ರಾಯಚೂರು | ರೈತರ ಒಂದೂವರೆ ಕೋಟಿ ಬೇರೆಯವರ ಖಾತೆಗೆ ಜಮಾ; ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

Date:

ರಾಷ್ಟ್ರೀಯ ಫಸಲ್‌ ಬಿಮಾ ಯೋಜನೆ ಅಡಿ ವಿಮಾ ಕಂತು ಪಾವತಿಸಿರುವ ರೈತರ ಹಣವನ್ನು ಬೇರೆಯವರ ಖಾತೆಗೆ ಜಮಾ ಮಾಡಿರುವ ಕೃಷಿ, ಕಂದಾಯ ಹಾಗೂ ವಿಮಾ ಕಂಪೆನಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ಸಮಗ್ರ ತನಿಖೆ ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು.

ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಷ್ಟ್ರೀಯ ಫಸಲ್ ಬಿಮಾ ಯೋಜನೆ ರೈತರಿಗೆ ಅನುಕೂಲವಾಗುವ ಬದಲು ವಿಮಾ ಕಂಪನಿಗಳಿಗೆ ಲಾಭದಾಯಕವಾಗಿದೆ. ವಿಮಾ ಕಂತು, ಜಮೀನು ರೈತರದ್ದಾಗಿದ್ದರೆ, ಪರಿಹಾರವನ್ನು ಮಾತ್ರ ಬೇರೆಯವರ ಖಾತೆಗೆ ಜಮಾ ಮಾಡಲಾಗಿದೆ” ಎಂದು ಆರೋಪಿಸಿದರು.

“ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದಲ್ಲಿ 1 ಕೋಟಿ ರೂ. ಹಾಗೂ ಹಳ್ಳಿ ಹೊಸೂರು ಗ್ರಾಮದ ರೈತರ 54 ಲಕ್ಷ ರೂ. ಪರಿಹಾರದ ಮೊತ್ತವನ್ನು ಬೇರೆಯವರ ಖಾತೆಗೆ ಜಮಾ ಮಾಡಲಾಗಿದೆ. ಆದರೆ ಕೃಷಿ ಅಧಿಕಾರಿಗಳು ರೈತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಪ್ಪಾಗಿ ಖಾತೆಗೆ ಜಮಾ ಮಾಡಿರುವುದು ಕೃಷಿ ಅಧಿಕಾರಿಗಳು, ವಿಮಾ ಕಂಪನಿಗಳು. ಅವರ ವಿರುದ್ಧ ಕೇಸ್ ದಾಖಲಿಸಬೇಕು. ರೈತರ ಪಹಣಿ, ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿ ಪಡೆಯುವ ವಿಮಾ ಕಂಪನಿ ನಷ್ಟ ಪರಿಹಾರವನ್ನು ಮಾತ್ರ ಸಂಬಂಧವೇ ಇಲ್ಲದವರ ಖಾತೆಗೆ ಜಮಾ ಮಾಡಿರುವುದರ ಹಿಂದ ಬಹುದೊಡ್ಡ ಅಕ್ರಮ ಇದೆ. ಕೂಡಲೇ ರಾಜ್ಯ ಸರ್ಕಾರ ಸಮಗ್ರ ತನಿಖೆಗೆ ವಿಶೇಷ ತಂಡ ರಚಿಸಬೇಕು” ಎಂದು ಒತ್ತಾಯಿಸಿದರು.

“ಕೃಷಿ ಇಲಾಖೆ ಜಂಟಿನಿರ್ದೇಶಕಿ ದೇವಿಕಾ ಎಂಬುವವರು ಅನೇಕ ಅಕ್ರಮಗಳಿಗೆ ಕಾರಣರಾಗಿದ್ದಾರೆ. ಫಸಲ್ ಬಿಮಾ ಯೋಜನೆ ಮಾತ್ರವಲ್ಲ, ಚೆಕ್‌ ಡ್ಯಾಂ ನಿರ್ಮಾಣ, ಯಂತ್ರೋಪಕರಣ ವಿತರಣೆ ಸೇರಿದಂತೆ ಬಹುತೇಕ ಯೋಜನೆಗಳಲ್ಲಿ ಭ್ರಷ್ಟಾಚಾರ ಎಸಗಿದ್ದು ಕೂಡಲೇ ತನಿಖೆ ನಡೆಸಬೇಕು” ಎಂದು ಆಗ್ರಹಿಸಿದರು.

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮಾನವಿ ತಾಲೂಕಿನಲ್ಲಿ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ಜೋಳ ಮಾರಾಟ ಮಾಡಿರುವ ರೈತರಿಗೆ 10 ಕೋಟಿ ರೂ. ಹಣವನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ. ಕೂಡಲೇ ಬಾಕಿ ಹಣ ಪಾವತಿಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

“ಅಕ್ಕಿ ಗಿರಣಿ  ಮಾಲೀಕರು ಎಪಿಎಂಸಿ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿದ್ದಾರೆ. ಕಾಯ್ದೆಗಳು ಕಿರುಕುಳ ನೀಡಲು ರೂಪಿಸಲಾಗುವುದಿಲ್ಲ. ಈ ಕುರಿತು ಸಿಎಂ ಭೇಟಿ ಮಾಡಿ ಚರ್ಚಿಸಲಾಗುವುದು. ಅಧಿಕಾರಿಗಳ ಬೇಜವಾಬ್ದಾರಿಯಿಂದ ಎಫ್‌ಸಿಐ ಗೋದಾಮುಗಳಲ್ಲಿ ಹುಳುಗಳ ಹಾವಳಿ ಹೆಚ್ಚಾಗಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ಬೂದೆಯ್ಯಸ್ವಾಮಿ ಗಬ್ಬೂರು, ದೇವರಾಜನಾಯಕ, ಮಲಣ್ಣ ದಿನ್ನಿ, ಬ್ರಹ್ಮಯ್ಯ ಆಚಾರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...