ರಾಯಚೂರು | ತುಂಗಭದ್ರ ಜಲಾಶಯದ ಕ್ರಸ್ಟ್ ಗೇಟ್ ದುರಸ್ತಿ ; ಬೇಸಿಗೆ ಬೆಳೆಗೆ ನೀರು ಕೊಡದಿದ್ದರೆ ಹೋರಾಟ : ಚಾಮರಸ ಮಾಲಿ ಪಾಟೀಲ

Date:

ತುಂಗಭಧ್ರ ಜಲಾಶಯದ ಕ್ರಸ್ಟ್ ಗೇಟ್ ಕೂರಿಸಲು ಸರ್ಕಾರ ಮುಂದಾಗಿದ್ದು, ಬೇಸಿಗೆಯಲ್ಲಿ ಎರಡನೇ ಬೆಳೆಗೆ ನೀರು ಬಿಡಲು ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ್ ಹೇಳಿದರು.

ಅವರಿಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, ಕ್ರಸ್ಟ್ ಗೇಟ್ ಕೂಡಿಸಲಾಗುತ್ತಿರುವ ಕಾರಣ ಬೇಸಿಗೆ ಬೆಳೆಗೆ ನೀರು ಕೊಡುವುದಿಲ್ಲ ಎಂಬ ನಿರ್ಧಾರವನ್ನು ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಬೇಸಿಗೆಯಲ್ಲಿವ ನೀರು ಕೊಟ್ಟು ಕೂಡ ಗೇಟ್‍ಗಳನ್ನು ಅಳವಡಿಸಬಹುದಾಗಿದ್ದು, ಈ ಕುರಿತು ಚರ್ಚಿಸಲು ವಾರದೊಳಗೆ ಅಧಿಕಾರಿಗಳು, ರೈತರು ಮತ್ತು ಜನಪ್ರತಿನಿಧಿಗಳ ತುರ್ತು ಸಭೆ ಕರೆಯಬೇಕು ಎಂದರು.

ಇತ್ತೀಚೆಗೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜಿಲ್ಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಅವರೊಂದಿಗೆ ಜಿಲ್ಲೆಯಲ್ಲಿರುವ ನೀರಾವರಿ ಸಮಸ್ಯೆ, ತುಂಗಭದ್ರ ಕ್ರಸ್ಟ್ ಗೇಟ್ ಅಳವಡಿಕೆಯ ಕುರಿತು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ. ಗೇಟ್‍ಗಳ ಅಳವಡಿಕೆಯ ಹಿನ್ನೆಲೆಯಲ್ಲಿ ಬೇಸಿಗೆ ಬೆಳೆಗೆ ನೀರು ನೀಡುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಇದರಿಂದ ರೈತರಿಗೆ ಮಾತ್ರವಲ್ಲದೇ ರೈಸ್ ಮಿಲ್‍ಗಳು, ಕೂಲಿಕಾರ್ಮಿಕರ ಸೇರಿದಂತೆ ಅನೇಕ ವಲಯಗಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಒಳ ಹರಿವು ನಿರಂತರವಾಗಿರುವುದರಿಂದ ನೀರನ್ನು ಬಂದ್ ಮಾಡದೇ ಗೇಟ್‍ಗಳನ್ನು ಅಳವಡಿಸಬಹುದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರವಾಗಿ ತುಂಗಭದ್ರ ಜಲಾಶಯಕ್ಕೆ 27 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಪ್ರಸ್ತುತ 80 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದಾಗಿದ್ದು, ನವೆಂಬರ್ ವರೆಗೂ ಒಳಹರಿವು ಬರುವ ಸಾಧ್ಯತೆಯಿದ್ದು, 15 ಟಿಎಂಸಿ ನವೆಂಬರನಲ್ಲಿ 15 ಟಿಎಂಸಿ ಡಿಸೆಂಬರ್ ನಲ್ಲಿ ಬಿಡಬಹುದು, ನಂತರ ಜನವರಿಯಲ್ಲಿ 25 ಟಿಎಂಸಿ ನೀರು ಬೇಕಾಗುತ್ತದೆ. ನಂತರ ಫೆಬ್ರವರಿಯಲ್ಲಿ ಮೆಣಸಿನಕಾಯಿ ಬೆಳೆಗೆ ಮಾತ್ರ ನೀರು ಬೇಕಾಗುವುದರಿಂದ 18 ಟಿಎಂಸಿ ನೀರು ಬೇಕಾಗುತ್ತದೆ. ಮಾರ್ಚ್ 30ರವರೆಗೆ ಒಟ್ಟು 88 ಟಿಎಂಸಿ ನೀರು ಬೇಕಾಗಬಹುದು. ಆದ್ದರಿಂದ ನೀರನ್ನು
ನಿರ್ವಹಣೆ ಮಾಡುವ ಕುರಿತು ಚರ್ಚೆಯಾಗಬೇಕು ಎಂದರು.

ಕೇವಲ ಗೇಟ್‍ಗಳನ್ನು ಕೂರಿಸಲು ನೀರು ಕೊಡಲು ಆಗುವುದಿಲ್ಲ ಎನ್ನುವುದು ಸರಿಯಲ್ಲ ಇದಕ್ಕೆ ರೈತರು ಯಾರು ಕೂಡ ಒಪ್ಪುವುದಿಲ್ಲ. ಗೇಟ್ ಅಳವಡಿಕೆ ಜೊತೆಗೆ ಎಡದಂಡೆ ನಾಲೆಯ ಸೇತುವೆಗಳು, ಸ್ಟಕ್ಚರ್ ಗಳು ಶಿಥಿಲಾವಸ್ಥೆಯಲ್ಲಿದ್ದು, ಅವುಗಳನ್ನು ಸರಿಪಡಿಸಲು ಕೂಡ ಸರ್ಕಾರ ಮುಂದಾಗಬೇಕು ಎಂದು ತಿಳಿಸಿದರು.

ತುಂಗಭದ್ರ ಎಡದಂಡೆ ಕಾಲುವೆ ಭಾಗದಲ್ಲಿ ಹಲವು ಸಮಸ್ಯೆಗಳಿದ್ದು, ಇವುಗಳನ್ನು ಚರ್ಚಿಸಲು ಸರ್ಕಾರ ಕೂಡಲೇ ತುರ್ತು ಸಭೆ ಕರೆಯಬೇಕು. ಸಭೆ ಕರೆಯಲು ರಾಯಚೂರು, ಕೊಪ್ಪಳ, ಬಳ್ಳಾರಿ ಭಾಗದ ಜನಪ್ರತಿನಿಧಿಗಳು ಆಸಕ್ತಿ ವಹಿಸಿ, ಸರ್ಕಾರವನ್ನು ಎಚ್ಚರಗೊಳಿಸಲು ಮುಂದಾಗಬೇಕು ಎಂದರು.

ಜಿಲ್ಲೆಯಲ್ಲಿ ಮಳೆಯಿಂದಾಗಿ ಬೆಳೆ ನಷ್ಟವಾಗಿದ್ದು, ಜಿಲ್ಲೆಯ ರೈತರು ಆರ್ಥಿಕ ಸಂಕಷ್ಟದಲ್ಲಿದ್ದು, ರಾಜ್ಯದ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಪರಿಹಾರ ಮಾತ್ರ ಇನ್ನೂ ರೈತರಿಗೆ ತಲುಪಿಲ್ಲ. ಕೇಂದ್ರದಿಂದ 321 ಕೋಟಿ ಪರಿಹಾರ ಬಂದಿದೆ ಎಂದು ಹೇಳಲಾಗುತ್ತಿದ್ದು, ಅದೆಲ್ಲ ಎಲ್ಲಿ ಹೋಯಿತು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಏನು ಮಾಡುತ್ತಿದ್ದಾರೆ. ರೈತರ ನೆರವಿಗೆ ಧಾವಿಸುತ್ತಿಲ್ಲ ಎಂದು ಖಂಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯರಗೇರಾ ಹೋಬಳಿಗೆ ಬಸ್‌ ನಿಲ್ದಾಣ ನಿರ್ಮಾಣಕ್ಕೆ ; ಸಿಪಿಐಎಂಎಲ್ ಪ್ರತಿಭಟನೆ

ಈ ಸಂದರ್ಭದಲ್ಲಿ ಮಾಜಿ ಶಾಸಕ ಗಂಗಾಧರ ನಾಯಕ, ಜಾನ್‍ವೆಸ್ಲಿ, ಬೂದಯ್ಯ ಸ್ವಾಮಿ, ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಪಾಟೀಲ್ ಇಂಗಳದಾಳ, ಚಂದ್ರಶೇಖರ ಸೇರಿದಂತೆ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...