ರಾಯಚೂರು | ಯಲಗಟ್ಟಾ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡರ ಅಮಾನತಿಗೆ ಎಸ್‌ಎಫ್‌ಐ ಆಗ್ರಹ

Date:

ರಾಯಚೂರು ಜಿಲ್ಲೆಯ ಯಲಾಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಿರಂತರ ಗೈರಾಗುತ್ತಿರುವುದರಿಂದ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಲಿಂಗಸಗೂರು ತಾಲೂಕು ಸಮಿತಿ ನೇತೃತ್ವದಲ್ಲಿ ಶಾಲೆ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು ಮಾತನಾಡಿ, “ಜಿಲ್ಲೆಯ ಲಿಂಗಸಗೂರು ತಾಲೂಕಿನ ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ನಾಗನಗೌಡ ಅವರು ಎರಡು ವರ್ಷಗಳಿಂದ ಶಾಲೆಗೆ ನಿರಂತರವಾಗಿ ಅನಧಿಕೃತವಾಗಿ ಗೈರಾಗುತ್ತಿದ್ದು, ಶಾಲೆಯ ಮಕ್ಕಳ ವಿದ್ಯಾಭ್ಯಾಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಬಗ್ಗೆ ಅನೇಕ ಬಾರಿ ಎಸ್ಎಫ್ಐ, ಎಸ್‌ಡಿಎಂಸಿ ಹಾಗೂ ಅನೇಕ ಸಂಘಟನೆಗಳು ದೂರು ನೀಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಿಕ್ಷಣ ಇಲಾಖೆ ರಾಜಕೀಯ ಒತ್ತಡಕ್ಕೆ ಮಣಿದಿದ್ದು, ತಪ್ಪತಸ್ತ ಮುಖ್ಯಶಿಕ್ಷಕರ ವಿರುದ್ಧ ಯಾವುದೇ  ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಲಗಟ್ಟಾ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಮುಖ್ಯ ಗುರುಗಳಾಗಿ ಬಂದ ದಿನದಿಂದಲೂ ಅವರು ನಿರಂತರ ಗೈರಾಗಿದ್ದಾರೆ. ಕೇವಲ ಧ್ವಜಾರೋಹಣ ಹಾಗೂ ಕೆಲವೊಂದು ಜಯಂತಿಗಳನ್ನು ಆಚರಿಸಲು ಮಾತ್ರ ಹಾಜರಿರುತ್ತಾರೆ. ಕೆಲ ಹೊತ್ತಿನಲ್ಲೇ ತರಾತುರಿಯಲ್ಲಿ ಜಾಗ ಖಾಲಿ ಮಾಡುತ್ತಾರೆ. ಇದರಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 68 ವಿದ್ಯಾರ್ಥಿಗಳ ಪೈಕಿ 33 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದರಿಂದ ಗ್ರಾಮದ ಶಾಲೆ ಅಳಿವಿನ ಅಂಚಿಗೆ ಹೋಗುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಎಸ್ಎಫ್ಐ ತಾಲೂಕು ಕಾರ್ಯದರ್ಶಿ ಪವನ್ ಕಮದಾಳ ಮಾತನಾಡಿ, “ಈ ಹಿಂದೆ ಬಿಇಒ ಅವರಿಗೆ ದೂರು ನೀಡಿದಾಗ ಆತನಿಗೆ ನಾವು ಏನೂ ಮಾಡೋಕೆ ಆಗುವುದಿಲ್ಲ. ಆತ ರಾಜಕೀಯ ಒತ್ತಡ ತರುತ್ತಾನೆ. ಆತನ ಸಮಸ್ಯೆ ಬಿಟ್ಟು ಬೇರೆ ಏನು ಬೇಕಾದರೂ ಹೇಳಿ ಎಂದು ಉಡಾಫೆ ಉತ್ತರ ನೀಡಿದ್ದರು. ಇಂತಹ ಬೇಜವಾಬ್ದಾರಿ ಅಧಿಕಾರಿಯಿಂದ ನಮ್ಮ ತಾಲೂಕಿನಲ್ಲಿ ಶಿಕ್ಷಣ ವ್ಯವಸ್ಥೆ ಹದಗೆಟ್ಟು ಹೋಗಿದೆ. ಆದ್ದರಿಂದ ಈ ಕೂಡಲೇ ಮುಖ್ಯಶಿಕ್ಷಕ ನಾಗನಗೌಡ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

“ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಅಗತ್ಯ ಖಾಯಂ ಶಿಕ್ಷಕರನ್ನು ನೇಮಕ ಮಾಡಬೇಕು. ಶಾಲೆಗೆ ಬೇಕಾದ ಎಲ್ಲ ಅಗತ್ಯ ಮೂಲ ಸೌಕರ್ಯಗಳನ್ನು ನೀಡಬೇಕು” ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಪರವಾಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಲಿಂಗಸಗೂರು ತಾಲೂಕು ಮುಖಂಡರಾದ ವಿನಯ್ ಕುಮಾರ, ಮಹಾಲಿಂಗ, ಬಸವರಾಜ, ಒಡಕೇಶ್, ಶ್ರೀನಿವಾಸ್, ಕರಿಯಪ್ಪ ವಾಡಿಗೇರಿ, ವಿನೋದ್ ರಾಜ್, ಕೆಪಿಆರ್‌ಎಸ್ ತಾಲೂಕು ಮುಖಂಡ ನಿಂಗಪ್ಪ ಎಂ, ವಿವಿಧ ಸಂಘಟನೆಗಳ ಮುಖಂಡರಾದ ಅಣ್ಣಯ್ಯ, ಶಿವಶಂಕರ, ರಾಜು ನಾಯಕ, ಅಮರೇಶ, ಗ್ರಾಮಸ್ಥರಾದ ವೆಂಕಣ್ಣ ಕೋಲ್ಕರ್, ಶಿವು ಪಿ ಜಿ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...