಡಿ, ಹನುಮಂತ ಗುಂಗಳ್ಳಿ, ಎದ್ದೇಳು ಕರ್ನಾಟಕ ಜಿಲ್ಲಾಸಂಚಾಲಕ ಶರಣುಕುಮಾರ ಮದ್ದಮ್ಮಗುಡ್ಡಿ, ಬಂಗಾರಿ ನರಸಿಂಹ, ರಂಗರೆಡ್ಡಿ ಜೇಗರಕಲ್‌, ಸುರೇಶ ನಾಯಕ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...