ರಾಯಚೂರು | ರೈತರ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ: ರೈತ ಮುಖಂಡ ಚಾಮರಸ ಮಾಲೀ ಪಾಟೀಲ್

Date:

“ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ ವಿರುದ್ಧ ಹಾಗೂ ಫಸಲ್ ವಿಮಾ ಭ್ರಷ್ಟಾಚಾರ ಖಂಡಿಸಿ ಜು.18 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ರಾಜ್ಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಜನಪರ ಕೆಲಸ ಮಾಡದೇ ಬೇಡವಾದ ವಿಷಯಗಳನ್ನು ಚರ್ಚಿಸಿ ರಾಜ್ಯದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿತ್ತು. ಕಾಂಗ್ರೆಸ್ ಸರ್ಕಾರವು ಸಹ ಹಲವು ಹಗರಣದಲ್ಲಿ ಭಾಗಿಯಾಗಿ ಲೂಟಿಗೆ ನಿಂತಿದೆ. ಎಸ್‌ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಭ್ರಷ್ಟಾಚಾರ, ಟ್ರಕ್ ಟರ್ಮಿನಲ್‌ನಲ್ಲಿ ಭ್ರಷ್ಟಾಚಾರ, ವಕ್ಫ್ ಮಂಡಳಿಯಲ್ಲಿ ಭ್ರಷ್ಟಾಚಾರ ಹಗರಣದಲ್ಲಿ ತೊಡಗಿದೆ” ಎಂದು ದೂರಿದರು.

“ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ರೈತ ವಿರೋಧಿ ವಿದ್ಯುತ್ ನೀತಿಯಿಂದ ರೈತರು ತೊಂದರೆ ಅನುಭಸುತ್ತಿದ್ದಾರೆ. ಪಂಪ್‌ಸೆಟ್ ಅಳವಡಿಕೆಗೆ ರೈತರೇ ಹಣ ಖರ್ಚು ಮಾಡಬೇಕಾಗಿದೆ. ಇದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ಈ ನೀತಿ ಸರ್ಕಾರ ಹಿಂಪಡೆಯಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

WhatsApp Image 2024 07 15 at 4.29.41 PM

“ರೈತರ ಸಮಸ್ಯೆಗಳಿಗೆ ಸ್ಪಂದಿಸದೇ ಇರುವುದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ಗೆ ಅಧಿಕಾರಿ ನೀಡಲಾಗಿದೆ. ಆದರೆ ದೇಶದ ಜನರಿಗೆ ಆಹಾರ ಉತ್ಪಾದನೆ ಮಾಡುವ ರೈತರನ್ನು ಕಡೆಗಣಿಸುತ್ತಿದ್ದಾರೆ. ರೈತರಿಗೆ ಸೌಲಭ್ಯ ನೀಡಿದರೆ ಆಹಾರ ಉತ್ಪಾದನೆ ಸಾಧ್ಯ. ಆಹಾರ ಉತ್ಪಾದನೆ ಸೌಲಭ್ಯಗಳೇ ಇಲ್ಲದಿದ್ದರೆ ಉತ್ಪಾದನೆ ನಿಂತು ಹೋಗುತ್ತದೆ. ಇದರಿಂದ ಆಹಾರದ ಕೊರತೆ ಉಂಟಾಗುತ್ತದೆ. ವಿದ್ಯುತ್ ನೀತಿ ಬದಲಾವಣೆ ಆಗಬೇಕು” ಎಂದು ಚಾಮರಸ ಮಾಲೀ ಪಾಟೀಲ್ ಹೇಳಿದರು.

ರಾಯಚೂರು ಭಾಗದಲ್ಲಿ ಕಳೆದ ಬಾರಿ ಜೋಳ ಖರೀದಿ ಮಾಡಿದ್ದು, ಸಾಕಷ್ಟು ರೈತರಿಗೆ ಹಣ ಪಾವತಿಸಿಲ್ಲ, ಬೇರೆ ಭಾಗದಲ್ಲಿ ಹಣ ಪಾವತಿಸಿದೆ. ಈ ಭಾಗದಲ್ಲಿ ಮಾತ್ರ ತಾರತಮ್ಯ ಮಾಡಲಾಗಿದೆ. ಪ್ರತಿಭಟಿಸಿ ಒತ್ತಡ ಹಾಕಿದಾಗ ಕೆಲವು ರೈತರಿಗೆ ಮಾತ್ರ ಪಾವತಿಸಿದ್ದಾರೆ. ಇದೀಗ ಮಳೆಗಾಲ ಆರಂಭವಾಗಿದ್ದು, ರೈತರಿಗೆ ಹಣ ಪಾವತಿಸಿದರೆ ಬೀಜ ಗೊಬ್ಬರ ಖರೀದಿ ಮಾಡಬಹುದು. ಹಣ ಪಾವತಿಸಿಲ್ಲವೆಂದರೆ, ರೈತರು ಜೀವನ ನಡೆಸಲು ಸಾಧ್ಯವಿಲ್ಲ. ರಾಜ್ಯದಲ್ಲಿ 1180 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ? ಫಸಲು ವಿಮಾ ಕಂಪನಿಗೆ ರೈತರು ಬೆಳೆ ವಿಮೆ ಕಟ್ಟಿದ್ದಾರೆ. ಹಣ ಪಾವತಿಯಾಗಿಲ್ಲ, ದುರ್ಬಳಕೆ ಯಾಗಿದೆ. ಈ ಬಗ್ಗೆ ದೂರು ನೀಡಿದೆ. ಆದರೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಎಸ್‌ಟಿ ನಿಗಮಕ್ಕಿಂತ ದೊಡ್ಡ ಹಗರಣವಾಗಿದೆ. ಇದರಲ್ಲಿ ಕೃಷಿ ಮಂತ್ರಿ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದರು.

ಇಂದಿನಿಂದ ಅಧಿವೇಶನ ಆರಂಭವಾಗಿದೆ. ಸರ್ಕಾರದ ಗಮನ ಸೆಳೆಯಲು ಹಾಗೂ ರೈತರ ಸಮಸ್ಯೆಗಳಿಗೆ ಬೇಡಿಕೆಗಳಿಗೆ ಸ್ಪಂದಿಸಬೇಕು. ಸದನದಲ್ಲಿ ಪ್ರಶ್ನಿಸಬೇಕು. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಬೂದಯ್ಯಸ್ವಾಮಿ ಗಬ್ಬೂರು, ಗೋವಿಂದ ನಾಯಕ, ದೇವರಾಜ ನಾಯಕ, ಬೊಮ್ಮಯ್ಯ ಆಚಾರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...