ರಾಯಚೂರು | ಕುಡಿಯುವ ನೀರು ಬೇಡಿಕೆಗೆ ಸ್ಪಂದನೆ; ಹೋರಾಟ ಮುಂದೂಡಿಕೆ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕ್ಯಾದಿಗ್ಗೇರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಂಡೆಮೇಲೆ ಸಿಂಗೇರಿದೊಡ್ಡಿ ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ತಾಲೂಕಿನ ಅಧಿಕಾರಿಗಳು ಗ್ರಾಮಕ್ಕೆ ಧಾವಿಸಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಿರುವುದರಿಂದ ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಅವರಿಗೆ ಮನವಿ ಸಲ್ಲಿಸಿ, ಗ್ರಾಮದ ನೀರಿನ ಸಮಸ್ಯೆ ಪರಿಹರಿಸಲು ಒಂದು ಹೊಸ ಬೋರ್ವೆಲ್ ಕೊರೆಸಬೇಕು, ನೀರಿನ ಟ್ಯಾಂಕ್ ಸಂಪರ್ಕ ಒದಗಿಸಬೇಕು, ನೀರಿನ ವ್ಯವಸ್ಥೆ ಸುಗಮಗೊಳಿಸಲು ವಾಟರ್ ಮ್ಯಾನ್ ನೇಮಕ ಮಾಡಬೇಕು, ಬೋರ್ ನೀರು ಸರಬರಾಜು ಆಗುವವರಿಗೆ ಪ್ರತಿ ದಿನ ಎರಡು ಟ್ಯಾಂಕರ್ ನೀರು ಸರಬರಾಜು ಮಾಡಬೇಕು, ಗ್ರಾಮದಲ್ಲಿ ಬೀದಿ ದೀಪಗಳ ವ್ಯವಸ್ಥೆ ಮಾಡ ಬೇಕು ಹಾಗೂ ಗ್ರಾಮಕ್ಕೆ ರಸ್ತೆಯನ್ನು ಮಾಡಿಸಬೇಕು ಎಂಬ ಬೇಡಿಕೆ ಈಡೇರಿಕೆಗೆ ಪ್ರತಿಭಟನೆ ನಡೆಸಲಾಗಿತ್ತು.

ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಹರಿಸುವುದಾಗಿ ಹೇಳಿ ಸಂಜೆಯಿಂದಲೇ ಗ್ರಾಮಕ್ಕೆ ನೀರು ಸರಬರಾಜು ಆರಂಭವಾಗಿತ್ತು. ಕೂಡಲೇ ಹೊಸ ಬೋರ್ ಕೊರೆಸಲು ಸ್ಥಳ ಗುರುತಿಸಲಾಗಿದ್ದು, ಬೋರ್ ಯಂತ್ರ ಕರೆಸಿ ಕೊರೆಸುವುದಾಗಿ ತಿಳಿಸಿದ್ದಾರೆ ಸಂಘಟನೆಯ ಮುಖಂಡರುಗಳಿಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದಿ ದೀಪಗಳನ್ನು ಅಳವಡಿಸುವುದು, ಸೇರಿ ಉಳಿದ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲಾಗುವುದಾಗಿ ಗ್ರಾಮದ ಜನರ ಮುಂದೆ ಬರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದು ಅಖಿಲ ಭಾರತ ಕೃಷಿ ಕಾರ್ಮಿಕರ ಸಂಘಟನೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ  ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಅಣ್ಣಾರಾವ್, ಅರಕೇರಾ ಉಪ ತಹಸೀಲ್ದಾರ್ ಮನೋಹರ್, ಕಂದಾಯ ನಿರೀಕ್ಷಕ ಉಮಾಶಂಕರ್, ಅಲ್ಲಾ ಬಾಕ್ಸ್ ಕ್ಯಾರಿಗ್ರಾ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜಶೇಖರ ನಾಯಕ್, ಮಾಜಿ ಅಧ್ಯಕ್ಷ ಕೃಷ್ಣ ನಾಯಕ್ ಪಾಟೀಲ್, ವಿ.ಎ.ಮಮತಾ ಹಾಗೂ ಎಐಕೆಕೆ ಎಂಎಸ್  ಜಿಲ್ಲಾ ಕಾರ್ಯದರ್ಶಿ ಮಲ್ಲನಗೌಡ, ಎ. ಐಡಿವೈಒ ಜಿಲ್ಲಾ ಅಧ್ಯಕ್ಷ ಚನ್ನಬಸವ ಜಾನೇಕಲ್ ರೈತ ಸಂಘದ ತಾಲೂಕು ಕಾರ್ಯದರ್ಶಿ ದುರ್ಗಣ್ಣ, ಅಡಕಲಗುಡ್ಡ, ಸಾಬಯ್ಯ, ಅಂಬರೀಶ, ಸಿಂಗೆರಿದೊಡ್ಡಿ ಗ್ರಾಮ ಘಟಕದ ಕಾರ್ಯದರ್ಶಿ, ತಿಮ್ಮಯ್ಯ ಸಿಂಗೆರಿದೊಡ್ಡಿ ಗ್ರಾಮ ಉಪಾಧ್ಯಕ್ಷ ನಾಗರಾಜ, ಗ್ರಾಮದ ಹಿರಿಯರು, ಮಹಿಳೆಯರು ನೂರಾರು ಜನರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...