ರಾಯಚೂರು | ಅರಣ್ಯ ಭೂಮಿ, ಗೈರಾಣ ಭೂಮಿ ಸಾಗುವಳಿದಾರರಿಗೆ ಪಟ್ಟಾ ನೀಡುವಂತೆ ಒತ್ತಾಯ

Date:

ಅರಣ್ಯ ಭೂಮಿ ಮತ್ತು ಗೈರಾಣ ಭೂಮಿ ಸಾಗುವಳಿದಾರರಿಗೆ ಪಟ್ಟಾ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ರಾಯಚೂರು ತಾಲೂಕಿನ ಉಂಡ್ರಾಳದೊಡ್ಡಿ, ಬಾಪೂರು, ಮಾಸದೊಡ್ಡಿ, ಎಲ್.ಕೆ.ದೊಡ್ಡಿ, ಮುರಿಕಿದೊಡ್ಡಿ, ಮಂಡಲಗೇರಾ, ಅರಸಿಕೇರಾ, ಅರಸಿಕೇರಾ ತಾಂಡ, ಯರಗೇರಾ, ಚಂದ್ರಬಂಡಾ, ಯಾಪಲದಿನ್ನಿ, ಜಂಬಲದಿನ್ನಿ, ಪುಚ್ಚಲದಿನ್ನಿ, ಕೊತ್ತದೊಡ್ಡಿ, ಜುಲಂಗೇರಾ, ವಿಜಾಪೂರು, ಸಿಂಗನೋಡಿ, ಸಿಂಗನೋಡಿ ತಾಂಡ ಸೇರಿದಂತೆ ಬಹುತೇಕ ಗ್ರಾಮಗಳಲ್ಲಿ ಅರಣ್ಯ ಭೂಮಿ, ಗೈರಾಣ ಸಿ, ಮತ್ತು ಡಿ ಭೂಮಿ ದೊಡ್ಡ ಪ್ರಮಾಣದಲ್ಲಿ ಇದೆ. ಈ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಎಗೆ ಪಟ್ಟಾ ನೀಡಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

“ಈ ಭೂಮಿಗಳಲ್ಲಿ ಹರಿಜನ, ಗಿರಿಜನರು, ಲಮಾಣಿಗಳು, ನಾಯಕ ಜನಾಂಗದವರು ಸೇರಿ ಹಿಂದುಳಿದ ಜನಾಂಗದವರೂ ವಾಸ ಮಾಡುತ್ತಿದ್ದಾರೆ. ಅರಣ್ಯ ಭೂಮಿಯನ್ನು ಸುಮಾರು 60 ವರ್ಷಗಳಿಂದ ಸಾಗುವಳಿ ಮಾಡುತ್ತಾ ಭೂಮಿಯನ್ನು ಅಭಿವೃದ್ಧಿ ಪಡಿಸಿದ್ದಾರೆ. ನೀರಾವರಿ ಮಾಡಿಕೊಳ್ಳುವ ಮೂಲಕ ಬೆಳೆ ಬೆಳೆಯುತ್ತಾ ಅವರ ಕುಟುಂಬದ ನಿರ್ವಹಣೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡ ಕೂಲಿಕಾರರಿಗೆ ಯಾವುದೇ ಸ್ವಂತ ಭೂಮಿ ಇಲ್ಲ. ಸಾಗುವಳಿ ಮಾಡುತ್ತಿರುವ ಅರಣ್ಯ ಭೂಮಿಯೇ ಅವರಿಗೆ ಮುಖ್ಯವಾಗಿದೆ. ಸರ್ಕಾರವು 2002ರಲ್ಲಿ ಕಂದಾಯವಾಗಿದ್ದ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲಾಗಿದೆ. ಆದರೆ ಈ ಭೂಮಿಯನ್ನು ಅರಣ್ಯ ಇಲಾಖೆಯವರು ಬಲವಂತವಾಗಿ ಕಸಿದುಕೊಂಡಿದ್ದಾರೆ” ಎಂದು ಆರೋಪಿಸಿದರು.

“ಅರಣ್ಯ ಇಲಾಖೆಯವರು ಸಾಗುವಳಿದಾರರಿಗೆ ನಿರಂತರವಾಗಿ ತೊಂದರೆ ಕೊಡುತ್ತಿದ್ದಾರೆ. ರೈತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲು ಮಾಡಿ ಬಡ ಕೂಲಿಕಾರರನ್ನು ನ್ಯಾಯಾಲಯಕ್ಕೆ ಅಲೆಯುವಂತೆ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಸಾರ್ವವಜನಿಕ ಬಾವಿ ತೆರವು ವಿರೋಧಿಸಿ ದಸಂಸ ಪ್ರತಿಭಟನೆ

“ಸಾಗುವಳಿದಾರರು ಅಕ್ರಮ ಸಕ್ರಮದಡಿ ಪಟ್ಟಾಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇದೀಗ ಅರ್ಜಿ ಸ್ಥಗಿತಗೊಂಡಿದೆ. ಅರಣ್ಯ ಇಲಾಖೆ ಅಧಿಕಾರಿ ಮಾತ್ರ ದೌರ್ಜನ್ಯ ನಡೆಸುತ್ತಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಿ ಸಾಗುವಳಿದಾರರಿಗೆ ಪಟ್ಟಾ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಕರಿಯಪ್ಪ ಹಚ್ಚೊಳ್ಳಿ, ರಮೇಶ, ಇಸ್ಮಾಯಿಲ್, ಮಾರೆಪ್ಪ, ಆಂಜನೇಯ, ಮಲ್ಲಯ್ಯ, ಎಂ ನಾಗರಾಜ, ರವಿ, ಸತ್ಯಪ್ಪ, ಬಸವರಾಜ ಸೇರಿದಂತೆ ಬಹುತೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...