ರಾಯಚೂರು | ಬೀದಿನಾಯಿ ಹಾವಳಿ ತಡೆಗೆ ಸರ್ವೋದಯ ಕಟ್ಟಡ ಕಾರ್ಮಿಕರ ಸಂಘ ಆಗ್ರಹ

Date:

ಬೀದಿನಾಯಿ ದಾಳಿಗೆ ಯುವತಿ ಸಾವನ್ನಪ್ಪಿರುವುದು ಖಂಡನೀಯ. ಬೀದಿನಾಯಿ ಹಾವಳಿಗೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ರಾಯಚೂರು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ವೋದಯ ಕಟ್ಟಡ ಕಾರ್ಮಿಕರ ಸಂಘದಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.

“ರಾಯಚೂರು ನಗರದ ಮಡ್ಡಿಪೇಟೆ ಬಡಾವಣೆಯ ನಿವಾಸಿ ಮಹಾದೇವಿ ಎಂಬ ಯುವತಿ ಮನೆಯ ಮುಂದೆ ನಿಂತಿದ್ದಾಗ ಬೀದಿನಾಯಿ ಏಕಾಏಕಿ ದಾಳಿ ಮಾಡಿದ್ದರಿಂದ ಇಂದು ಆಕೆ ಅಸುನೀಗಿರುವುದು ಬೇಸರದ ಸಂಗತಿ. ನಾಯಿ ದಾಳಿಗೆ ಸಾವುಗಳು ಸಂಭವಿಸಿದರೂ ಜಿಲ್ಲಾಡಳಿತ ಎಚ್ಚರಗೊಳ್ಳದಿದ್ದರೆ ಏನೆಂದು ಭಾವಿಸಬೇಕು. ಯಾವ ಧೈರ್ಯದಲ್ಲಿ ಬೀದಿಯಲ್ಲಿ ಓಡಾಡುವುದು” ಎಂದು ಸಂಘಟನಾಕರರು ಅಸಮಾಧಾನ ವ್ಯಕ್ತಪಡಿಸಿದರು.

“ನಗರದ ರಸ್ತೆಗಳಲ್ಲಿ ವಾಹನ ಸವಾರರ ಮೇಲೆ ದಾಳಿ ಮಾಡುವುದಕ್ಕೆ ಮುಂದಾದಾಗ ಸಾಕಷ್ಟು ಗಂಭೀರ ಅಪಘಾತಗಳು ಸಂಭವಿಸಿವೆ. ಮಕ್ಕಳು ಶಾಲೆಗೆ ಹೋಗುವಾಗ ದಾಳಿ ಮಾಡಿ ಸಾವು ನೋವಿನಲ್ಲಿ ಸಾಗಿ ಸಾವಿರಾರು ಹಣ ಖರ್ಚು ಮಾಡಿದ್ದಾರೆ. ದಿನನಿತ್ಯ ಹಲವು ಪ್ರಕರಣಗಳು ಕಂಡುಬಂದರೂ ನಗರಸಭೆ ಎಚ್ಚೆತ್ತುಕೊಳ್ಳುತ್ತಿಲ್ಲ” ಎಂದು ಸಂಘಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಬೀದಿನಾಯಿ ದಾಳಿಯಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ಸಾವು

“ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳನ್ನು ಕೂಡಲೇ ಬೇರೆಕಡೆ ಸಾಗಿಸಬೇಕು. ತುರ್ತಾಗಿ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಅಧ್ಯಕ್ಷರು ತಿಮ್ಮಪ್ಪ ಸ್ವಾಮಿ, ಮಲ್ಲೇಶ ನಾಯಕ, ಮೈಲಾರಿ, ನಾರಾಯಣ, ಜಂಬಪ್ಪ, ಯಲ್ಲಪ್ಪ ಭಂಡಾರಿ, ಸಿದ್ದಪ್ಪ, ಯುವರಾಜ್, ರಮೇಶ್, ಸುಗೂರಪ್ಪ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...