ರಾಯಚೂರು | ಪೊಲೀಸರು ತಪ್ಪಿತಸ್ಥರ ರಕ್ಷಣೆಗೆ ನಿಂತಿರುವುದನ್ನು ವಿರೋಧಿಸಿ ಸೆ.18ರಂದು ಪ್ರತಿಭಟನೆ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಮಾದಿಗ ಸಮೂದಾಯದವರ ಮೇಲೆ ಎಸ್‌ಟಿ ಜನಾಂಗದವರು ವಿನಾಕಾರಣ ಹಲ್ಲೆ ಮಾಡಿರುವುದನ್ನು ಖಂಡಿಸಿ, ಪ್ರತಿ ದೂರು ರದ್ದಿಗೆ ಆಗ್ರಹಿಸಿ ಸೆಪ್ಟೆಂಬರ್‌ 18ರಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಚಲೋ ಹಿರೇಕೂಡ್ಲಿಗಿ ಪ್ರತಿಭಟನಾ ಸಮಾವೇಶ ನಡೆಸಲಾಗುತ್ತದೆ ಎಂದು ಹೋರಾಟಗಾರ ಎಂ ಆರ್ ಭೇರಿ ಹೇಳಿದರು.

ರಾಯಚೂರು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, “ಚಲನಚಿತ್ರ ನಟ ಕಿಚ್ಚ ಸುದೀಪ್ ಹುಟ್ಟಹಬ್ಬದ ಅಂಗವಾಗಿ ಎಸ್‌ಟಿ ಯುವಕರು ಪಟಾಕಿ ಸಿಡಿಸಿದ್ದರು. ಈ ಹಿನ್ನೆಲೆಯಲ್ಲಿ, ʼಪಟಾಕಿ ಸಿಡಿಸುವುದರಿಂದ ಜಾನುವಾರುಗಳು ಹೆದರುತ್ತವೆ. ಮಕ್ಕಳು, ವೃದ್ದರಿಗೂ ಅಪಾಯವೆಂದು ಮಾದಿಗ ಸಮುದಾಯದ ಜನರು ಹೇಳಿದ್ದಕ್ಕೆ ಕುಪಿತಗೊಂಡ ಎಸ್‌ಟಿ ಯುವಕರು ಹಲ್ಲೆ ನಡೆಸಿ ಮಾರನೇ ದಿನ ಗುಂಪು ಕಟ್ಟಿಕೊಂಡು ಮತ್ತೊಮ್ಮೆ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತು ಗಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಮೂರು ದಿನದ ನಂತರ ಎಸ್‌ಟಿ ಯುವಕರಿಂದ ಪ್ರತಿದೂರು ಸ್ವೀಕರಿಸಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ” ಎಂದು ಆರೋಪಿಸಿದರು.

“ರಾಜಕೀಯ ಒತ್ತಡದಿಂದ ಹಲ್ಲೆಗೊಳಗಾದವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಮಾನಸಿಕ ಹಿಂಸೆ ನೀಡುವ ಮತ್ತೊಂದು ದೌರ್ಜನ್ಯ ನಡೆಸಿದ್ದಾರೆ. ಹಲ್ಲೆಗೆ ಒಳಗಾದವರ ವಿರುದ್ಧವೇ ಪೊಲೀಸರು ಪುನಃ ಪ್ರಕರಣ ದಾಖಲಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೂರು ಪ್ರತಿದೂರು ದಾಖಲಿಸಿ ಹಲ್ಲೆ ಮಾಡಿದವರ ರಕ್ಷಣೆಗೆ ಪೊಲೀಸರು ನಿಂತಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 18 ರಂದು ಗಬ್ಬೂರಿನಿಂದ ಅನೇಕ ದಲಿತ, ಪ್ರಗತಿಪರ, ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಕಾಲ್ನಡಿಗೆ ಮೂಲಕ ಹಿರೇಕೂಡ್ಲಿಗಿಗೆ ತೆರಳಿ ಹಲ್ಲೆಗೊಳಗಾದ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತದೆ. ಪೊಲೀಸರು ಶೋಷಿತರ ಮೇಲೆ ಹಲ್ಲೆ, ದೌರ್ಜನ್ಯವಾದಾಗಲೆಲ್ಲ ಕೌಂಟರ್ ಕೇಸ್ ದಾಖಲಿಸುವ ಮೂಲಕ ರಕ್ಷಣೆ ಇಲ್ಲದಂತೆ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದಲ್ಲಿ ಪೊಲೀಸರಿಗೆ ದೂರು ನೀಡುವುದನ್ನೇ ನಿಲ್ಲಿಸುವಂತಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ʼಭಾರತ್ ಜೋಡೋʼ ಪಾದಯಾತ್ರೆಯ ನಂತರ ಕಾಂಗ್ರೆಸ್‌ಗೆ ಹೊಸ ಶಕ್ತಿ ಬಂದಿದೆ : ವಿ.ಎಸ್ ಉಗ್ರಪ್ಪ

ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ ಮಾತನಾಡಿ, “ಹಿರೇಕೂಡ್ಲಿಗಿ, ಮಲ್ಲೇದೇವರ ಗುಡ್ಡ, ಹಂಚಿನಾಳ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮಾದಿಗ ಸಮೂದಾಯದ ಮೇಲೆ ಹಲ್ಲೆ ನಡೆಸಲಾಗಿದ್ದು, ಎಲ್ಲ ಪ್ರಕರಣಗಳಲ್ಲಿಯೂ ಗಬ್ಬೂರ ಪೊಲೀಸರು ಕೌಂಟರ್ ಕೇಸ್ ದಾಖಲಿಸಿ ಬೆದರಿಸುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾದವರನ್ನು ರಕ್ಷಿಸಬೇಕಾದ ಪೊಲೀಸರೇ ಕೌಂಟರ್ ಕೇಸ್ ದಾಖಲಿಸಿ ಯಾರನ್ನೂ ಬಂಧಿಸದೇ ರಕ್ಷಣೆ ಮಾಡುತ್ತಿದ್ದಾರೆ. ಕೌಂಟರ್ ಕೇಸ್ ದಾಖಲಿಸುವುದನ್ನು ನಿಲ್ಲಿಸದೇ ಇದ್ದರೆ ಹೋರಾಟ ತೀವ್ರರೂಪ ಪಡೆಯಲಿದೆ” ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶ್ರೀನಿವಾಸ ಕೊಪ್ಪರ, ರಾಜು ಬೊಮ್ಮನಾಳ, ರಾಘವೇಂದ್ರ ಬೋರೆಡ್ಡಿ, ಶಾಂತಕುಮಾರ ಹೊನ್ನಟಗಿ, ಎ ರಾಮು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...