ರಾಯಚೂರು | ಪೊಲೀಸರ ಕಿರುಕುಳ ತಪ್ಪಿಸುವಂತೆ ಡಿವೈಎಸ್‌ಪಿಗೆ ಮನವಿ

Date:

ಬೀದಿ ಬದಿಯ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿದ್ದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಕೂಡಲೇ ರಕ್ಷಣೆ ನೀಡಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿ ಬೀದಿ ಬದಿಯ ವ್ಯಾಪಾರಸ್ಥರು ಸಿಂಧನೂರು ಡಿವೈಎಎಸ್‌ಪಿಗೆ ಮನವಿ ಸಲ್ಲಿಸಿದರು.

“ಸಿಂಧನೂರು ನಗರದ ರಾಯಚೂರು, ಕುಷ್ಟಗಿ ಹಾಗೂ ಗಂಗಾವತಿ ಮಾರ್ಗದ ರಸ್ತೆ ಸೇರಿದಂತೆ ಇನ್ನಿತರೆ ಸರ್ಕಾರಿ ಜಾಗಗಳಲ್ಲಿ ಸಣ್ಣಪುಟ್ಟ ಅಂಗಡಿಗಳನ್ನಿಟ್ಟುಕೊಂಡು ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ವ್ಯಾಪಾರಸ್ಥರನ್ನು ಏಕಾಏಕಿ ತೆರವುಗೊಳಿಸಲಾಗಿದೆ. ಅವರನ್ನು ಅವಲಂಬಿಸಿದ ಸಾವಿರಾರು ಕುಟುಂಬಗಳು ಕಂಗಾಲಾಗಿವೆ. ನಗರದಲ್ಲಿ ಸಾಮಾಜಿಕ-ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಅಷ್ಟು ಕುಟುಂಬಗಳ ಮೇಲೆ ಪರೋಕ್ಷವಾಗಿ ತುರ್ತು ಪರಿಸ್ಥಿತಿ ಹೇರಿದಂತಾಗಿದೆ” ಎಂದು ಅಳಲು ತೋಡಿಕೊಂಡರು.

ನಗರದ ಪ್ರಮುಖ ರಸ್ತೆ ಬದಿಗಳಲ್ಲಿನ ಬೀದಿ ವ್ಯಾಪಾರಿಗಳು ಮುನಿಸಿಪಲ್, ಪಿಡಬ್ಲ್ಯುಡಿ, ಹೆದ್ದಾರಿ ಪ್ರಾಧಿಕಾರ ಹಾಗೂ ಪೊಲೀಸ್ ಅಧಿಕಾರಿಗಳಿಂದ ಎದುರಿಸುತ್ತಿದ್ದ ದಿನನಿತ್ಯದ ಕಿರುಕುಳದ ನಡುವೆಯೂ ಬಡವರಿಗೆ, ಮಧ್ಯಮ ವರ್ಗದವರಿಗೆ ಉತ್ತಮ ಸರಕು-ಸೇವೆಗಳನ್ನು ಒದಗಿಸುತ್ತಾ ಬಂದಿದ್ದರೂ, ಇತ್ತೀಚೆಗೆ ಜಿಲ್ಲಾ, ತಾಲೂಕು ಆಡಳಿತ ಹಾಗೂ ನಗರಸಭೆಯಿಂದ ತೆರವು ಕಾರ್ಯಾಚರಣೆ ನಡೆಸಿ, ಏಕಾಏಕಿ ಬೀದಿ ಬದಿ ವ್ಯಾಪಾರಸ್ಥರನ್ನು ಒಕ್ಕಲೆಬ್ಬಿಸಲಾಗಿದೆ. ಬೀದಿ ವ್ಯಾಪಾರಿಗಳ ಜೀವನೋಪಾಯ ರಕ್ಷಣೆ ಹಾಗೂ ಬೀದಿ ವ್ಯಾಪಾರದ ನಿಯಂತ್ರಣ ಕಾಯ್ದೆಯನ್ನು ಸಂಪೂರ್ಣ ಉಲ್ಲಂಘಿಸಲಾಗಿದೆ. ಯಾವುದೇ ಕಾರಣಕ್ಕೂ ಪೊಲೀಸ್ ಕಿರುಕುಳ ನೀಡಬಾರದು ಎಂದು ಸಂಚಾಲಕ ನಾಗರಾಜ ಪೂಜಾರ್ ಆಗ್ರಹಿಸಿದರು.

“ಬೀದಿ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಅಥವಾ ನೋಟಿಸ್ ನೀಡಲು ಸಿಂಧನೂರು ಸಿಎಂಸಿ ಹಾಗೂ ಪಟ್ಟಣ ವ್ಯಾಪಾರ ಸಮಿತಿಗೆ ಮಾತ್ರ ಅಧಿಕಾರವಿದೆ. ಕಲಂ 18ರ ಪ್ರಕಾರ ಆಯಾ ನಗರಸಭೆಯಲ್ಲಿನ ಪಟ್ಟಣ ವ್ಯಾಪಾರ ಸಮಿತಿ ಈ ಕುರಿತು ಕ್ರಮ ತೆಗೆದುಕೊಳ್ಳಬಹುದೇ ಹೊರತು, ಬೇರೆ ಯಾವ ಅಧಿಕಾರಿಗಳೂ ಅವರನ್ನು ಸ್ಥಳಾಂತರಿಸುವಂತಿಲ್ಲ. ಹಾಗಾಗಿ ಲೋಕೋಪಯೋಗಿ ಇಲಾಖೆಯಿಂದ ಬೀದಿ ವ್ಯಾಪಾರಸ್ಥರಿಗೆ ನೀಡಿರುವ ನೋಟಿಸ್ ಕಾನೂನು ಬಾಹಿರವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಯಚೂರು | ವಿವಿಧೆಡೆ ದಾಳಿ; 20 ಬಾಲ ಕಾರ್ಮಿಕರ ರಕ್ಷಣೆ

ಈ ಸಂದರ್ಭದಲ್ಲಿ ಟಿ. ಹುಸೇನಸಾಬ, ಮಂಜುನಾಥ ಗಾಂಧಿನಗರ, ವಾಸಿಮ್, ಬಸವರಾಜ ಬಾದರ್ಲಿ, ಶಾಮೀದ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...