ರಾಯಚೂರು | ಹೆಚ್ಚುವರಿ ಭೂಮಿ ಪ್ರಕರಣಗಳ ಮರು ವಿಚಾರಣೆ ಮಾಡಿ; ಸಂಘಟನೆಗಳ ಒತ್ತಾಯ

Date:

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಸಿಂಧನೂರು ತಾಲೂಕಿನ ಜವಳಗೇರಾ ನಾಡಗೌಡ ಎಂಬವರು ಅಕ್ರಮವಾಗಿ ವಶಪಡಿಸಿಕೊಂಡಿರುವ 62ಎಕರೆ ಹೆಚ್ಚುವರಿ ಭೂಮಿಯನ್ನು ಕೂಡಲೇ ಭೂಹೀನರಿಗೆ ವಿತರಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ ನಡೆಸುತ್ತಿರುವ ಪ್ರತಿಭಟನೆ 31ನೇ ದಿನಕ್ಕೆ ಕಾಲಿಟ್ಟಿದೆ.

ಸಿಂಧನೂರು ಸರ್ವೆ ನಂ. 419 ಮತ್ತು ಸುಲ್ತಾನಪೂರ ಸರ್ವೆ ನಂ.186ರಲ್ಲಿರುವ ನಾಡಗೌಡರ ಹೆಚ್ಚುವರಿ ಭೂಮಿಯನ್ನು ಎಲ್ಲಾ ಜಾತಿಯ ಭೂಹಿನರಿಗೆ ಹಂಚಿಕೆ ಮಾಡಬೇಕು. ಸರ್ಕಾರದ ಹೆಚ್ಚುವರಿ ಭೂಮಿಯನ್ನು ಕಬಳಿಸಿ ಸಾಗುವಳಿ ಮಾಡಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ, ಅಹೋರಾತ್ರಿ ಅನಿರ್ದಾಷ್ಟಾವಧಿ ಧರಣಿ ಕುಳಿತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

32ದಿನಗಳಿಂದ ಹಗಲು ರಾತ್ರಿ ಧರಣಿ ನಡೆಸಲಾಗುತ್ತಿದೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ. ಜಿಲ್ಲೆಯಾದ್ಯಂತ ಇರುವ ಹೆಚ್ಚುವರಿ ಭೂಮಿಯನ್ನು ಫಲಾನುಭವಿಗಳಿಗೆ ವಿತರಿಸಲು ಕೂಡಲೇ ಕ್ರಮವಹಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಬಳಿಕ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿ ಅವರಿಗೆ ಮನವಿ ರವಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಮುಖಂಡ ಆರ್. ಮಾನಸಯ್ಯ, ಅಮೀರ್ ಅಲಿ, ಆದಿ ನಗನೂರು, ಲಾಲು ಹಟ್ಟಿ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...