ರಾಯಚೂರು | ಏಮ್ಸ್ ಸ್ಥಾಪಿಸುವಂತೆ ಕೇಂದ್ರ ಸಚಿವರಿಗೆ ಮನವಿ

Date:

ರಾಯಚೂರು ನಗರಕ್ಕೆ ಏಮ್ಸ್ ಆರೋಗ್ಯ ಸಂಸ್ಥೆ ಸ್ಥಾಪಿಸುವಂತೆ ಒತ್ತಾಯಿಸಿ ಜಿಲ್ಲಾ ಏಮ್ಸ್ ಸಮಿತಿಯು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ವಿಜಯಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ರಾಯಚೂರು ನಗರಕ್ಕೆ ಸಚಿವರು ಆಗಮಿಸಿದ ವೇಳೆ ಮನವಿ ಸಲ್ಲಿಸಿದ ಅವರು, “ಏಮ್ಸ್ ಆರೋಗ್ಯ ಸಂಸ್ಥೆ ಮಂಜೂರಾತಿಗಾಗಿ ಸುದೀರ್ಘ 960 ದಿನಗಳಿಂದ ಹೋರಾಟ ನಡೆದಿದ್ದು, ಈ ನಿಟ್ಟಿನಲ್ಲಿ ಪ್ರಧಾನಮಂತ್ರಿಯವರೊಂದಿಗೆ ಚರ್ಚಿಸಿ ಮಂಜೂರು ಮಾಡಿಸುವಲ್ಲಿ ತಾವು ನಿರ್ಣಾಯಕ ಪಾತ್ರ ವಹಿಸಬೇಕು” ಎಂದು ಮನವಿ ಮಾಡಿಕೊಂಡರು.

“ಶಿಕ್ಷಣದಲ್ಲಿ ಜಿಲ್ಲೆಯು ಹಿಂದುಳಿದ ಭಾಗವಾಗಿದ್ದ ಕಾರಣಕ್ಕೆ ಐಐಟಿ ಮಂಜೂರಾಗಿತ್ತು. ಆದರೂ ಇದನ್ನು ಧಾರವಾಡ ಜಿಲ್ಲೆಗೆ ಸ್ಥಳಾಂತರಿಸಿದರು. ಜಿಲ್ಲೆಗೆ ಏಮ್ಸ್ ಸಂಸ್ಥೆಯನ್ನಾದರೂ ನೀಡಬೇಕು” ಎಂದು ಸಮಿತಿಯು ಮುಖಂಡರು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ವಿಜಯಕುಮಾರ್ ಮಾತನಾಡಿ, “ಏಮ್ಸ್ ಆರೋಗ್ಯ ಸಂಸ್ಥೆ ಸ್ಥಾಪನೆಗಾಗಿ ಸುದೀರ್ಘ ಹೋರಾಟ ನಡೆದಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ನಾನು ಆದಷ್ಟು ಶೀಘ್ರದಲ್ಲಿಯೇ ಪ್ರಧಾನ ಮಂತ್ರಿಯವರನ್ನು ಭೇಟಿ ಮಾಡಿ ರಾಯಚೂರಿನಲ್ಲಿ ಏಮ್ಸ್ ಆರೋಗ್ಯ ಸಂಸ್ಥೆ ಸ್ಥಾಪಿಸುವ ಬಗ್ಗೆ ಚರ್ಚಿಸುತ್ತೇನೆ” ಎಂದು ಏಮ್ಸ್ ಹೋರಾಟಗಾರರಿಗೆ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಹಿಳೆಯರು ವಿಶೇಷ ತರಬೇತಿ ಪಡೆದು ಸ್ವಾವಲಂಬಿಯಾಗಬೇಕು: ಡಾ. ದೇವಾನಂದ ದೊಡ್ಡಮನಿ

ಈ ಸಂದರ್ಭದಲ್ಲಿ ನಗರ ಶಾಸಕ ಡಾ ಶಿವರಾಜ ಪಾಟೀಲ್, ಜಿಲ್ಲಾಧಿಕಾರಿಗಳು ಮತ್ತು ಏಮ್ಸ್ ಹೋರಾಟ ಸಮಿತಿ ಸಂಚಾಲಕ ಡಾ. ಬಸವರಾಜ್ ಕಳಸ, ಅಶೋಕ್ ಕುಮಾರ್ ಜೈನ್, ಜಾನ್ ವೆಸ್ಲಿ, ಎಂ ಆರ್ ಭೇರಿ, ಜಗದೀಶ್ ಪಾಟೀಲ್ ಪೂರತಿಪ್ಪಲಿ, ವಿನಯ್ ಕುಮಾರ್ ಚಿತ್ರಗಾರ, ಡಾ ಎಸ್ ಎಸ್ ಪಾಟೀಲ್ ಮುಂತಾದವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...