ರಾಯಚೂರು |ಒಳ ಮೀಸಲಾತಿ ಜಾರಿ : ಮಾದಿಗ ಸಮುದಾಯದ ಸಂಭ್ರಮ

Date:

ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾದಿಗ ಸಮುದಾಯದ ಸದಸ್ಯರು ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಮೂಲಕ ಸುದೀರ್ಘ ಮೂರು ದಶಕಗಳ ಹೋರಾಟಕ್ಕೆ ಫಲ ಸಿಕ್ಕ ಖುಷಿಯಾಗಿ ಸಮುದಾಯದ ಬಂಧುಗಳು ಸಿಹಿ ಹಂಚಿ ಸಂಭ್ರಮಿಸಿದರು.

ಒಳಮೀಸಲಾತಿ ಜಾರಿ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ನೀಡಿದ ಹಿನ್ನೆಲೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅದನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ, ಒಳಮೀಸಲಾತಿ ಜಾರಿಯಾಗಲು ತಮ್ಮದೇ ಆದ ಪ್ರಭಾವ, ಚಾಣಕ್ಯ ನೀತಿ, ಹಗಲಿರುಳು ಶ್ರಮ ಮತ್ತು ಇಡೀ ರಾಜ್ಯದಲ್ಲಿ ಸಂಚಾರ ಮಾಡಿ ಮಾದಿಗ ಸಮುದಾಯದಲ್ಲಿ ಸಮೀಕ್ಷೆ ಹಾಗೂ ಜಾಗೃತಿ ಮೂಡಿಸಿದ ಮಾಜಿ ಸಚಿವ, ಶೋಷಿತರ ಗಟ್ಟಿಧ್ವನಿ ಎಂದೇ ಪ್ರಸಿದ್ಧರಾದ ಹೆಚ್. ಆಂಜನೇಯ ಅವರ ಪಾತ್ರವನ್ನು ಸ್ಮರಿಸಲಾಯಿತು.

ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮತ್ತು ಪುಷ್ಪವೃಷ್ಠಿ ಮಾಡುವ ಮೂಲಕ ಆಂಜನೇಯ ಅವರಿಗೆ ವಿಶೇಷ ಅಭಿನಂದನೆ, ಗೌರವ ಹಾಗೂ ಕೃತಜ್ಞತೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಕರ್ನಾಟಕದ ಗದ್ದರ್ ಎಂದು ಖ್ಯಾತಿ ಪಡೆದು, ನಾಡಿನಾದ್ಯಂತ ತನ್ನ ಕ್ರಾಂತಿಕಾರಿ ಗೀತೆಗಳು ಮೂಲಕ ಒಳಮಿಸಲಾತಿ ಜಾಗೃತಿಯನ್ನು ಮೂಡಿಸಿದಂತ ಅಂಬಣ್ಣ ಆರೋಲಿಕರ್ ಅವರು ಮಾತನಾಡಿ 30 ವರ್ಷಗಳ ಸುದೀರ್ಘ ಹೋರಾಟದಲ್ಲಿ ತನ್ನೊಡನೆ ಭಾಗಿಯಾದ ಸರ್ವರಿಗೂ ಕೂಡ ಅಭಿನಂದನೆಯನ್ನು ಕೃತಜ್ಞತೆಯನ್ನು ಸಲ್ಲಿಸಿ, ತನ್ನ ಜೀವನದ ಸಾರ್ಥಕತೆಯ ನಿರಾಳ ಭಾವನೆ ವ್ಯಕ್ತಪಡಿಸಿ, ಈ ಒಳ ಮೀಸಲಾತಿ ಜಾರಿ ಮಾದಿಗ ಸಮುದಾಯದವರಿಗೆ ದಾಸ್ಯದಿಂದ ಮುಕ್ತಗೊಳಿಸಿ, ನಿಜ ಸ್ವಾತಂತ್ರವನ್ನು ನೀಡಿದಂತಹ ಸಾರ್ಥಕತೆಯ ಹರ್ಷವನ್ನು ವ್ಯಕ್ತಪಡಿಸುತ್ತಾ ಅಲೆಮಾರಿಗಳಿಗೂ ಕೂಡ ಅತಿ ಶೀಘ್ರದಲ್ಲೇ ನ್ಯಾಯ ದೊರೆಯುತ್ತದೆ ಎಂಬ ಆಶಾಭಾವನೆಯನ್ನು ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು |ಆರೋಗ್ಯ ಕೇಂದ್ರದಲ್ಲಿ ನಿರ್ಲಕ್ಷ್ಯ – ತಾಯಿಯ ಗರ್ಭದಲ್ಲೇ ಮಗು ಸಾವು

ಹೋರಾಟಗಾರ ಜೆ.ಬಿ.ರಾಜು, ಅಬ್ರಹಾಂ, ಜಾಕೋಬ್, ಶರಣು ತುಗ್ಗಲದಿನ್ನಿ, ಕೆ.ಪಿ.ಅನಿಲ್ ಕುಮಾರ್, ಜನಾರ್ಧನ್, ಜಯ್ಯಪ್ಪ ಶಿರವಾರ ಸೇರಿದಂತೆ ನೂರಾರು ಸಂಖ್ಯೆಯ ಒಳಮೀಸಲಾತಿ ಫಲಾನುಭವಿಗಳು ಮತ್ತು ಆಂಜನೇಯ ಅವರು ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...