ರಾಯಚೂರು | ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Date:

  • ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ವತಿಯಿಂದ ಹೋರಾಟ
  • ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿ’ ಎಂದು ಘೋಷಣೆ

ರಾಯಚೂರಿನಲ್ಲಿ ಏಮ್ಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ಯಿಂದ ಶುಕ್ರಮಾರ ಕರೆಕೊಟ್ಟಿದ್ದ ರಾಯಚೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಯಚೂರು ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ಸಾಗಿ ‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿರಿ’ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚುವುದರ ಮೂಲಕ ಬಂದ್‌ಗೆ ಬೆಂಬಲ ಸೂಚಿಸಿದ್ದರು. ನಗರದ ಸರಾಫ್ ಬಜಾರ್, ಬಟ್ಟೆ ಬಜಾರ್, ತರಕಾರಿ ಮಾರುಕಟ್ಟೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು.

ಅಲ್ಲಲ್ಲಿ ಕೆಲ ಕಿರಾಣಿ ಅಂಗಡಿಗಳು ಸೇರಿದಂತೆ ಇತರೆ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿತ್ತು. ಆದರೆ, ಬಸ್ ಹಾಗೂ ಆಟೋ ಸಂಚಾರಕ್ಕೆ ಯಾವುದೇ ಅಡಚಣೆ ಇರಲಿಲ್ಲ.

ರಾಯಚೂರಿನಲ್ಲಿಯೇ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯಿಸಿ ಕಳೆದ 316 ದಿನಗಳಿಂದ ಹೋರಾಟ ನಡೆಯುತ್ತಿದೆ. ಜೊತೆಗೆ ಸರದಿ ಉಪವಾಸ ಸತ್ಯಾಗ್ರಹ ಕೂಡ ನಡೆಯುತ್ತಿದ್ದು, 66ನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, “ಸರ್ಕಾರವು ರಾಯಚೂರಿಗೆ ನ್ಯಾಯಯುತವಾಗಿ ಏಮ್ಸ್ ನೀಡಬೇಕು. ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು” ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ರವಿ ಬೋಸರಾಜ್ ಮಾತನಾಡಿ, “ಸರ್ಕಾರವು ಏಮ್ಸ್ ನೀಡುವುದಾಗಿ ನಂಬಿಸಿ ದ್ರೋಹ ಮಾಡಿದೆ. ಏಮ್ಸ್ ಮಂಜೂರು ಮಾಡದಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಗೆ ಪಕ್ಷಾತೀತವಾಗಿ ಎಲ್ಲ ಪಕ್ಷದ ಮುಖಂಡರು, ವ್ಯಾಪಾರಸ್ಥರು, ವಿವಿಧ ಸಂಘಟನೆಗಳು, ಅಂಗನವಾಡಿ ಶಿಕ್ಷಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ವಿವಿಧ ಶಾಲಾ-ಕಾಲೇಜುಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಹೋರಾಟ ಸಮಿತಿಯ ಮುಖಂಡ ಡಾ.ಬಸವರಾಜ್ ಕಳಸ, ಅಶೋಕ್ ಕುಮಾರ್, ಎನ್.ಮಹಾವೀರ್, ಎಂ.ಆರ್.ಬೇರಿ, ಸುಲೋಚನಾ ಸಂಘ, ವಿನಯ್ ಕುಮಾರ್, ಗುರುರಾಜ್, ಕಾಮರಾಜ ಪಾಟೀಲ್, ಬಸವರಾಜ್ ಮಿಮಿಕ್ರಿ, ಜಾನ್ ವೆಸ್ಲಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...