ರಾಯಚೂರು | ಸರ್ಕಾರಿ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನೇಮಿಸಲು ಎಸ್ಎಫ್‌ಐ ಒತ್ತಾಯ

Date:

ಹೆಚ್ಚುವರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಲು ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಅತಿಥಿ ಶಿಕ್ಷಕರ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ರಾಯಚೂರು ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೂಲಕ ಆಗಮಿಸಿ, ಸರ್ಕಾರದ ವಿರುದ್ದ ಘೋಷಣೆ ಹಾಕಿದರು. ನಂತರ ಗ್ರೇಡ್ 2 ತಹಶೀಲ್ದಾರ್ ಪರಶುರಾಮ ಅವರಿಗೆ ಹಕ್ಕೊತ್ತಾಯ ಮನವಿ ಪತ್ರವನ್ನು ಸಲ್ಲಿಸಿದರು.

ಕಲ್ಯಾಣ ಕರ್ನಾಟಕದಲ್ಲಿ 14,107 ಶಿಕ್ಷಕರ ಹುದ್ದೆ ಖಾಲಿ ಇವೆ. ಕನಿಷ್ಟ 10,000 ಅಧಿಕವಾಗಿ ಪ್ರಾಥಮಿಕ ಮತ್ತು ಪ್ರೌಢ(ಮಾಧ್ಯಮಿಕ) ಶಿಕ್ಷಕರ ನೇಮಕಾತಿಯನ್ನು ಹೆಚ್ಚಿಸಬೇಕು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಮತ್ತು ಪ್ರೌಢಶಾಲೆ ಶಿಕ್ಷಕರು 3500 ಸೇರಿದಂತೆ ಒಟ್ಟು 14,107ಹುದ್ದೆಗಳು ಖಾಲಿ ಇದ್ದು, ಅಂದರೆ ಡಿ.ಎಡ್ ಪದವೀಧರರಿಗೆ 4428 ಹುದ್ದೆಗಳು, ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗಳು 78 ಹುದ್ದೆಗಳು ಪ್ರೌಢಶಾಲಾ ಶಿಕ್ಷಕರ 121 ಹುದ್ದೆಗಳ ನೇಮಕ ಅವೈಜ್ಞಾನಿಕವಾಗಿದೆ. ಆದ್ದರಿಂದ ಖಾಲಿ ಇರುವ ಹುದ್ದೆಗಳಿಗೆ ಶೇ.80ರಷ್ಟು ಶಿಕ್ಷಕರ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಿ ಕಲ್ಯಾಣ ಕರ್ನಾಟಕ ಪ್ರದೇಶವನ್ನು ಶೈಕ್ಷಣಿಕವಾಗಿ ಬಲಗೊಳಿಸಬೇಕು. ಕಳೆದ 2022ರ ನೇಮಕಾತಿಯಲ್ಲಿ ಉಳಿಕೆ ಸ್ಥಾನಗಳು 800-900 ಸೇರಿಸಿ ನೇಮಕಾತಿ ಮಾಡಬೇಕು. ಇದಕ್ಕೆ ಹಣಕಾಸು ಇಲಾಖೆ ಅನುಮತಿ ಬೇಕಾಗಿರುವುದಿಲ್ಲ ಹಾಗೂ 2022-23 ರ ಹಣಕಾಸು ಇಲಾಖೆ 2300 ಹೈಸ್ಕೂಲ್ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಅದನ್ನು ಕೂಡ ನೇಮಕಾತಿ ಮಾಡಬೇಕು ಎಂದು ಮನವಿ ಮಾಡಿದರು. ಪದವಿ ಮತ್ತು ಬಿ.ಎಡ್ ಅಂಕಗಳನ್ನು ಕೈಬಿಟ್ಟು ಸಿಇಟಿ, ಮತ್ತು ಟಿಇಟಿ ಅಂಕಗಳನ್ನು ಮೆರಿಟ್ ಪಟ್ಟಿಗೆ ಪರಿಗಣಿಸಬೇಕೆಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಮೂಡಿಗೆರೆ | ಸಮುದಾಯ ಭವನವನ್ನೇ ದಾಸ್ತಾನನ್ನಾಗಿಸಿಕೊಂಡು ದುರ್ಬಳಕೆ ಮಾಡಿಕೊಂಡ ಗುತ್ತಿಗೆದಾರ!

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಮೇಶ ವೀರಾಪುರ, ಪವನ್ ಕುಮಾರ್ ಕಮದಾಳ, ಖಾಸೀನಾಥ್,ರಂಗಪ್ಪ ನಾಯಕ , ಚಂದ್ರು ಎಂ , ಮಹಾಲಿಂಗ ದೊಡ್ಡಮನಿ, ಖಾಸಿಂ ಪಟೇಲ್, ಅಮೀರ್ ಬಹದ್ದೂರು, ಈರನಗೌಡ, ದೇವೇಂದ್ರ, ಶರಣು, ರಾಜೇಶ್ವರಿ, ಶಿವಾನಂದ, ಆಂಜನಪ್ಪ, ಸುರೇಶ್, ವೆಂಕಟೇಶ ಈರೆಡ್ಡಿ, ಮಹಾದೇವಿ ಅನೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...