ರಾಯಚೂರು | ಜಿಲ್ಲೆಯಲ್ಲಿ ಮೂರು ದಿನ ಮಳೆ ಸಾಧ್ಯತೆ : ಜನಜೀವನ ಅಸ್ತವ್ಯಸ್ತ

Date:

ತೆಲಂಗಾಣ ಹಾಗೂ ಉತ್ತರ ಒಳನಾಡಿನಲ್ಲಿ ಉಂಟಾದ ಕಡಿಮೆ ಒತ್ತಡ ಪ್ರದೇಶದ ಪರಿಣಾಮವಾಗಿ ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಮುಂದಿನ ಮೂರು ದಿನಗಳವರೆಗೆ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಧ್ಯಮ ಹಾಗೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ನಿರಂತರವಾಗಿ ಮಳೆ ಬರುವ ಕಾರಣ ಕೃಷ್ಣ ಹಾಗೂ ತುಂಗಭದ್ರಾ ನದಿಗಳಿಗೆ ಡ್ಯಾಂ ಮೂಲಕ ನೀರು ಬಿಡಲಾಗುತ್ತಿದ್ದು ನದಿ ತೀರದ ಗ್ರಾಮಸ್ಥರು ನದಿ ದಂಡೆಗೆ ಹೋಗಬಾರದು ಹಾಗೂ ಜಾನುವಾರುಗಳಿಗೆ ನದಿ ತಟದಲ್ಲಿ ಮೇಯಲು ಬಿಡಬಾರದು ಎಂದು ಜಿಲ್ಲಾಡಳಿತ ಹಾಗೂ ತಹಶೀಲ್ದಾರರು ಆಯಾ ತಾಲೂಕು ವ್ಯಾಪ್ತಿಯ ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯ ಕೆಲವು ಕಡೆ ಹೊಲಗಳಲ್ಲಿ ನೀರು ನಿಂತು ರೈತರಿಗೂ ಸಂಕಷ್ಟ ಎದುರಾಗಿದೆ. ಸಿರವಾರ ಹಾಗೂ ಸಿಂಧನೂರು ಭಾಗಗಳಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಗುಂಡಿಗಳಲ್ಲಿ ಕೆಸರು ತುಂಬಿ, ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕೆಲವೆಡೆ ವಾಹನಗಳು ಕೆಸರಿನಲ್ಲಿ ಸಿಲುಕಿ ತೊಂದರೆ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...