ರಾಯಚೂರು | ಗ್ರಾಮಗಳ ಸಮಗ್ರ ಅಭಿವೃದ್ಧಿ ಒತ್ತಾಯಿಸಿ ಪ್ರತಿಭಟನೆ

Date:

ಲಿಂಗಸೂಗೂರು ತಾಲೂಕಿನ ರೊಡಲಬಂಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಕಡ್ಡೋಣ ತವಗ ಸೇರಿದಂತೆ ಎಲ್ಲ ಗ್ರಾಮಗಳ ಸಮಗ್ರ ಅಭವೃದ್ಧಿಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ), ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ), ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್), ಕರ್ನಾಟಕ ಪ್ರಾಂತ ಕೂಲಿಕಾರ ಸಂಘಟನೆ ಸಂಘಟನೆಗಳ ಕಾರ್ಯಕರ್ತರು ಲಿಂಗಸೂಗೂರು ಎಸಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, “ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಪ್ರತಿಭಟನೆ ಬಗ್ಗೆ ಅಧಿಕಾರಿಗಳಿಗೆ, ಶಾಸಕರಿಗೆ ಮಾಹಿತಿ ನೀಡಿದ್ದರೂ, ಸ್ಥಳಕ್ಕೆ ಬಂದಿಲ್ಲ. ಶಾಸಕರು ವೋಟು ಖರೀದಿ ಮಾಡಿ ಚುನಾವಣೆಯಲ್ಲಿ ಗೆದ್ದಿರಬಹುದು. ಆದರೆ, ಮತದಾರರ ಕುಂದು ಕೊರತೆ ಆಲಿಸದ ಈ ಭ್ರಷ್ಟ ಶಾಸಕ ನಮಗೆ ಬೇಕೆ?” ಎಂದು ಕಿಡಿಕಾರಿದರು.

ಪ್ರತಿಭಟನಾ ಸ್ಥಳಕ್ಕೆ ಸಹಾಯಕ ಆಯುಕ್ತರು ಶಿಂಧೆ ಅವಿನಾಶ್, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಅಮರೇಶ, ಜೆಸ್ಕಾಂನ ಎಇಇ ಕೆಂಚಪ್ಪ ಬಾವಿಮನಿ, ಕೆಕೆ ಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಆರ್. ವಾಯ್ ವನಸೋರೆ, ಪ್ರಧಾಮಂತ್ರಿ ಗ್ರಾಮ ಸಡಕ್, ಯೋಜನೆಯ ಉಪ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಮನವಿ ಸ್ವೀಕರಿಸಿದರು. ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು, ಸಿಐಟಿಯು ಮುಖಂಡ ಮಹಮ್ಮದ್ ಹನೀಫ್, ಕೆ ಪಿ ಆರ್ ಎಸ್ ನ ಮುಖಂಡ ಶಿವಣ್ಣ ಆಂಜನೇಯ, ಶಿವಕುಮಾರ್ ಪಲ್ಲೇ ದ್, ಬಸವರಾಜ ಯಡ್ಡಳ್ಳಿ, ಮುತ್ತಣ್ಣ ಕಂಬಳಿ, ಬಾಬಾ ಜಾನಿ, ಅಲ್ಲಾಭಕ್ಷ, ರಂಗಪ್ಪ ದೊರೆ ದುರ್ಗಪ್ಪ ಪಾಟೀಲ್, ದಾವಲ್ ಸಾಬ್, ಶಂಕರ್, ಸಿದ್ದಣ್ಣ, ರುದ್ರಗೌಡ, ಶಂಭುನಾಥ್, ಡಿವೈಎಫ್ಐ ಮುಖಂಡ ಕಾಶಿಪತಿ, ತೋಟೆಂದ್ರ ಅಂಗಡಿ, ಕೂಲಿಕಾರ ಸಂಘಟನೆಯ ನಾಗರತ್ನಾ ನೀರಲಕೇರಿ, ಮಹಿಬೂಬ್ ನಿಂಗಪ್ಪ ಎಂ., ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...