ರಾಯಚೂರು | ನಿರಂತರ ಮಳೆ : ಸೂರ್ಯಕಾಂತಿ ಬೆಳೆಗೆ ಕೀಟ ಬಾಧೆ

Date:

ಜಿಲ್ಲೆಯಲ್ಲಿ ನಿರಂತರ ವಾರದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಸೂರ್ಯಕಾಂತಿ ಬೆಳೆಗಾರರ ರೈತರ ಜೀವನದಲ್ಲಿ ದೊಡ್ಡ ಸಂಕಷ್ಟವನ್ನು ತಂದಿದೆ. ಜಿಟಿಜಿಟಿ ಮಳೆ ಮತ್ತು ಕೆಲವೊಮ್ಮೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೂರ್ಯಕಾಂತಿ ಕೀಟ ಬಾಧೆಗೆ ರೈತನ ಗೋಳಾಗಿದೆ.

ಜಿಲ್ಲೆಯ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ, ತಡಕಲ್, ಜೀನೂರು, ಮದ್ದಮಗುಡ್ಡಿ, ದೇವಿಪುರ ಹಾಗೂ ಇನ್ನಿತರ ಗ್ರಾಮಗಳಲ್ಲಿ ನೂರಾರು ರೈತರು ಮುಂಗಾರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಬೆಳೆಗೆ ಆದ್ಯತೆ ನೀಡಿದ್ದಾರೆ.

ಈ ವರ್ಷ ಮಾನ್ವಿ ತಾಲ್ಲೂಕಿನಲ್ಲಿ ಒಟ್ಟು ‌ಸುಮಾರು 1,200 ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗುತ್ತಿದೆ. ಈ ಮಳೆಯಿಂದಾಗಿ ಬಿತ್ತನೆ ಮಾಡಿರುವ ಸೂರ್ಯಕಾಂತಿ ಬೆಳೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೈಗೆ ಸಿಗುವ ಬೆಳೆ ಕಟಾವು ಮಾಡುವ ಮುನ್ನವೇ ಹಾಳಾಗುತ್ತಿರುವುದರಿಂದ ರೈತರ ಬಾಳಿನಲ್ಲಿ ನಿರಾಶೆ ಆವರಿಸಿದೆ ಎನ್ನಲಾಗಿದೆ.

1000171575

ಬೆಳೆದಿದ್ದ ಸೂರ್ಯಕಾಂತಿ ಕಟಾವು ಮಾಡಲಾಗದ ಸ್ಥಿತಿಗೆ ತಲುಪಿದೆ. ಹೆಚ್ಚು ತೇವಾಂಶದಿಂದಾಗಿ ಹತ್ತಿಯಲ್ಲಿ ಜಂಗು ರೋಗ ವ್ಯಾಪಕವಾಗಿ ಹರಡಿದೆ. ಆದರೆ ಕೆಲ ದಿನಗಳಿಂದ ಸೂರ್ಯಕಾಂತಿ ಬೆಳೆಗೆ ತೆನೆಗಳನ್ನು ತಿನ್ನುವ ಕೀಟದ ಹಾವಳಿ ಕಂಡು ಬಂದಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಈ ಕೀಟಗಳು ಕಾಳು ಕಟ್ಟುವ ಹಂತದಲ್ಲಿನ ಸೂರ್ಯಕಾಂತಿ ಹೂವುಗಳನ್ನು ತಿನ್ನುವ ಮೂಲಕ ಹೆಚ್ಚಿನ ನಷ್ಟವನ್ನು ಉಂಟುಮಾಡುತ್ತಿವೆ.

ಈ ಬಗ್ಗೆ ಸೂರ್ಯಕಾಂತಿ ಬೆಳೆಗಾರ ದುರಗಪ್ಪ ತಡಕಲ್ ಮಾತನಾಡಿ, ನಿರಂತರ ಮಳೆ ಸುರಿಯುವುದರಿಂದ ಸೂರ್ಯಪಾನ ಹಾಳಾಗುತ್ತಿದೆ. ಒಳಗಡೆ ಕಾಳುಗಳು ಗಟ್ಟಿಯಾಗಿ ಬರುತ್ತಿಲ್ಲ. ಸುಮಾರು 40 ದಿನಗಳಿಂದ ಸರಿಯಾಗಿ ಬಿಸಿಲು ಬೀಳದೆ ಕಾರಣಕ್ಕೆ ಸೂರ್ಯಕಾಂತಿ ಬೆಳೆಯಲ್ಲಿ ಕೀಟಬಾಧೆ ಕಂಡುಬಂದಿದೆ ಎಂದು ಅಳಲು ತೋಡಿಕೊಂಡರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅತ್ಯಾಚಾರ ಪ್ರಕರಣ : ಅಪರಾಧಿಗೆ ಜೀವಾವಧಿ ಶಿಕ್ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂರ್ಯಕಾಂತಿ ಬೆಳೆಗೆ ಕೀಟಗಳ ಹಾವಳಿ ತಡೆಯಲು ಕೃಷಿ ಇಲಾಖೆಯ ಅಧಿಕಾರಿಗಳು ಸೂಕ್ತ ಕೀಟನಾಶಕಗಳನ್ನು ಬಗ್ಗೆ ರೈತರಿಗೆ ತಿಳಿಸಬೇಕು ಹಾಗೂ ಖರೀದಿ ಕೇಂದ್ರ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.




WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...