ರಾಯಚೂರು | ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಪ್ರತಿಭಟನೆ; ಬಿಜೆಪಿ ಮಾಜಿ ಸಚಿವರು, ಶಾಸಕರ ಬಂಧನ-ಬಿಡುಗಡೆ

Date:

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣವನ್ನು ಸಿಬಿಐಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ನಿಗಮದ ಅನುದಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗುವಂತೆ ನಿಗಾವಹಿಸಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಿದರು.

ರಾಯಚೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಶಾಸಕ ಶಿವರಾಜ ಪಾಟೀಲ್, ಮಾಜಿ ಸಚಿವ ಕೆ ಶಿವನಗೌಡ ನಾಯಕ, ಮಾಜಿ ಸಂಸದ ಬಿ ವಿ ನಾಯಕ ಹಾಗೂ ಹಿರಿಯ ಮುಖಂಡ ಎನ್ ಶಂಕ್ರಪ್ಪ ಸೇರಿ ಅನೇಕ ಮುಖಂಡರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ನಿಗಮದ ಅದ್ಯಕ್ಷ ಸೇರಿದಂತೆ ಸಾಕಷ್ಟು ಜನರು ಇದರಲ್ಲಿ ಶಾಮೀಲಾಗಿದ್ದು, ಅವರನ್ನು ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಡಾ. ಶಿವರಾಜ ಪಾಟೀಲ್ ಮಾತನಾಡಿ, “ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾದ ಪ್ರತಿಯೊಬ್ಬರ ತಲೆದಂಡ ಆಗುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ವಾಲ್ಮೀಕಿ ಸಮಾಜದ ಜನರಿಗೆ ನ್ಯಾಯ ಸಿಗಬೇಕು ಹಾಗೂ ಇವರುಗಳ ಹಣದ ದಾಹಕ್ಕೆ ಬಲಿಯಾದ ಅಧಿಕಾರಿಯ ಸಾವು ವ್ಯರ್ಥವಾಗಬಾರದು. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಶಾಮಿಲಾದವರ ತಲೆದಂಡವಾಗಬೇಕು” ಎಂದು ಆಗ್ರಹಿಸಿದರು.

ಮಾಜಿ ಸಚಿವ ಕೆ ಶಿವನಗೌಡ ಮಾತನಾಡಿ, “ಈ ಹಗರಣದಲ್ಲಿ ಸರ್ಕಾರದ ಸಂಪೂರ್ಣ ಯಂತ್ರಾಂಗದ ಸಹಕಾರವಿಲ್ಲದೆ ಕೋಟಿಗಟ್ಟಲೆ ಹಣ ಹಲವು ಅಕೌಂಟ್‌ಗಳಿಗೆ ವರ್ಗಾವಣೆಯಾಗುವುದು ಅಸಾಧ್ಯ. ಇದು ಸಂಪೂರ್ಣ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಪಾಪದ ಕೂಪವಾಗಿದೆ.
ಈ ಹಗರಣದಲ್ಲಿ ಭಾಗಿಯಾದ ನಿಗಮದ ಅಧ್ಯಕ್ಷರು, ಶಾಸಕರು, ಅಧಿಕಾರಿಗಳು ಹಾಗೂ ಸಚಿವರು ಹೇಗೆ ಉತ್ತರದಾಯಿಗಳೋ ಅವರಿಗಿಂತಲೂ ಒಂದು ಕೈ ಮೇಲೆ” ಎಂದರು.

“ಬಡವರ, ಬುಡಕಟ್ಟು ಜನರ ಪಾಲಿನ ಹಣವನ್ನು ಕದ್ದು ರಾಜಕೀಯದ ತೃಷೆಗೆ ಬಳಸಿಕೊಂಡಿರುವುದು ನಮ್ಮ ಸಮುದಾಯಕ್ಕಾಗಿರುವ ಅನ್ಯಾಯ. ಈ ಕೂಡಲೇ ಹಗರಣ ಸಿಬಿಐಗೆ ವಹಿಸಿ ನ್ಯಾಯ ಒದಗಿಸಿಕೊಡಬೇಕು” ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎನ್ ಶಂಕ್ರಪ್ಪ ಮಾತನಾಡಿ, “ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದ್ದು, ಬಡವರ ದುಡ್ಡು ಕದಿಯುವ, ದಲಿತರ ಅನ್ನ ಕಸಿಯುವ ಇಂತಹವರಿಗೆ ಸರ್ಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ. ಇವರೆಲ್ಲರೂ ಅಧಿಕಾರದಲ್ಲಿ ಮುಂದುವರೆದರೆ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಬಡವರಿಗೆ ನ್ಯಾಯ ಒದಗಿಸಿಕೊಡಬೇಕು” ಎಂದರು.

“ಪರಿಶಿಷ್ಟರ ಹಣವನ್ನೂ ಬಿಡದೆ ಕದ್ದಿರುವ ಇವರು ಯಾರ ಹಿತಕ್ಕಾಗಿ ಕೆಲಸ ಮಾಡಬಲ್ಲರು. ಇವರಿಗೆ ಚುನಾವಣೆಯಲ್ಲಿ ಗೆಲ್ಲಲು ಮಾತ್ರ ನಾವು ಬೇಕು, ಗೆದ್ದ ಮೇಲೆ ಅವರನ್ನು ಮತ್ತಷ್ಟು ತುಳಿಯುತ್ತಿದ್ದಾರೆ. ಕಾಂಗ್ರೆಸ್ಸಿನ ಹಳೆಯ ಚಾಳಿ ಮುಂದುವರೆಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಗ್ಯಾರೆಂಟಿ ಹೆಸರಿನಲ್ಲಿ ನಮ್ಮ ರಾಜ್ಯವನ್ನು ದಿವಾಳಿಯ ಅಂಚಿಗೆ ತಂದು ನಿಲ್ಲಿಸಿದ್ದು, ಎಲ್ಲ ನಿಗಮಗಳಲ್ಲೂ ಹಗರಣಗಳ ಸರಮಾಲೆಯೊಂದಿಗೆ ಸಾಧ್ಯವಾದಷ್ಟು ದೋಚಬೇಕೆಂದು ನಿರ್ಧಾರ ಮಾಡಿದಂತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ-ಕಿತ್ತೂರ-ಧಾರವಾಡ ಮಾರ್ಗದಲ್ಲಿ ಹೊಸ ರೈಲು ಯೋಜನೆಗೆ ಶೆಟ್ಟರ್ ಮನವಿ

ಪ್ರತಿಭಟನೆಯಲ್ಲಿ ಮಾಜಿ ಸಂಸದ ಬಿ ವಿ ನಾಯಕ, ಮಾಜಿ ಶಾಸಕ ಗಂಗಾಧರ ನಾಯಕ, ಮುಖಂಡರುಗಳಾದ ತ್ರಿವಿಕ್ರಮ ಜೋಶಿ, ಕೊಟ್ರೇಶಪ್ಪ ಕೋರಿ, ಪಿ ಯಲ್ಲಪ್ಪ, ಶರಣಪ್ಪ ಗೌಡ ಜಾಡಲದಿನ್ನಿ, ಈ ಶಶಿರಾಜ, ಗಿರಿಶ ಕನಕವೀಡು ಸೇರಿದಂತೆ ಬಹುತೇಕ ಕಾರ್ಯಕರ್ತರು ಇದ್ದರು.

ವರದಿ : ಹಫೀ ಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...