ರಾಯಚೂರು | ರಸ್ತೆಗುಂಡಿ ಸರಿಪಡಿಸಲು ಆಗ್ರಹಿಸಿ ಗಿಡ ನೆಟ್ಟು ಆರ್‌ವೈಎಫ್‌ಐ ಸಂಘಟನೆಯಿಂದ ಪ್ರತಿಭಟನೆ

Date:

ರಾಯಚೂರು ನಗರದ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟದ ಸದಸ್ಯರು ಗಿಡ ನೆಟ್ಟು ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದ ಬಸ್ ನಿಲ್ದಾಣ ಹೋಗುವ ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷ ಮಳೆಗಾಲದಲ್ಲಿ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಅಪಘಾತಗಳಾಗುತ್ತಿವೆ. ಕಳೆದ ವಿಧಾನಸಭೆ ಚುನಾವಣೆಯ ಮುಂಚೆ ನೀತಿ ಸಂಹಿತೆಯ ಜಾರಿಯಾಗುವ ಮುಂಚೆ ನಿರ್ಮಿಸಿದ ರಸ್ತೆಗಳು ಎರಡು ವರ್ಷಗಳ ಒಳಗೆ ಅಧೋಗತಿಗೆ ತಲುಪಿದ್ದು, ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ. ಇದಕ್ಕೆ ಶಾಸಕರೇ ನೇರ ಹೊಣೆ ಹೊರಬೇಕು. ರಾಜ್ಯಕ್ಕೆ ವಿದ್ಯುತ್, ಚಿನ್ನ ನೀಡುವ ರಾಯಚೂರಿನ ಜಿಲ್ಲಾ ಕೇಂದ್ರದಲ್ಲಿಯೇ ಈ ಸ್ಥಿತಿಯಿದ್ದು ಅಭಿವೃದ್ಧಿಗೆ ಕೊಡಲಿ ಪೆಟ್ಟಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಕನಿಷ್ಠ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆ‌ ಪರೀಕ್ಷಿಸುವಂತಿದೆ. ಜಿಲ್ಲೆಯಿಂದ ಇಬ್ಬರು ಮಂತ್ರಿ, ಇಬ್ಬರು ಎಂಎಲ್‌ಸಿ, ಶಾಸಕರಿದ್ದರು ಜಿಲ್ಲಾ ಕೇಂದ್ರದಲ್ಲಿ ಉತ್ತಮವಾದ ರಸ್ತೆಯಿಲ್ಲದಿರುವುದು ದುರದೃಷ್ಟಕರ ಸಂಗತಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಂಡಿ ಮುಚ್ಚುವುದರೊಂದಿಗೆ ರಸ್ತೆಗಳ ಗುಣಮಟ್ಟ ಹಾಳಾಗದಿರುವ ಬಗ್ಗೆ ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ರಾಯಚೂರು | ಹಣಕಾಸು ಕಂಪನಿಗಳಿಂದ ವಂಚನೆ: ನ್ಯಾಯಕ್ಕೆ ಆಗ್ರಹಿಸಿ ಸಂತ್ರಸ್ತರಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟ(RYFI) ಜಿಲ್ಲಾ ಮುಖಂಡ ಅಜೀಜ್ ಜಾಗೀರ್ದಾರ್, ನಿರಂಜನ್ ಕುಮಾರ್, ಮಾರೆಪ್ಪ ಅರವಿ, ರವಿಚಂದ್ರನ್, ನರಸಪ್ಪ, ಆಂಜನೇಯ, ಎಲ್ಲಪ್ಪ, ಹನೀಫ್ ಅಬಕಾರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...