ರಾಯಚೂರು | ನ.25ರಿಂದ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಧರಣಿ

Date:

ರಾಜ್ಯದಲ್ಲಿ ಮಧ್ಯಪಾನ ನಿಷೇಧಕ್ಕೆ ಗ್ರಾಮ ಪಂಚಾಯಿತಿಗಳಿಗೆ ಪರಮಾಧಿಕಾರ ನೀಡುವುದು, ಅಕ್ರಮ ಮದ್ಯ ಸಾಗಾಣೆ ತಡೆಯಲು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಕರ್ನಾಟಕದಿಂದ ನ.25 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಹಿಳೆಯರ ಸತ್ಯಾಗ್ರಹ ಪ್ರಾರಂಭಿಸಲಾಗುತ್ತದೆ ಎಂದು ಸಂಘಟನೆ ವಿರುಪಮ್ಮ ಹೇಳಿದರು.

ಗುರುವಾರ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ದೇಶದ ಹರಿಯಾಣ, ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಅಲ್ಲಿಯ ಗ್ರಾಮಸಭೆಗಳ ನಿರ್ಣಯವೇ ಅಂತಿಮವಾಗಿದೆ. ಗ್ರಾಮಸಭೆಯಲ್ಲಿ ಶೇ.20 ಮಹಿಳೆಯರು ಸಹಿ ನೀಡಿ ಒಪ್ಪಿಗೆ ನೀಡಿದರೆ ಮದ್ಯದಂಗಡಿ ತೆಗೆಯಲು ಪರವಾನಿಗೆ ರದ್ದುಗೊಳಿಸಲಾಗುತ್ತದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಜಾರಿಗೊಳಿಸಬೇಕುʼ ಎಂದು ಒತ್ತಾಯಿಸಿದರು.

ʼ2016 ವರೆಗೆ ಗ್ರಾಮ ಸಭೆಗಳಿಗೆ ಇರುವ ಅಧಿಕಾರವನ್ನು ರಾಜ್ಯದಲ್ಲಿ ತೆಗೆದುಹಾಕಿದ್ದು ಮರು ಸ್ಥಾಪಿಸಬೇಕು. ರಾಜ್ಯದ ಮನೆಗಳಲ್ಲಿ, ಪಾನ ಶಾಪ್, ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸಲಾಗುತ್ತಿದೆ. ಅಬಕಾರಿ ಇಲಾಖೆ ಸೇರಿದಂತೆ ಸಂಬಂಧಿಸಿ ಇಲಾಖೆಗಳಿಗೆ ಲಿಖಿತ ದೂರು ನೀಡಿದರೂ‌ ಯಾವುದೇ ಕ್ರಮವಾಗಿಲ್ಲ. ಕೂಡಲೇ ಮಹಿಳೆಯರ ಜಾಗೃತ ಸಮಿತಿಗಳಿಗೆ ಅರೆ ನ್ಯಾಯಿಕ ಅಧಿಕಾರ ನೀಡಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ.ಶಾರದಾ ನಾಯಕ ಮಾತನಾಡಿ, ‘ಮದ್ಯ ಸೇವನೆಯಿಂದ ಕುಟುಂಬ, ಸಮಾಜದ ಸ್ವಾಸ್ಥ ಹಾಳಾಗುತ್ತಿದೆ. ಕೂಡಲೇ ಮದ್ಯಪಾನ ನಿಷೇಧಕ್ಕೆ ಸರ್ಕಾರ ಮುಂದಾಗಬೇಕಿದೆ. ಅಬಕಾರಿ ಆದಾಯದ ಮೇಲೆ ಸರ್ಕಾರ ಅವಲಂಬಿತವಾಗಿರುವುದನ್ನು ತಪ್ಪಿಸಿ ನೂರಾರು ಮಹಿಳೆಯರನ್ನು ಸರ್ಕಾರ ರಕ್ಷಣೆ ಮಾಡಬೇಕಿದೆ’ ಎಂದರು.

ಈ ಸಂದರ್ಭದಲ್ಲಿ ಹುಚ್ಚಮ್ಮ, ಮಾರೆಮ್ಮ,ಗುರುರಾಜ ಇದ್ದರು.

ಇದನ್ನೂ ಓದಿ : ಬೀದರ್‌ | ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಅಭಿಯಾನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...