ರಾಯಚೂರು | ಟೋಲ್ ಗೇಟ್ ತೆರವುಗೊಳಿಸಲು ರಸ್ತಾ ರುಕೋ ಪ್ರತಿಭಟನೆ

Date:

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ರಸ್ತಾ ರುಕೊ ಪ್ರತಿಭಟನೆ ನಡೆಸಿತು.

ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ ಹೆದ್ದಾರಿ‌ವರೆಗೆ ‌ಅವೈಜ್ಞಾನಿಕವಾಗಿ ಟೋಲ್‌ಗೇಟ್ ನಿರ್ಮಾಣ ಮಾಡಿ ಹಣ ವಸೂಲಿ ಮಾಡುತ್ತಿರುವುದು ಸರಿಯಲ್ಲ. ಕಲ್ಮಲ್ ಮತ್ತು ತಿಂಥಣಿ ಬ್ರಿಡ್ಜ್ ರಾಜ್ಯ ಹೆದ್ದಾರಿಗೆ ಒಳಪಟ್ಟರೂ ತಾಲೂಕಿನಲ್ಲಿ ಹೇಳಿಕೊಳ್ಳುವಂತಹ ಯಾವುದೇ ಕಾರ್ಖಾನೆಗಳಾಗಲಿ, ವಾಣಿಜ್ಯ ವ್ಯಾಪಾರಗಳಲೀ ನಡೆಯುತ್ತಿಲ್ಲ. ರಾಜಕೀಯ ಲಾಭಕ್ಕಾಗಿ ಜನ ಪ್ರತಿನಿಧಿಗಳು 2010ರಲ್ಲಿ 192 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದ್ದ ಅದೇ ರಸ್ತೆಗೆ ಕೆಆರ್‌ಡಿಸಿಎಲ್ ನಿಂದ 70 ಕೋಟಿ ವೆಚ್ಚದಲ್ಲಿ ಪ್ಯಾಚ್ ವರ್ಕ್ ಡಾಂಬರೀಕರಣ ಮಾಡಿದ್ದಾರೆ. ಈ ಸಮಸ್ಯೆಗಳನ್ನು ಬಗರೆಹರಿಸುವುದು ಬಿಟ್ಟು ಟೋಲ್‌ ನಿರ್ಮಿಸಿ ಸಾಮಾನ್ಯ ಜನರಿಂದ ಹಣ ಪೀಕುತ್ತಿದ್ದಾರೆ” ಎಂದು ಸಂಘಟನೆಯ ಸದಸ್ಯರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

“ದೇವದುರ್ಗ ತಾಲೂಕಿನಲ್ಲಿ ಬಹುತೇಕ ಶೇ. 80 ರಷ್ಟು ರೈತರು ಕೂಲಿಕಾರರು ಮತ್ತು ಕಾರ್ಮಿಕರಿಂದ ಕೂಡಿದ್ದು ದಿನನಿತ್ಯ ಹೊಲದ ಕೆಲಸಗಳಿಗೆ ಸಾಮಗ್ರಿ ತರಲು, ಎಣ್ಣೆ, ಗೊಬ್ಬರ, ಬೀಜ, ದವಸ ಧಾನ್ಯಗಳನ್ನು ಮಾರಾಟ ಮಾಡಲು ಹಾಗೂ ಎತ್ತು, ಹಸು, ಕುರಿ, ಖರೀದಿಸಲು ಮಾರಾಟ ಮಾಡಲು ಪಕ್ಕದ ದೇವದುರ್ಗಕ್ಕೆ ಪ್ರತಿದಿನ ಹೋಗಬೇಕಾದ ಅನಿವಾರ್ಯತೆ ಇರುತ್ತದೆ. ಮತ್ತು ಇಲ್ಲಿ ಯಾವುದೇ ಬೃಹತ್ ಕೈಗಾರಿಕ ಕಂಪನಿಗಳು ಇರುವುದಿಲ್ಲ ಈಗಾಗಲೇ ರೈತರು ಬರಗಾಲ ಬೆಳೆ ನಷ್ಟ ಅತೀವೃಷ್ಟಿ ಮತ್ತು ಬೆಲೆ ಇಳಿಕೆಯಿಂದ ತತ್ತರಿಸಿ ಹೋಗಿದ್ದು ಕೃಷಿ ಕ್ಷೇತ್ರದಲ್ಲಿ ವರ್ಷಕ್ಕಿಂತಲೂ ಈ ವರ್ಷ ತಾಲ್ಲೂಕಿನ ರೈತರು ಬಹಳ ನಷ್ಟದ ಹಂಚಿನಲ್ಲಿದ್ದಾರೆ ಜೊತೆಗೆ ಇಷ್ಟಾದರೂ ಸರಕಾರದ ಅಚಾತುರ್ಯದ ನಿರ್ಧಾರದಿಂದ ಟೋಲ್ ಗೇಟ್ ನಿರ್ಮಿಸಿ ಇಲ್ಲಿನ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ” ಎಂದು ಆಕ್ರೋಶಿಸಿದರು.

ಟೋಲ್ ಗೇಟ್ ನಿಂದ ಇನ್ನೊಂದು ಟೋಲ್ ಗೇಟ್ ವರೆಗೂ ನಿರ್ಮಿಸಲು ಸುಮಾರು 50 ರಿಂದ 60 ಕಿ.ಮೀ. ಅಂತರ ಇರಬೇಕು. ಒಂದೇ ರಸ್ತೆ ತಿಂಥಣಿ ಬ್ರಿಜ್ ವರೆಗೆ ಕೇವಲ 73 ಕಿ.ಮೀ. ಅಂತರದಲ್ಲಿ 02 ಟೋಲ್ಲೇಟ್ ನಿರ್ಮಾಣ ಮಾಡುತ್ತಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ರಾಜ್ಯ ಸರಕಾರ ರೈತರಿಂದ ಹಗಲು ದರೋಡೆ ಮಾಡುವುದನ್ನು ನಿಲ್ಲಿಸಿ ಟೋಲ್ ಗೇಟನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿದರು.

ಸಾಂಕೇತಿಕ ಧರಣಿ ನಡೆಸಿ ಸ್ಥಳಕ್ಕೆ ರಾಯಚೂರು ಸಂಸದರಾದ ಜಿ ಕುಮಾರ ನಾಯ್ಕ ಅವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: ರಾಯಚೂರು | ಮಾದಕ ವಸ್ತು ಮಾರಾಟ ಜಾಲ ಕಡಿವಾಣಕ್ಕೆ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...


ಈ ವೇಳೆ ರೈತ ಸಂಘದ ರಾಜ್ಯ ಮುಖಂಡ ಚಾಮರಸ ಮಾಲಿ ಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಇಂಗಳದಾಳ, ಬೂದಯ್ಯ ಸ್ವಾಮಿ, ರತ್ನಮ್ಮ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...