ರಾಯಚೂರು | ಗೂಗಲ್ ಬ್ಯಾರೇಜ್‌ನಿಂದ ನೀರು ಒದಗಿಸಿ; ರೈತ ಸಂಘದ ಒತ್ತಾಯ

Date:

ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಎಚ್ಚರಿಕೆ ನೀಡಿದೆ.

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಕರ್ನಾಟಕರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಲಕ್ಷ್ಮಣಗೌಡ ಕಡಗಂದೊಡ್ಡಿ, ತುಂಗಭದ್ರ ಎಡದಂಡೆ ಕಾಲುವೆ ಮಾನವಿಯಿಂದ ರಾಯಚೂರು ತಾಲೂಕಿನವರೆಗೆ ನೀರೇ ಬರುತ್ತಿಲ್ಲ. ಅದೇ ಸ್ಥಿತಿ ನಾರಾಯಣಪುರು ಬಲದಂಡೆ ಕಾಲುವೆಯಲ್ಲಿಯೂ ಪ್ರಾರಂಭವಾಗಿದೆ. ಗೂಗಲ್ ಬ್ಯಾರೇಜ್‌ನಿಂದ ತುಂಗಭದ್ರ ಎಡದಂಡೆ ಕಾಲುವೆ ಹಾಗೂ ನಾರಾಯಣಪುರು ಬಲದಂಡೆಗೆ ಕಾಲುವೆ ನೀರು ಹರಿಸಿ ರೈತರಿಗೆ ನೆರವಾಗಿ, ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹಾಕಿ ಜಾನುವಾರುಗಳಿಗೆ ನೀರು ಕೊಡಲು ಕೆರೆಗಳನ್ನು ಭರ್ತಿ ಮಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಕೊಪ್ಪಳ, ಗಂಗಾವತಿಯಿಂದ ಹಿಡಿದು ಸಿಂಧನೂರುವರೆಗೆ ಎಡದಂಡೆ ಕಾಲುವೆ ನೀರು ಯಥೇಚ್ಚವಾಗಿ ಹರಿಯುತ್ತಿದೆ. ಮಾನವಿಯಿಂದ ಮಾತ್ರ ನೀರು ಬರುತ್ತಿಲ್ಲ. ನಿತ್ಯವೂ ರೈತರು ಪ್ರತಿಭಟನೆ ಮಾಡುವಂತಾಗಿದೆ. ಗೂಗಲ್ ಬ್ಯಾರೇಜ್‌ನಿಂದ ನೀರು ಹರಿಸಿದಲ್ಲಿ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ದೊರೆತದಂತಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರ ಘೋಷಣೆಯ ನಂತರವೂ ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡುತ್ತಿಲ್ಲ. ಮುಂಗಾರು ಮತ್ತು ಹಿಂಗಾರು ಬೆಳೆ ಕಳೆದು ಹೋಗಿದ್ದರಿಂದ ಪ್ರತ್ಯೇಕವಾಗಿ ಎರಡು ಹಂಗಾಮಿನ ಬೆಳೆ ನಷ್ಟ ಪರಿಹಾರ ರೈತರಿಗೆ ಬಿಡುಗಡೆ ಮಾಡಬೇಕು. ಗುಂಜಳ್ಳಿ ಕೆರೆ ಸೇರಿದಂತೆ ರಾಯಚೂರು ತಾಲೂಕಿನ ಕೆರೆಗಳಿಗೆ ನೀರು ಹರಿಸಲು ಅವಕಾಶವಿದ್ದು ಭರ್ತಿ ಮಾಡಬೇಕೆಂದರು.

ರೈತ ಮುಖಂಡ ಅಬ್ದುಲ್ ಮಜೀದ್ ಮಾತನಾಡಿ ತುಂಗಭದ್ರ ಮತ್ತು ಕೃಷ್ಣ ನದಿಗಳಲ್ಲಿ ನೀರು ಹರಿದು ಹೋಗುತ್ತಿದೆ. ರೈತರಿಗೆ ದೊರೆಯುತ್ತಿಲ್ಲ. ಸರ್ಕಾರಗಳು ವ್ಯರ್ಥವಾಗಿ ಹರಿಯುವ ನೀರು ಬಳಸಲು ಕೆರೆ ತುಂಬುವದು, ಕುಡಿಯುವ ನೀರಿನ ಸಣ್ಣ ಕೆರೆಗಳನ್ನು ಭರ್ತಿ ಮಾಡಬೇಕೆಂದರು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿಯ ಬದಲು ನ್ಯಾಯಬೆಲೆ ಅಂಗಡಿಗಳಲ್ಲಿ ಮೂರು ಕೆಜಿ ಮಾತ್ರ ನೀಡಲಾಗುತ್ತಿದೆ. ಇನ್ನೂ ಪಡಿತರದ ಬದಲು ಅಕ್ಕಿ ನೀಡುವಲ್ಲಿಯೂ ಕೆಲವರಿಗೆ ಇಂದಿಗೂ ಹಣವೂ ಬರುತ್ತಿಲ್ಲ. ಗೃಹ ಲಕ್ಷ್ಮೀ ಯೋಜನೆಯಡಿ ಅನೇಕ ಮಹಿಳೆಯರಿಗೆ ಹಣವೂ ಬರುತ್ತಿಲ್ಲ. ಬರಗಾಲ ಇರುವದರಿಂದ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದರು. ಈ ಸಂದರ್ಭದಲ್ಲಿ ನರಸಿಂಗರಾಜ ಕುಲಕರ್ಣಿ,  ಅಕ್ಕಮಹಾದೇವಿ, ರಮೇಶ, ವೀರೇಶ, ದೇವಪ್ಪ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...