ರಾಯಚೂರು | ಸಿಯಾತಲಾಬ್ ಬಡಾವಣೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

Date:

ರಾಯಚೂರು ನಗರದ ಸಿಯಾತಲಾಬ್ ಬಡಾವಣೆಯ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್)ಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಆಚರಿಸಿದರು.

ಸಾಂಸ್ಕೃತಿಕ ಸಂಘಟನೆಯ ರಾಯಚೂರು ಜಿಲ್ಲಾ ಸಂಚಾಲಕಿ ಸರೋಜ ಗೋನವಾರ್ ಮಾತನಾಡಿ, “ರಾಜ್ಯ ಸಮಿತಿಯಿಂದ ಜನವರಿ 3ರಿಂದ 18ರವರೆಗೆ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆಯನ್ನು ಮಹಿಳಾ ಶಿಕ್ಷಣ, ಉದ್ಯೋಗ, ಆರೋಗ್ಯ, ಭದ್ರತೆ ಖಾತ್ರಿಗಾಗಿ ಒತ್ತಾಯಿಸಲಾಗುತ್ತಿದೆ. ಭಾರತದಲ್ಲಿ ಮಹಿಳಾ ಶಿಕ್ಷಣದ ರೂವಾರಿ ಹಾಗೂ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರನ್ನು ಪ್ರತಿಯೊಬ್ಬ ಹೆಣ್ಣು ಮಗಳೂ ನೆನಪಿಸಿಕೊಳ್ಳಲೇಬೇಕು” ಎಂದು ಹೇಳಿದರು.

“ಸಾವಿತ್ರಿಬಾಯಿ ಫುಲೆಯವರು ಚಿಕ್ಕ ವಯಸ್ಸಿನಲ್ಲೇ ತನ್ನ ಪತಿ ಜ್ಯೋತಿಬಾ ಫುಲೆಯವರಿಂದ ಶಿಕ್ಷಣವನ್ನು ಕಲಿತು, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ, ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಶಿಕ್ಷಣದ ಅರಿವೇ ಇರದ ಕಾಲದಲ್ಲಿ ಮನುವಾದವನ್ನು ಮೆಟ್ಟಿನಿಂತು ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಲು ಕೇವಲ ನಾಲ್ಕು ವರ್ಷಗಳಲ್ಲಿ 18 ಶಾಲೆಗಳನ್ನು ತೆರೆದರು. ಸಮಾನತೆಯನ್ನು ಪಡೆಯಬೇಕಾದರೆ ಶಿಕ್ಷಣ ಬಹಳ ಮುಖ್ಯವೆಂಬುದು ಅರಿವಾದ ಕೂಡಲೇ ಸಾವಿತ್ರಿಬಾಯಿ ಫುಲೆಯವರು ಅದನ್ನು ತಮ್ಮ ಜೀವನದ ಗುರಿಯಾಗಿ ಒಪ್ಪಿಕೊಂಡರು‌” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅವೈಜ್ಞಾನಿಕ ಸೇತುವೆ ನಿರ್ಮಾಣದ ವಿರುದ್ಧ ರಸ್ತೆ ತಡೆ ಪ್ರತಿಭಟನೆ; 40ಕ್ಕೂ ಅಧಿಕ ಮಂದಿ ಬಂಧನ

“ಇಂದು ಶಿಕ್ಷಣ ವ್ಯಾಪಾರೀಕರಣವಾಗಿದೆ. ಬಡವರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಅಸಾಧ್ಯವಾಗಿದೆ. ಇಂತಹ ದಿನಗಳಲ್ಲಿ ಸಾವಿತ್ರಿಬಾಯಿ ಫುಲೆಯವರ ಶ್ರಮ, ಧೈರ್ಯ, ಸಾಹಸಗಳನ್ನು ಮೆಚ್ಚಲೇಬೇಕಾಗಿದೆ. ಇಂತಹ ಅವರ ಆದರ್ಶ ಗುಣಗಳನ್ನು ನಾವು ಮೈಗೂಡಿಸಿಕೊಳ್ಳಬೇಕಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಕವಿತಾ, ನಾಗವೇಣಿ, ಅನ್ನಪೂರ್ಣ, ರಂಗಮ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...