ರಾಯಚೂರು | ದುರಸ್ತಿ ವೇಳೆ ಶಾಕ್; ಜೆಸ್ಕಾಂ ಸಿಬ್ಬಂದಿಗೆ ಗಾಯ

Date:

ವಿದ್ಯುತ್ ದುರಸ್ತಿ ಕಾರ್ಯ‌ ಕೈಗೊಂಡಿದ್ದ ವೇಳೆ ಜೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡ ಘಟನೆ ರಾಯಚೂರು ನಗರದ ಹೊರವಲಯದಲ್ಲಿ ನಡೆದಿದೆ.

ಗಾಯಗೊಂಡ ಜೆಸ್ಕಾಂ ಸಿಬ್ಬಂದಿಯನ್ನು ವೀರೇಶ ಎಂದು ಗುರುತಿಸಲಾಗಿದೆ. ನಗರದ ಹೊರವಲಯದ 110 ಕೆ.ವಿ ವಡವಟ್ಟಿ ವಿದ್ಯುತ್ ಉಪ‌ಕೇಂದ್ರದ‌ ದುರಸ್ತಿ ಕಾರ್ಯ ಮಾಡುವ ವೇಳೆ ವೀರೇಶಗೆ ಶಾಕ್ ಹೊಡೆದಿದೆ ಎನ್ನಲಾಗಿದೆ.

ಗದ್ವಾಲ್ ರಸ್ತೆಯ‌ ದೇವಿನಗರ, ಎನ್‌ಜಿಒ ಕಾಲೋನಿ, ಬಸವನ ಬಾವಿ, ನೀರಭಾವಿಕುಂಟಾ‌ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ವಿದ್ಯುತ್ ಉಪ ಕೇಂದ್ರದ ದುರಸ್ತಿ ಮಾಡುವಾಗ ಒಂದೇ ಕಂಬಕ್ಕೆ ಬೇರೆ ಬೇರೆ ಶಾಖೆಯ ವಿದ್ಯುತ್ ಲೈನ್ ಎಳೆದಿರುವುದು ಈ ಅವಘಡಕ್ಕೆ ಕಾರಣ ಎಂದು ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಯಚೂರು | ಸಂವಿಧಾನದಲ್ಲಿ ನಮಗೂ ಹಕ್ಕಿದೆ, ನಮಗೂ ಗೌರವ ಕೊಡಿ: ಅಕ್ಕಯ್ ಪದ್ಮಶಾಲಿ

ವಿದ್ಯುತ್ ಅವಘಡಕ್ಕೀಡಾದ ವೀರೇಶ ಅವರ ಹೊಟ್ಟೆ ಹಾಗೂ ಕಾಲಿನ ಭಾಗ ಸುಟ್ಟಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...