ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Date:

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ ನಿಧಿ ಶಾಖೆ) ತಿಳಿಸಿದ್ದಾರೆ.

ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಪೈಪ್‌ಲೈನ್ ಒಡೆದು ಕುಡಿಯುವ ನೀರಿಗೆ ಚರಂಡಿ ನೀರು ಸೇರಿದ್ದು, ನೀರು ಕಲುಷಿತಗೊಂಡಿತ್ತು. ಈ ನೀರನ್ನು ಸೇವಿಸಿ 35ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ಅಲ್ಲದೇ ಐದು ವರ್ಷದ ಹನುಮಂತ ಎಂಬ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಕುಟುಂಬಕ್ಕೆ ಕಾನೂನುಬದ್ಧ ವಾರಸುದಾರರಿಗೆ ಪರಿಹಾರನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಮಂಜೂರು ಮಾಡಲಾಗಿದೆ.

ಜಿಲ್ಲಾ ಪಂಚಾಯತ್ ಸಿಇಒಗೆ ನೋಟಿಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಚೂರು ಜಿಲ್ಲೆಯ ದೇವದುರ್ಗ ಮತ್ತು ಲಿಂಗಸುಗೂರು ತಾಲೂಕುಗಳಲ್ಲಿ ಕಲುಷಿತ ನೀರು ಸರಬರಾಜಿನಿಂದ‌ ವಾಂತಿಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಅವರಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಿದ್ದಾರೆ.‌‌

ಸಿಇಒಗೆ ನೊಟೀಸ್ ಜಾರಿ
ಏಳು ದಿನಗಳೊಳಗೆ ಸಮಜಾಯಿಷಿ ನೀಡುವಂತೆ ಸಿಇಒಗೆ ನೋಟೀಸ್

ದೇವದುರ್ಗದ ರೇಕಲಮರಡಿ ಹಾಗೂ ಲಿಂಗಸುಗೂರಿನ ಗೊರೇಬಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥಗೊಂಡಿದ್ದಾರೆ. ರೇಕಮರಡಿಯಲ್ಲಿ ಒಬ್ಬ ಬಾಲಕ ಸಾವನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಜಲಕಾಯ್ದೆ 1974 ನಿಯಮ 24 ಮತ್ತು 25ರ ಪ್ರಕಾರ ಕಲುಷಿತ ನೀರು ಸರಬರಾಜು ಶಿಕ್ಷಾರ್ಹವಾಗಿದ್ದು, ಘಟನೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ವಿರುದ್ಧ ಈವರೆಗೆ ಏಕೆ ಕ್ರಮ ಕೈಗೊಳ್ಳಬಾರದು ಎಂಬುವುದಕ್ಕೆ ಏಳು ದಿನಗಳೊಳಗೆ ಸಮಜಾಯಿಷಿಗಳನ್ನು ನೀಡಬೇಕು ಎಂದು ಮಂಡಳಿ ಸೂಚನೆ ನೀಡಿದೆ.

ಯೋಗ್ಯವಲ್ಲದ ನೀರು : ಲಿಂಗಸುಗೂರು ತಾಲೂಕಿನ ಗೊರೇಬಾಳ ಗ್ರಾಮಕ್ಕೆ ಪೂರೈಸಿದ ನೀರು, ಕುಡಿಯಲು ಯೋಗ್ಯವಲ್ಲ ಎನ್ನುವ ವರದಿ ಬಯಲಾಗಿದೆ. ತಜ್ಞ ವೈದ್ಯರು ಗ್ರಾಮದಲ್ಲಿರುವ ಎರಡು ಕೊಳವೆ ಬಾವಿಯ ನೀರಿನ ಮಾದರಿಯನ್ನು ಪರೀಕ್ಷಿಸಿದ್ದು, ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜಾಗಿ ಜನ ಅಸ್ವಸ್ಥರಾಗಿರುವುದು ದೃಢಪಟ್ಟಿದೆ. ಇದೀಗ ಗ್ರಾಮಕ್ಕೆ ಕೊಳವೆಬಾವಿ ನೀರು ಸರಬರಾಜು ಮಾಡುವುದನ್ನು ಗ್ರಾಮ ಪಂಚಾಯತಿ ಸಿಬ್ಬಂದಿ ಸ್ಥಗಿತಗೊಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ದೇವದುರ್ಗ ತಾಲೂಕಿನ ರೇಕಲಮರಡಿಯಲ್ಲಿ ಕಲುಷಿತ ನೀರು ಕುಡಿದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ಮಂದಿ ಈಗ ಚೇತರಿಸಿಕೊಂಡಿದ್ದಾರೆ. ಯೋಗ್ಯವಲ್ಲದ ನೀರನ್ನು ಕುಡಿದ ಗ್ರಾಮಸ್ಥರು ವಾಂತಿ-ಭೇದಿಯಿಂದ ಅರಕೇರಾ, ದೇವದುರ್ಗ, ಸಿರವಾರ ಮತ್ತು ರಿಮ್ಸ್ ಬೋಧಕ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಅವರೆಲ್ಲರೂ ತಮ್ಮ ಮನೆಗಳಿಗೆ ಹಿಂತಿರುಗಿದ್ದಾರೆ. ಲಿಂಗಸುಗೂರಿನ ಗೊರೇಬಾಳದಲ್ಲಿ ಅಸ್ವಸ್ಥರಾದವರಿಗೆ ನಿರಂತರ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ಅವರೂ ಕೂಡ ಗುಣಮುಖರಾಗುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...