ರಾಯಚೂರು | ರಸ್ತೆ ಕಾಮಗಾರಿಗೆ ₹2 ಕೋಟಿ ಅನುದಾನ ಬಿಡುಗಡೆ; ಎರಡು ವರ್ಷವಾದರೂ ಆರಂಭವಾಗದ ಕಾಮಗಾರಿ

Date:

ಮಾನ್ವಿ ತಾಲ್ಲೂಕಿನ ಬಾಗಲವಾಡ ಗ್ರಾಮದ ಮುಖ್ಯರಸ್ತೆ ಕನಕ ಶ್ರೀ ಪೆಟ್ರೋಲ್ ಬಂಕ್ ನಿಂದ ಶಿವರಾಜ ಮಂತ್ರಿಕ ಇವರ ಮನೆಯವರೆಗೆ ಸುಮಾರು 2 ಕಿಲೋಮೀಟರವರೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿ ಎರಡು ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ ಎಂದು ಗ್ರಾಮಸ್ಥರು ಬೇಸತ್ತು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿದರು.

ಬಾಗಲವಾಡ ಗ್ರಾಮದ ಮುಖ್ಯ ರಸ್ತೆಯು ತೆಗ್ಗು , ಗುಂಡಿಗಳಿಂದ ಮಾರ್ಪಟ್ಟಿದೆ.ತಾಲ್ಲೂಕಿಗೆ ಹೋಗುವ ಮುಖ್ಯ ರಸ್ಥೆಯಾಗಿದ್ದು ಸಾವಿರಾರು ವಾಹನಗಳು ಓಡಾಡುತ್ತವೆ.ರಾತ್ರಿ ವೇಳೆ ತೆಗ್ಗು ಗುಂಡಿಗಳಿಗೆ ಬಿದ್ದು ಹಲವು ಭಯಾನಕ ಅಪಘಾತಗಳು ಸಂಭವಿಸಿವೆ.

ಮಳೆ ಬಂದಾಗ ರಸ್ತೆಯು ಕೆಸರು ಗದ್ದೆಯಂತಾಗುತ್ತದೆ ಸಾರ್ವಜನಿಕರಿಗೆ ರಸ್ತೆ ಓಡಾಡಲು ಕಷ್ಟವಾಗಿದೆ. ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ಸಮಸ್ಯೆಯಾಗಿ ಅಹಿತಕರ ಘಟನೆಗಳು ನಡೆದಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ವರ್ಷಗಳ ಹಿಂದೆ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಹಾಗೂ ಪಿ.ಡಬ್ಲ್ಯೂ.ಡಿ ಅಧಿಕಾರಿಗಳಾದ ಶಾಮೀಲಪ್ಪ ಗ್ರಾಮದ ಮುಖಂಡರು ಸೇರಿಕೊಂಡು ಗುದ್ದಲಿ ಪೂಜೆ ನೆರವೇರಿಸಿದರು ಇಲ್ಲಿಯವರೆಗೂ ಕಾಮಗಾರಿಯು ಪ್ರಾರಂಭವಾಗಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೆಲವು ದಿನಗಳ ಹಿಂದೆ ವಿವಿಧ ಸಂಘಟನೆಗಳು ಸೇರಿ ಪ್ರತಿಭಟನೆ ಹಮ್ಮಿಕೊಂಡಾಗ ಸಂಬಂಧಪಟ್ಟ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಂದು ವಾರದೊಳಗೆ ಬೇಡಿಕೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರು.ಹಲವು ಬಾರಿ ಗಮನಕ್ಕೆ ತಂದರು ಸ್ಪಂದಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧ ಪಟ್ಟ ಅಧಿಕಾರಿಗಳು ಕಾಮಗಾರಿ ಪ್ರಾರಂಭಿಸದೆ ಕಾಲಹರಣ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ಕೂಡಲೆ ಅಮಾನತ್ತುಗೊಳಿಸಬೇಕು , ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಲ್ಲನ ಗೌಡ್ ಪೊಲೀಸ್ ಪಾಟೀಲ್ , ಗುಂಡಪ್ಪ ಸಾಹುಕಾರ, ಬೀರಪ್ಪ ಸಾಹುಕಾರ , ಬಸವರಾಜ್ ಮೋಟಿ , ನಾಗರಾಜ್ ನಾಯ್ಕ ,ಮೌನೇಶ್ ಕೋರಿ , ಜಗದೀಶ್ ,ನಾಗರಾಜ್ ಹಿಂದಿನ ಮನೆ , ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...