ರಾಯಚೂರು | ಸ್ವ-ಸಹಾಯ ಗುಂಪುಗಳಿಂದ ತರಕಾರಿ-ಮೊಟ್ಟೆ ಸರಬರಾಜು ಖಂಡಿಸಿ ಬಿಸಿಯೂಟ ನೌಕರರಿಂದ ಪ್ರತಿಭಟನೆ

Date:

ಸರಕಾರಿ ಶಾಲೆಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ತರಕಾರಿ, ಬಾಳೆ ಹಣ್ಣು ಹಾಗೂ ಮೊಟ್ಟೆಗಳ ಸರಬರಾಜನ್ನು ಸ್ವ-ಸಹಾಯ ಗುಂಪುಗಳಿಗೆ ನೀಡಲು ಜಿಲ್ಲಾ ಪಂಚಾಯತ್ ಮುಂದಾಗಿರುವ ನಿರ್ಧಾರವನ್ನು ಖಂಡಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ನೌಕರರ ಜಿಲ್ಲಾ ಸಮಿತಿಯಿಂದ ನಗರದ ಟಿಪ್ಪಸುಲ್ತಾನ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಳೆದ 24 ವರ್ಷಗಳಿಂದ ಅತಿ ಕಡಿಮೆ ಸಂಬಳಕ್ಕೆ ಹೆಚ್ಚು ಹೊಣೆಗಾರಿಕೆಯಿಂದ ಕೆಲಸ ಮಾಡುತ್ತಿರುವ ಬಿಸಿಯೂಟ ನೌಕರರ ಶ್ರಮವನ್ನು ಕಡೆಗಣಿಸಿ, ಯಾವುದೇ ಚರ್ಚೆ ಇಲ್ಲದೇ ಸ್ವ-ಸಹಾಯ ಗುಂಪುಗಳಿಗೆ ಸರಬರಾಜು ನೀಡಿರುವುದು ನೌಕರ ವಿರೋಧಿ ನಡೆಯಾಗಿದೆ. ಈವರೆಗೆ ಶಾಲಾ ಮುಖ್ಯೋಪಾಧ್ಯಾಯರ ಸಹಕಾರದೊಂದಿಗೆ ಬಿಸಿಯೂಟ ನೌಕರರೇ ತರಕಾರಿ, ಹಣ್ಣು ಹಾಗೂ ಮೊಟ್ಟೆಗೆ ಳನ್ನು ಖರೀದಿಸಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುತ್ತಿದ್ದರು. ಈ ವ್ಯವಸ್ಥೆ ಸರಾಗವಾಗಿ ನಡೆಯುತ್ತಿರುವಾಗ ಹೊಸದಾಗಿ ಸ್ವ-ಸಹಾಯ ಗುಂಪುಗಳನ್ನು ತರಲಾಗಿರುವುದು ಯೋಜನೆಯನ್ನು ಖಾಸಗೀಕರಣ ಮಾಡುವ ಹುನ್ನಾರದ ಭಾಗವಾಗಿದೆ ಎಂದು ಆರೋಪಿಸಿದರು.

ಪ್ರಧಾನ ಕಾರ್ಯದರ್ಶಿ ಮರಿಯಮ್ಮ ಮಾತನಾಡಿ, ಮಹಿಳಾ ಸಬಲೀಕರಣದ ಹೆಸರಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಆದರೆ ಬಿಸಿಯೂಟ ನೌಕರರ ಬಹುಪಾಲು ಮಹಿಳೆಯರೇ ಎಂಬುದನ್ನು ಅಧಿಕಾರಿಗಳು ಮರೆತಿದ್ದಾರೆ. ಇದರಿಂದ ನಮ್ಮ ಉದ್ಯೋಗಕ್ಕೆ ಧಕ್ಕೆಯಾಗುವ ಆತಂಕ ಎದುರಾಗಿದೆ ಎಂದರು. ಸ್ವ-ಸಹಾಯ ಗುಂಪುಗಳಿಗೆ ತರಕಾರಿ, ಬಾಳೆಹಣ್ಣು ಮತ್ತು ಮೊಟ್ಟೆಗಳ ಸರಬರಾಜು ನೀಡುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಶಾಲೆಯಲ್ಲಿ ವಿದ್ಯುತ್‌ ತಂತಿ ತಗುಲಿ ವಿದ್ಯಾರ್ಥಿನಿ ಸಾವು

ಈ ವೇಳೆ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೆಸ್ತಾ ಪ್ರಧಾನ ಕಾರ್ಯದರ್ಶಿ ಮರಿಯಮ್ಮ ಜಿಲ್ಲಾ ಅಧ್ಯಕ್ಷೆ ರೆಣುಕಮ್ಮ ಸಿಐಟಿಯು ಜಿಲ್ಲಾ ಅಧ್ಯಕ್ಷ ಹೆಚ್. ಪದ್ಮ, ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಖಜಾಂಚಿ ಮಹಮ್ಮದ್ ಹನೀಫ್ ಸೇರಿದಂತೆ ಅನೇಕ ಬಿಸಿಯೂಟ ನೌಕರರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...