ರಾಯಚೂರು | ಪರಿಶಿಷ್ಟ ಜಾತಿಗಳ ಸಮೀಕ್ಷೆ ; ಮಾದಿಗ ನಮೂದಿಸಲು ಮನವಿ

Date:

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀಡಲು ರಚಿಸಲಾಗಿರುವ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗ ಮೇ 5 ರಿಂದ ಜಾತಿಗಣತಿ ನಡೆಸಲಿದ್ದು ಮಾದಿಗ ಸಮೂದಾಯ ಜನರು ಬೇರೆ ಬೇರೆ ಉಪಜಾತಿಗಳನ್ನು ನಮೂದಿಸುವ ಬದಲು ಮಾದಿಗ ಎಂದು ನಮೂದಿಸಬೇಕೆಂದು ಮೀಸಲಾತಿ ಹೋರಾಟ ಸಮಿತಿ ಸಂಚಾಲಕ ಜೆ.ಬಿ.ರಾಜು ಮನವಿ ಮಾಡಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ ಕಳೆದ 35 ವರ್ಷಗಳಿಂದ ಒಳ ಮೀಸಲಾತಿಗೆ ಆಗ್ರಹಿಸಿ ರಾಜ್ಯದಲ್ಲಿ ಹೋರಾಟ ನಡೆದಿದೆ. ಕೊನೆಗೂ ತಾರ್ಕಿಕ ಅಂತ್ಯ ಕಾಣುವ ದಿನಗಳು ಸಮೀಪಿಸಿವೆ. ಮನೆ ಮನೆಗೆ ಬರುವ ಗಣತಿದಾರರಿಗೆ ಕಲಂ 61 ರಲ್ಲಿ ಮಾದಿಗ ಎಂದ ನಮೂದಿಸಬೇಕಿದೆ. ಬೇರೆ ಬೇರೆ ಉಪಜಾತಿಗಳಿಂದ ಸಮೂದಾಯ ಜನರನ್ನು ಕರೆಯಲಾಗುತ್ತಿದ್ದು ಮಾದಿಗ ಎಂದು ನಮೂದಿಸಿದರೆ ಖಚಿತ ದತ್ತಾಂಶ ಸಂಗ್ರಹಕ್ಕೆ ಸಹಕಾರಿಯಾಗುತ್ತದೆ ಎಂದರು.

ಜಾತಿ ಗಣತಿ ನಡೆಯಲು ಸಮೂದಾಯ ಸಂಘಟಕರು ಗ್ರಾಮೀಣ ಪ್ರದೇಶಗಳಲ್ಲಿ ಸರಿಯಾದ ಜಾತಿ ನಮೂದಿಸಲು ಜಾಗೃತಿ ಮೂಡಿಸಲಾಗುತ್ತದೆ. ಮೇ 1 ರಂದು ಜಾಗೃತಿ ಜಾಥಾ ನಡೆಸಲಾಗುತ್ತದೆ. ಜಿಲ್ಲೆಯ ಎಲ್ಲಾ ತಾಲೂಕ, ಹೋಬಳಿ ಕೇಂದ್ರಗಳಿಗೆ ತೆರಳಿ ಸಮೂದಾಯ ಜನರಲ್ಲಿ ಅರಿವು ಮೂಡಿಸಲಾಗುತ್ತದೆ.ನಗರದ ಅಂಬೇಡ್ಕರ್ ವೃತ್ತದಿಂದ ಜಾಥಾ ಪ್ರಾರಂಭಗೊಳ್ಳುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ವೈಯಕ್ತಿಕ ದ್ವೇಷ ;ಕ್ಲರ್ಕ್ ಮೇಲೆ ಮಚ್ಚಿನಿಂದ ಕೊಲೆಗೆ ಯತ್ನ

ಎಂ ವಿರೂಪಾಕ್ಷಿ ಮಾತನಾಡಿ ಜಿಲ್ಲೆಯಲ್ಲಿ ನಡೆಯುವ ಜಾತಿ ಗಣತಿಯಿಂದ ಸಮೂದಾಯ ಜನರು ವಂಚಿತರಾಗದಂತೆ ಎಚ್ಚರವಹಿಸಬೇಕಿದೆ. ಸಮೂದಾಯ ಜನರಿಗೆ ತಿಳುವಳಿಕೆ ನೀಡಲು ಮೇ 1 ರಿಂದ ಪ್ರಾರಂಭವಾಗುವ ಜಾಗೃತಿ ಜಾಥಾವನ್ನು ಮಹಾನಗರ ಪಾಲಿಕೆ ಮಹಾಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ ಉದ್ಘಾಟಿಸಲಿದ್ದಾರೆ.

ಮತ್ತೊಬ್ಬ ಹೋರಾಟಗಾರ ಅಂಬಣ್ಣ ಆರೋಲಿಕರ ಮಾತನಾಡಿ ಮೇ 5 ರಿಂದ ಪ್ರಾರಂಭವಾಗುವ ಜಾತಿ ಗಣತಿ ಮೇ 31 ಕ್ಕೆ ಅಂತ್ಯಗೊಳ್ಳುತ್ತದೆ. ಸಮೂದಾಯ ಜನರ ಆಧಾರ ಕಾರ್ಡ, ಜಾತಿ ಪ್ರಮಾಣ ಪತ್ರ ಸೇರಿದಂತ ಇತರೆ ದಾಖಲೆಗಳನ್ನು ಪರಿಶೀಲಿಸಿ ಉಪ ಜಾತಿ ನಮೂದಿಸಲಾಗುತ್ತದೆ. ಸುಳ್ಳು ಮಾಹಿತಿ ನೀಡಲು ಅವಕಾಶವೇ ಇಲ್ಲ. ಸಮುದಾಯ ಜನರು ಗೊಂದಲಕ್ಕೆ ಒಳಗಾಗದೇ ಮಾದಿಗ ಎಂದು ನಮೂದಿಸಬೇಕು.ಸಮಾಜದ ಮುಖಂಡರುಗಳು ಸರಿಯಾದ ದಾಖಲೀಕರಣಕ್ಕೆ ಸಹರಿಸಬೇಕೆಂದರು.

ಈ ಸಂದರ್ಬದಲ್ಲಿ ನರಸಿಂಹಲು ಮಾಡಗಿರಿ, ಕೆ.ಪಿ.ಅನಿಲ್‌ಕುಮಾರ, ನರಸಪ್ಪ ಆಶಾಪುರು, ಶಂಕರಪ್ಪ ಹೊಸೂರು ಸೇರಿ ಅನೇಕರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...