ರಾಯಚೂರು | ಕೊಲೆ ಪ್ರಕರಣ: ಮೂವರಿಗೆ ಗಲ್ಲು, ಒಂಬತ್ತು ಮಂದಿಗೆ ಜೀವಾವಧಿ

Date:

ಸಿಂಧನೂರು ತಾಲೂಕಿನಲ್ಲಿ‌ ನಡೆದ ಒಂದೇ ಕುಟುಂಬದ 5 ಜನರ ಕೊಲೆ ಹಾಗೂ ಇಬ್ಬರ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ‌ಆದೇಶಿಸಿದೆ.

ಸಿಂಧನೂರು ಪೀಠಾಸೀನ ನ್ಯಾಯಾಧೀಶರಾದ ಬಿ.ಬಿ ಜಕಾತಿ ಅವರು ವಿಚಾರಣೆ ನಡೆಸಿ ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ತೀರ್ಪು ನೀಡಿದ್ದಾರೆ.

2020ರ ಜುಲೈ 11 ರಂದು ತನ್ನ ಮಗಳಾದ ಮಂಜುಳಾಳನ್ನು ಮೌನೇಶ ಎಂಬ ಯುವಕ ಪ್ರೀತಿಸಿದ ಎಂಬ ಕಾರಣಕ್ಕೆ ಜಿಲ್ಲೆಯ ಸಿಂಧನೂರು ನಗರದ ಸುಕಾಲಪೇಟೆಯ ಬಡಾವಣೆಯ ಹಿರೇಲಿಂಗೇಶ್ವರ ಕಾಲೊನಿಯಲ್ಲಿ ಯುವಕನ ಮನೆಗೆ ನುಗ್ಗಿ ಆತನ ತಂದೆ ಈರಪ್ಪ, ಈರಪ್ಪನ ಪತ್ನಿ ಸುಮಿತ್ರಮ್ಮ, ಮಕ್ಕಳಾದ ನಾಗರಾಜ, ಹನುಮೇಶ ಹಾಗೂ ಮಗಳು‌ ಶ್ರೀದೇವಿ ಅವರನ್ನು ಆರೋಪಿಗಳಾದ ಸಣ್ಣ ಫಕೀರಪ್ಪ ತಂದೆ ಸೋಮಪ್ಪ ಕೊನದವರ, ಅಂಬಣ್ಣ ಸೋಮಪ್ಪ ಕೋನದವರ, ಸೋಮಶೇಖರ ತಂದೆ ಹಿರೇಫಕೀರಪ್ಪ ಸೇರಿಕೊಂಡು ಅಕ್ರಮ‌ ಕೂಟ ರಚಿಸಿ ಬಡಿಗೆಗಳಿಂದ ಹೊಡೆದು 5 ಜನರನ್ನು ಕೊಲೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇಖಾ, ಗಂಗಮ್ಮ, ದೊಡ್ಡ ಫಕೀರಪ್ಪ, ಸೋಮಪ್ಪ ಕೊನದವರ, ಹನುಮಂತಪ್ಪ, ಸೋಮಪ್ಪ, ಹೋನೂರಪ್ಪ, ಸೋಮಪ್ಪ, ಬಸವಲಿಂಗಪ್ಪ ದೊಡ್ಡ ಫಕೀರಪ್ಪ, ಅಮರೇಶ, ಬಸಬಲಿಂಗಪ್ಪ, ದೊಡ್ಡ ಫಕೀರಪ್ಪ ಅವರು ಕೊಲೆಯಲ್ಲಿ ಭಾಗಿಯಾಗಿದ್ದರು. ಘಟನೆಯಲ್ಲಿ ಈರಪ್ಪನ ಸೊಸೆ ರೇವತಿ ಹಾಗೂ ಮಗಳು ತಾಯಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಗಾಳಿ-ಮಳೆಗೆ ನೆಲಕಚ್ಚಿದ ಸಜ್ಜೆ, ಭತ್ತ; ರೈತರು ಕಂಗಾಲು

ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಸಿಪಿಐ ಬಾಲಚಂದ್ರ ಲಖ್ಕಂ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಸಾಕ್ಷಿ, ದಸ್ತಾವೇಜುಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಅಪರಾಧಿ ಸಣ್ಣ ಫಕೀರಪ್ಪ, ಅಂಬಣ್ಣ ಸೋಮಶೇಖರ, ಪರಸಪ್ಪ ಹಾಗೂ ಶಿವರಾಜ್ ಅವರಿಗೆ ಗಲ್ಲು ಶಿಕ್ಷೆ ಹಾಗೂ 47 ಸಾವಿರ ರೂಪಾಯಿ ದಂಡ ಹಾಗೂ 9 ಆರೋಪಿಗಳಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 97,500 ರೂ ದಂಡ ವಿಧಿಸಿದೆ.

ಸರ್ಕಾರದ ಪರವಾಗಿ ಅಭಿಯೋಜನ ಆರ್ ಎ.ಗಡಕರಿ ವಾದ ಮಂಡಿಸಿದ್ದರು. ಮಹಿಳಾ ಪಿ.ಸಿ ಕೆಂಚಮ್ಮ, ಪಿಸಿ ಬೂದೆಪ್ಪ‌ ಸರಿಯಾದ ಸಮಯಕ್ಕೆ ಸಾಕ್ಷಿದಾರರನ್ನು‌ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಕುರಿತು ಎಸ್ ಪಿ.‌ಎಂ ಪುಟ್ಟಮಾದಯ್ಯ ಅವರು ಮಾತನಾಡಿ, ಪೊಲೀಸರು ಸಕಾಲಕ್ಕೆ ಸರಿಯಾಗಿ ತನಿಖೆ ನಡೆಸಿ ಸಾಕ್ಷಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರಿಂದ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...