ರಾಯಚೂರು | ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರ ಪ್ರಕಟಿಸಿ: ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

Date:

ಕರ್ನಾಟಕ ಭೂ ಮಂಜೂರಾತಿಗೆ ನಿಯಮಗಳ ಅಡಿಯಲ್ಲಿ ರಾಯಚೂರು ತಾಲೂಕಿನಲ್ಲಿ ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರವನ್ನು ಕೂಡಲೇ ಪ್ರಕಟಿಸಬೇಕು ಎಂದು ಕರ್ನಾಟಕ ರೈತ ಸಂಘ ಕಂದಾಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ.

1969 ಉಪನಿಯಮ 3 ರ ಅನ್ವಯ ಪ್ರಕಾರ ಪ್ರತಿ ವರ್ಷವೂ ಹಂಚಿಕೆಗೆ ತಾಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಭೂಮಿಯ ಪಟ್ಟಿಯನ್ನು ತಯಾರಿಸಿ ಭೂ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ದುರ್ಬಲ ಸಮುದಾಯದಗಳಿಗೆ ಇರುವ ಭೂಮಿಯ ವಿವರ ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಮನವಿಯ ಮೂಲಕ ಆಗ್ರಹಿಸಿದರು.

ಸ್ವಾತಂತ್ರ್ಯ ಪೂರ್ವದಿಂದಲೂ ಸಾಗುವಳಿ ಭೂಮಿಯಿಂದ ವಂಚಿತರಾದ ದಲಿತ ಸಮುದಾಯಗಳಿಗೆ ಭೂಮಿ ನೀಡುವ ಸರ್ಕಾರದ ಮಹತ್ವಾಕಾಂಕ್ಷಿಯಾದ ಎಲ್ಲ ಯೋಜನೆಗಳ ಮೇಲೆ ಇದರ ಅಡ್ಡ ಪರಿಣಾಮ ಬೀರುತ್ತಿದೆ. 2024-25 ನೇ ಸಾಲಿನಲ್ಲಿ ಮಸ್ಕಿ ತಾಲೂಕಿನಲ್ಲಿ ಹಂಚಿಕೆ ಮಾಡಲು ಲಭ್ಯ ಇರುವ ಒಟ್ಟು ಸರಕಾರಿ ಭೂಮಿಯ ವಿವರವನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಹಾಗೂ ಪ್ರತಿಯನ್ನು ನಮಗೆ ಒದಗಿಸಬೇಕೆಂದು ಎಂದು ರೈತ ಸಂಘಟನೆ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಸಂತೋಷ್ ಹಿರೇದಿನ್ನಿ, ಮಾರುತಿ ಜಿನ್ನಾಪೂರ, ಅಮರೇಶ ಪಾಮನಕಲ್ಲೂರು, ಬಾಲಸ್ವಾಮಿ ಹೂವಿನಬಾವಿ, ತಿರುಪತಿ ಮಸ್ಕಿ, ಮಾಳಪ್ಪ ಹೂವಿನಬಾವಿ, ನಿಂಗಪ್ಪ, ಆದಯ್ಯ ಸ್ವಾಮಿ ಹರ್ವಾಪುರ, ಶ್ರೀನಿವಾಸ, ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...